Hindenburg Case:ಅದಾನಿಗೆ ಸೆಬಿ ಕ್ಲೀನ್ ಚಿಟ್ ಎತ್ತಿಹಿಡಿದ ಸುಪ್ರೀಂ, SIT ತನಿಖೆಗೆ ನಕಾರ
ಸುಪ್ರೀಂಕೋರ್ಟ್ ಪೀಠ ಕಳೆದ ವರ್ಷ ನವೆಂಬರ್ 24ರಂದು ತೀರ್ಪನ್ನು ಕಾಯ್ದಿರಿಸಿತ್ತು.
Team Udayavani, Jan 3, 2024, 11:52 AM IST
ನವದೆಹಲಿ: ಅದಾನಿ-ಹಿಂಡನ್ ಬರ್ಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಬಿ ತನಿಖೆಯಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ಬುಧವಾರ (ಜನವರಿ 03) ನಿರಾಕರಿಸುವ ಮೂಲಕ ಸೆಬಿ ಕ್ಲೀನ್ ಚಿಟ್ ಅನ್ನು ಎತ್ತಿಹಿಡಿದಿದೆ. ಈ ಪ್ರಕರಣದಲ್ಲಿ ತನಿಖೆಯನ್ನು ಸೆಬಿಯಿಂದ ಎಸ್ ಐಟಿಗೆ ವರ್ಗಾಯಿಸಲು ಯಾವುದೇ ಆಧಾರವಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ.
ಇದನ್ನೂ ಓದಿ:Belagavi: ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆಗೈದ ಕೀಚಕರು! ತಡವಾಗಿ ಬೆಳಕಿಗೆ ಬಂದ ಘಟನೆ
ಅದಾನಿ ಸಮೂಹ ಸಂಸ್ಥೆಗಳ ಷೇರುದರದಲ್ಲಿ ವಂಚನೆ ನಡೆದಿದೆ ಎಂಬ ಹಿಂಡನ್ ಬರ್ಗ್ ವರದಿಯ ಆರೋಪಕ್ಕೆ ಸಂಬಂಧಿಸಿದಂತೆ ಸಲ್ಲಿಸಲ್ಪಟ್ಟ ಹಲವು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿತ್ತು.
ಅದಾನಿ-ಹಿಂಡನ್ ಬರ್ಗ್ ಪ್ರಕರಣದ ಕುರಿತು ನಾಲ್ಕು ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸಿಜೆಐ ಡಿ.ವೈ ಚಂದ್ರಚೂಡ್, ಜಸ್ಟೀಸ್ ಜೆಬಿ ಪಾರ್ಡಿವಾಲಾ ಮತ್ತು ಜಸ್ಟೀಸ್ ಮನೋಜ್ ಮಿಶ್ರಾ ನೇತೃತ್ವದ ಪೀಠ ಈ ತೀರ್ಪನ್ನು ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರಾದ ವಿಶಾಲ್ ತಿವಾರಿ, ಎಂ.ಎಲ್.ಶರ್ಮಾ ಮತ್ತು ಕಾಂಗ್ರೆಸ್ ಮುಖಂಡ ಜಯ ಠಾಕೂರ್ ಮತ್ತು ಅನಾಮಿಕಾ ಜೈಸ್ವಾಲ್ ಸಲ್ಲಿಸಿದ್ದ ಪಿಐಎಲ್ ನ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಪೀಠ ಕಳೆದ ವರ್ಷ ನವೆಂಬರ್ 24ರಂದು ತೀರ್ಪನ್ನು ಕಾಯ್ದಿರಿಸಿತ್ತು.
ಅದಾನಿ ಸಮೂಹ ಸಂಸ್ಥೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಜೊತೆ ನಿಕಟ ಸಂಪರ್ಕ ಹೊಂದಿದ್ದು, ಹಿಂಡನ್ ಬರ್ಗ್ ವರದಿ ಬಹಿರಂಗದ ನಂತರ ಅದಾನಿ ಗ್ರೂಪ್ ನ ಷೇರುಗಳ ಬೆಲೆ ಭಾರೀ ಕುಸಿತ ಕಂಡಿರುವುದಾಗಿ ಪಿಐಎಲ್ ನಲ್ಲಿ ಆರೋಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
PU ಕಂಪ್ಯೂಟರ್ ಸೈನ್ಸ್, ಸೈಕಾಲಜಿಗೂ ಎನ್ಸಿಇಆರ್ಟಿ ಪಠ್ಯ
ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು
Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ
Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ