Finance: ಚುನಾವಣೆ ಹೊಸ್ತಿಲಲ್ಲೇ ಕೇಂದ್ರದ ಜತೆಗೆ ರಾಜ್ಯದ ಕರ ಸಮರ

ರಾಜ್ಯದ ಮೇಲಾಗಿರುವ ಆರ್ಥಿಕ ಅಡ್ಡಪರಿಣಾಮಗಳ ಬಗ್ಗೆ 16ನೇ ಹಣಕಾಸು ಆಯೋಗ ಹಾಗೂ ಕೇಂದ್ರದ ಮುಂದೆ ವಾದ ಮಂಡಿಸಲು ನಿರ್ಧಾರ

Team Udayavani, Jan 6, 2024, 12:06 AM IST

MONEY GONI

ಬೆಂಗಳೂರು: ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಕೇಂದ್ರ ಸರಕಾರದ ಜತೆಗೆ “ಕರಸಮರ’ಕ್ಕೆ ಮುಂದಾಗಿರುವ ರಾಜ್ಯ ಸರಕಾರ 14 ಹಾಗೂ 15ನೇ ಹಣಕಾಸು ಆಯೋಗದ ಶಿಫಾರಸುಗಳಿಂದ ರಾಜ್ಯದ ಮೇಲಾಗಿರುವ ಆರ್ಥಿಕ ಅಡ್ಡಪರಿಣಾಮಗಳ ಬಗ್ಗೆ 16ನೇ ಹಣಕಾಸು ಆಯೋಗ ಹಾಗೂ ಕೇಂದ್ರದ ಮುಂದೆ ಸಮರ್ಥ ವಾದ ಮಂಡಿಸಲು ನಿರ್ಧರಿಸಿದೆ.

ಈ ಸಂಬಂಧ ಕೇಂದ್ರದ ಮೇಲೆ ಒತ್ತಡ ಹೇರಲು ಮೂವರು ಸದಸ್ಯರನ್ನು ಒಳಗೊಂಡ ತಾಂತ್ರಿಕ ಕೋಶವನ್ನು ವಿತ್ತೀಯ ಕಾರ್ಯನೀತಿ ಸಂಸ್ಥೆಯಲ್ಲಿ ಸ್ಥಾಪಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಂಪುಟ ಸಭೆಯಲ್ಲಿ ಸುದೀರ್ಘ‌ ಚರ್ಚೆ ನಡೆದಿದ್ದು, ಕೇಂದ್ರದ ನೀತಿಯ ಬಗ್ಗೆ ಭಾರೀ ಆಕ್ಷೇಪ ವ್ಯಕ್ತವಾಗಿದೆ. ತೆರಿಗೆ ರೂಪದಲ್ಲಿ ಸಂಗ್ರಹವಾಗುತ್ತಿದ್ದ ಹಣವನ್ನು ಕಳೆದ 5 ವರ್ಷದಿಂದ ಕೇಂದ್ರ ಸೆಸ್‌, ಸರ್ಚಾರ್ಜ್‌ ಎಂಬಿತ್ಯಾದಿ ಹೆಸರಿನಲ್ಲಿ ಕರವಾಗಿ ಮಾರ್ಪಡಿಸಿರುವುದರಿಂದ ರಾಜ್ಯಕ್ಕೆ ವಾರ್ಷಿಕ 8,200 ಕೋಟಿ ರೂ. ನಷ್ಟವಾಗುತ್ತಿದೆ. ಒಟ್ಟಾರೆಯಾಗಿ ಕೇಂದ್ರದಿಂದ ರಾಜ್ಯಕ್ಕೆ ವಿವಿಧ ಬಾಬ್ತುಗಳಿಂದ ಸುಮಾರು 70 ಸಾವಿರ ಕೋಟಿ ರೂ. ಆರ್ಥಿಕ ಖೋತಾ ಆಗಿದೆ ಎಂದು ಸಂಪುಟ ಸಭೆಯಲ್ಲಿ ಲೆಕ್ಕ ಹಾಕಲಾಗಿದೆ.

ಸಂಪುಟ ಸಭೆಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ ಕಂದಾಯ ಸಚಿವ ಕೃಷ್ಣಬೈರೇಗೌಡ, ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಹಾಗೂ ರಾಜ್ಯದ ಹೋರಾಟಗಳ ಬಗ್ಗೆ ಸುದೀರ್ಘ‌ ಮಾಹಿತಿ ನೀಡಿದ್ದಾರೆ.

ಅನ್ಯಾಯ ಎಲ್ಲೆಲ್ಲಿ ?
– ದೇಶದಲ್ಲಿ ಎರಡನೇ ಹೆಚ್ಚು ತೆರಿಗೆ ಪಾವತಿಸುವ ರಾಜ್ಯ ಕರ್ನಾಟಕ. ವಾರ್ಷಿಕ 4 ಲಕ್ಷ ಕೋಟಿ ರೂ. ಕೇಂದ್ರಕ್ಕೆ ಸಲ್ಲಿಕೆಯಾಗುತ್ತಿದ್ದರೆ 70 ಸಾವಿರ ಕೋಟಿ ರೂ. ಮಾತ್ರ ವಾಪಸ್‌ ಬರುತ್ತಿದೆ. ಇದು 100ರೂ.ನಲ್ಲಿ 12 ರೂ. ಮಾತ್ರ.

– ರಾಜ್ಯದ ಐಟಿ ಕ್ಷೇತ್ರದಿಂದ ಮೂರೂವರೆ ಲಕ್ಷ ಕೋಟಿ ರೂ. ರಫ್ತಾಗುತ್ತಿದ್ದು ಡಾಲರ್‌ ರೂಪದಲ್ಲಿ ವರಮಾನ ತಂದುಕೊಡುತ್ತಿದೆ. ಇದಕ್ಕೆ ಪ್ರತಿಯಾಗಿ ರಾಜ್ಯಕ್ಕೆ ನ್ಯಾಯ ಸಿಗುತ್ತಿಲ್ಲ.

– 14 ನೇ ಹಣಕಾಸು ಆಯೋಗದ ಅವಧಿಯಲ್ಲಿ ಕೇಂದ್ರದಿಂದ ರಾಜ್ಯಗಳಿಗೆ ಸೇ. 4.71 ತೆರಿಗೆ ಪಾಲು ಬರುತ್ತಿತ್ತು. 15 ನೇ ಆಯೋಗದಲ್ಲಿ 3.64ಕ್ಕೆ ಇಳಿದಿದೆ. ಇದರಿಂದ ಕೇಂದ್ರದಿಂದ ಬರುವ ಅನುದಾನ, ತೆರಿಗೆಯಲ್ಲಿ ರಾಜ್ಯದ ಪಾಲು ಶೇ. 25 ಇಳಿಕೆಯಾಗಿದೆ. ಅಂದಾಜು ವರ್ಷಕ್ಕೆ 14 ಸಾವಿರ ಕೋಟಿ ರೂ. ಖೋತಾ ಆಗಿದೆ. 2020-21 ರಿಂದ ಐದು ವರ್ಷದಲ್ಲಿ 62 ಸಾವಿರ ಕೋಟಿ ರೂ. ನಷ್ಟ ಆಗುತ್ತಿದೆ.

– ಕೇಂದ್ರದಿಂದ ಬರುವ ತೆರಿಗೆಯಲ್ಲಿ ಶೇ. 41 ಮರು ಹಂಚಿಕೆ ಇರಬೇಕು. ಆದರೆ ಈಗ ಶೇ.30 ರಷ್ಟು ಮಾತ್ರ ಮಾಡಲಾಗುತ್ತಿದೆ. ತೆರಿಗೆ ಎಂದು ಕರೆಯುವ ಬದಲು ಕರ ಎಂದು ಬದಲಿಸಿ ಸೆಸ್‌, ಸರ್ಚಾಜ್‌ ಪಾಲನ್ನು ವಂಚಿಸಲಾಗುತ್ತಿದೆ. ಪೆಟ್ರೋಲ…, ಡೀಸೆಲ್‌ ತೆರಿಗೆ ಬದಲು ಸೆಸ್‌ ಎಂದು ಪರಿಗಣಿಸಿ ಸಂಗ್ರಹಿಸುವ 5ರಿಂದ 6 ಲಕ್ಷ ಕೋಟಿ ರೂ. ಹಣದಲ್ಲಿ ಶೇ. 95 ಕೇಂದ್ರವೇ ಇಟ್ಟುಕೊಳ್ಳುತ್ತಿದೆ. ಇದರಿಂದ ರಾಜ್ಯಕ್ಕೆ ವಾರ್ಷಿಕ 8,200 ಕೋಟಿ ನಷ್ಟ. ಇದುವರೆಗೆ ಒಟ್ಟು 22 ಸಾವಿರ ಕೋಟಿ ರೂ. ವಾರ್ಷಿಕ ನಷ್ಟವಾಗಿದೆ.

ಟಾಪ್ ನ್ಯೂಸ್

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

2-vijayanagara

Vijayanagara: ಚಲಿಸುತ್ತಿದ್ದಾಗಲೇ ಟಯರ್ ಬ್ಲಾಸ್ಟ್‌; ಹೊತ್ತಿ ಉರಿದ ಲಾರಿ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

Jet Airways ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಅನಿತಾ ಗೋಯಲ್ ಕ್ಯಾನ್ಸರ್‌ನಿಂದ ನಿಧನ

Jet Airways ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಅನಿತಾ ಗೋಯಲ್ ಕ್ಯಾನ್ಸರ್‌ನಿಂದ ನಿಧನ

Lok Sabha Election: ರಾಹುಲ್‌ ಗಾಂಧಿ ಪಿಎಂ ಆಗುತ್ತಾರೆ: ಕೈ ನಾಯಕ

Lok Sabha Election: ರಾಹುಲ್‌ ಗಾಂಧಿ ಪಿಎಂ ಆಗುತ್ತಾರೆ: ಕೈ ನಾಯಕ

Lok Sabha Polls: ಪಂಜಾಬ್‌ನ ಖಡೂರ್‌ ಕ್ಷೇತ್ರದಿಂದ ಖಲಿಸ್ಥಾನ ಉಗ್ರ ಅಮೃತ್‌ ಸ್ಪರ್ಧೆ

Lok Sabha Polls: ಪಂಜಾಬ್‌ನ ಖಡೂರ್‌ ಕ್ಷೇತ್ರದಿಂದ ಖಲಿಸ್ಥಾನ ಉಗ್ರ ಅಮೃತ್‌ ಸ್ಪರ್ಧೆ

Mallikarjun Kharge: ಮಟನ್‌-ಚಿಕನ್‌ ಬಿಡಿ, ಅಭಿವೃದ್ಧಿ ಬಗ್ಗೆ ಮಾತಾಡಿ: ಮೋದಿಗೆ ಖರ್ಗೆ

Mallikarjun Kharge: ಮಟನ್‌-ಚಿಕನ್‌ ಬಿಡಿ, ಅಭಿವೃದ್ಧಿ ಬಗ್ಗೆ ಮಾತಾಡಿ: ಮೋದಿಗೆ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

kar49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

JDS MP ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ; ಪಕ್ಷದ ವಿರುದ್ಧವೇ ಸಡ್ಡು ಹೊಡೆದು ಸ್ಪರ್ಧೆ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

2-vijayanagara

Vijayanagara: ಚಲಿಸುತ್ತಿದ್ದಾಗಲೇ ಟಯರ್ ಬ್ಲಾಸ್ಟ್‌; ಹೊತ್ತಿ ಉರಿದ ಲಾರಿ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

Jet Airways ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಅನಿತಾ ಗೋಯಲ್ ಕ್ಯಾನ್ಸರ್‌ನಿಂದ ನಿಧನ

Jet Airways ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಅನಿತಾ ಗೋಯಲ್ ಕ್ಯಾನ್ಸರ್‌ನಿಂದ ನಿಧನ

Lok Sabha Election: ರಾಹುಲ್‌ ಗಾಂಧಿ ಪಿಎಂ ಆಗುತ್ತಾರೆ: ಕೈ ನಾಯಕ

Lok Sabha Election: ರಾಹುಲ್‌ ಗಾಂಧಿ ಪಿಎಂ ಆಗುತ್ತಾರೆ: ಕೈ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.