DK Shivakumar: ಡಿಕೆಶಿ, ಫೇಸ್ಬುಕ್ ಖಾತೆ ನಿರ್ವಾಹಕರ ವಿರುದ್ಧ ದೂರು
Team Udayavani, Jan 7, 2024, 1:33 PM IST
ಬೆಂಗಳೂರು : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಸಿ.ಟಿ.ರವಿ, ಸುನೀಲ್ ಕುಮಾರ್ ಹಾಗೂ ಸಂಸದ ಪ್ರತಾಪ್ ಸಿಂಹ ಅವರ ಫೋಟೋಗಳನ್ನು ದುರ್ಬಳಕೆ ಮಾಡಿಕೊಂಡು, ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಯೂ ಆದ ಡಿ. ಕೆ.ಶಿವಕುಮಾರ್ ಮತ್ತು ಅವರ ಫೇಸ್ಬುಕ್ ಖಾತೆಯ ನಿರ್ವಾಹಕರ ವಿರುದ್ಧ ಬಿಜೆಪಿ ಕಾನೂನು ಘಟಕದ ರಾಜ್ಯ ಸಂಚಾಲಕ ಯೋಗೇಂದ್ರ ಹೂಡಘಟ್ಟ ಎಂಬವರು ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕಾಂಗ್ರೆಸ್ನ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಬಿಜೆಪಿಯ ಹಿರಿಯ ನಾಯಕರ ಮಾರ್ಫ್ ಮಾಡಿದ ಫೋಟೋಗಳನ್ನು ಬಳಸಿ ತಿರುಚಿದ ಹಾಗೂ ದಾರಿತಪ್ಪಿಸುವ ಸುಳ್ಳು ಪೋಸ್ಟ್ಗಳನ್ನು ಹಾಕಲಾಗಿದೆ. ಈ ಮೂಲಕ ಉದ್ದೇಶಪೂರ್ವಕವಾಗಿ ರಾಜ್ಯದ ಜನರಲ್ಲಿ ದ್ವೇಷ ಹುಟ್ಟಿಸಲು ಹಾಗೂ ಬಿಜೆಪಿ ನಾಯಕರ ಹೆಸರಿಗೆ ಮಸಿ ಬಳಿಯಲು ಯತ್ನಿಸಲಾಗಿದೆ. ಈ ರೀತಿಯ ಫೋಸ್ಟ್ಗಳು ಬಿಜೆಪಿ ವಿರುದ್ಧ ಕನ್ನಡಿಗರನ್ನು ಎತ್ತಿಕಟ್ಟುವ ಮತ್ತು ಶಾಂತಿಗೆ ಭಂಗ ತರುವ ಉದ್ದೇಶ ಹೊಂದಿದೆ. ಇದು ಕೆಲ ವರ್ಗದ ಜನರನ್ನು ಉದ್ವಿಘ್ನಗೊಳಿಸುತ್ತದೆ. ಈ ರೀತಿ ಗೊಂದಲ ಉಂಟುಮಾಡುತ್ತಿರುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಫೇಸ್ಬುಕ್ ಪೇಜ್ ನಿರ್ವಹಿಸುವ ವ್ಯಕ್ತಿಗಳಿಗೆ ಗೊತ್ತಿದ್ದರೂ, ನಿರಂತರವಾಗಿ ಆರೋಪ ಮಾಡುತ್ತಿದ್ದಾರೆ. ಆದರಿಂದ ಶಿವಕುಮಾರ್ ಹಾಗೂ ಅವರ ಫೇಸ್ಬುಕ್ ಪೇಜ್ ನಿರ್ವಹಿಸುವ ವ್ಯಕ್ತಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಯೋಗೇಂದ್ರ ಹೂಡಘಟ್ಟ ದೂರಿನಲ್ಲಿ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Panaji: ಕೇಜ್ರಿವಾಲ್ಗೆ ಜಾಮೀನು… ಬೆರಗಾದ ಬಿಜೆಪಿ ನಾಯಕರು: ವಿನೋದ ಪಾಲೇಕರ್
PAK ಆಕ್ರಮಿತ ಕಾಶ್ಮೀರದಲ್ಲಿ ಜನಾಕ್ರೋಶ-ಭುಗಿಲೆದ್ದ ಪ್ರತಿಭಟನೆ-ಹಿಂಸಾಚಾರಕ್ಕೆ 2 ಸಾವು
Conductor’s Humanity: ಮಾನವೀಯತೆ ಮೆರೆದ ಬಸ್ ಕಂಡಕ್ಟರ್
Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್ ʼಬಾರ್ಡರ್ -2ʼ ರಿಲೀಸ್?
Bus Conductor: ಕಂಡಕ್ಟರ್ ಎಂಬ ರಿಮೋಟ್ ಕಂಟ್ರೋಲರ್