ಬಾಗಲಕೋಟೆ: ಗಮನ ಸೆಳೆದ ರಾಷ್ಟ್ರ ಸೇವಿಕೆಯರ ಪಥ ಸಂಚಲನ

ಶರೀರ ಹಾಗೂ ಮನಸ್ಸನ್ನು ಗಟ್ಟಿಯಾಗಿಟ್ಟುಕೊಳ್ಳಲು ಸಾಧ್ಯ

Team Udayavani, Jan 8, 2024, 11:10 AM IST

ಬಾಗಲಕೋಟೆ: ಗಮನ ಸೆಳೆದ ರಾಷ್ಟ್ರ ಸೇವಿಕೆಯರ ಪಥ ಸಂಚಲನ

ಉದಯವಾಣಿ ಸಮಾಚಾರ
ಬಾಗಲಕೋಟೆ: ರಾಷ್ಟ್ರೀಯ ಸ್ವಯಂಸೇವಕ ಸಂಘ ಅಂದರೆ ಕೇವಲ ಹಾಡು, ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವುದಲ್ಲ. ದೇಶದ ಜನರಿಗೆ, ಸಮಾಜಕ್ಕೆ ಆತ್ಮಾಭಿಮಾನ ಮೂಡಿಸುವ ವಿಶೇಷ ಸಂಘಟನೆ.

ಇದನ್ನು ದೇಶದಲ್ಲಿ ಗಟ್ಟಿಯಾಗಿ ಕಟ್ಟಿದವರು ಡಾ| ಹೆಗಡೆವಾರವರು ಎಂದು ರಾಷ್ಟ್ರ ಸೇವಿಕಾ ಸಮಿತಿಯ ಅಖಿಲ ಭಾರತೀಯ ಸಹ ಕಾರ್ಯವಾಹಿಕಾ ಅಲಕಾತಾಯಿ ಇನಾಮದಾರ ಹೇಳಿದರು. ನಗರದ ಬಸವೇಶ್ವರ ಕಾಲೇಜು ಆವರಣದಲ್ಲಿ ರಾಷ್ಟ್ರ ಸೇವಿಕಾ ಸಮಿತಿಯಿಂದ ರವಿವಾರ ಸಂಜೆ ಹಮ್ಮಿಕೊಂಡಿದ್ದ ಬೌದ್ಧಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸುಮಾರು 100 ವರ್ಷಗಳ ಹಿಂದೆ ನಮ್ಮ ದೇಶ, ವಿಚಿತ್ರವಾದ ಸ್ಥಿತಿ, ಹಲವರ ಆಳ್ವಿಕೆಯಲ್ಲಿತ್ತು. ಹಿಂದೂ ಎಂದರೆ, ಸಮಾಜ ಕೀಳರಿಮೆಯಿಂದ ನೋಡುವ ಕಾಲವೂ ಇತ್ತು. ಆದರೆ, ಹಿಂದೂ ಎಂದರೆ ವಿಶಿಷ್ಟ ಪದ್ಧತಿ ಎಂಬುದನ್ನು ಇಡೀ ವಿಶ್ವಕ್ಕೆ ತೋರಿಸಿದವರು ಸ್ವಾಮಿ ವಿವೇಕಾನಂದರು. ಅದೇ ಮಾರ್ಗದಲ್ಲಿ ಡಾ|ಕೇಶವ ಹೆಗಡೆವಾರ ಮುಂದುವರಿದರು ಎಂದರು.

ಸಮಾಜಕ್ಕೆ ಆತ್ಮಾಭಿಮಾನದ ಅರಿವು ಮೂಡಿಸಲು ವಿಶೇಷ ಕಾರ್ಯತಂತ್ರ ನೀಡಿದವರು. ಶಾಖೆ ಎಂದರೆ ಕೇವಲ ಆಟವಾಡುವುದು, ಹಾಡು ಹಾಡುವುದು ಹಾಗೂ ಸಾಂಸ್ಕೃತಿ ಕಾರ್ಯಕ್ರಮ ಹಮ್ಮಿಕೊಳ್ಳುವುದಲ್ಲ.

ಅನ್ನ, ಪ್ರಾಣ, ವಿಜ್ಞಾನ, ಮನೋ ಹಾಗೂ ಆನಂದ ಎಲ್ಲವುಗಳ ಮೂಲಕ ಶರೀರವನ್ನು ಸ್ವಾಸ್ತ್ಯವಾಗಿ ಇಟ್ಟುಕೊಳ್ಳುವುದನ್ನು ಕಲಿಸುತ್ತದೆ. ಶಾಖೆಯಲ್ಲಿ ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಯೋಗದಿಂದ ಶರೀರ ಹಾಗೂ ಮನಸ್ಸನ್ನು ಗಟ್ಟಿಯಾಗಿಟ್ಟುಕೊಳ್ಳಲು ಸಾಧ್ಯ ಎಂದು ಹೇಳಿದರು.

ಇಂದಿನ ಶಾಲಾ ಪಠ್ಯಕ್ರಮದಲ್ಲಿ ಮಕ್ಕಳಿಗೆ ಬೇಕಿರುವ ವ್ಯವಹಾರಿಕೆ, ಧಾರ್ಮಿಕ ಜ್ಞಾನ ಇಲ್ಲ. ಬ್ರಿಟಿಷರು ನೀಡಿದ ಪಠ್ಯಕ್ರಮವನ್ನು ನಾವು ಅನುಸರಿಸುತ್ತಿದ್ದೇವೆ. ನಮಗೆ ರಾಷ್ಟ್ರೀಯ ಶಿಕ್ಷಣ ನೀತಿಯ ಅವಶ್ಯಕತೆ ಇತ್ತು. ಆದರೆ, ರಾಜ್ಯದಲ್ಲಿ ಇದು ಜಾರಿಯಾಗಲಿಲ್ಲ ಎಂದು ವಿಷಾದಿಸಿದರು. ಜಮಖಂಡಿಯ ಸ್ತ್ರೀರೋಗ ತಜ್ಞೆ ಡಾ| ಲಕ್ಷ್ಮೀ ತುಂಗಳ ವೇದಿಕೆಯ ಮೇಲಿದ್ದರು.

ಗಮನ ಸೆಳೆದ ಪಥ ಸಂಚಲನ: ಸಂಕ್ರಾಂತಿ ಹಬ್ಬದ ಅಂಗವಾಗಿ ರಾಷ್ಟ್ರ ಸೇವಿಕಾ ಸಮಿತಿ ಬಾಗಲಕೋಟೆ ಘಟಕ ಹಮ್ಮಿಕೊಂಡಿದ್ದ ಮಹಿಳೆಯರ ಪಥ ಸಂಚಲನ ಸಡಗರದಿಂದ ಜರುಗಿತು. ಮಹಿಳಾ ಗಣವೇಷಧಾರಿಗಳ ಆಕರ್ಷಕ ಪಥ ಸಂಚಲನ ನೋಡಲು ಜನರ ದಂಡೇ ಸೇರಿತ್ತು.

ನಗರದ ಪ್ರಮುಖ ಬೀದಿಗಳಲ್ಲಿ ಕೇಸರಿ ಬಾವುಟಗಳು ರಾರಾಜಿಸುತ್ತಿದ್ದವು. ಗಲ್ಲಿ ಗಲ್ಲಿಗಳಲ್ಲಿ ರಸ್ತೆ, ಮನೆಗಳ ಮುಂದೆ ರಂಗೋಲಿಯ ಚಿತ್ತಾರ ಗಮನ ಸೆಳೆಯುತ್ತಿದ್ದವು. ಸಂಜೆ 4ಕ್ಕೆ ಬಸವೇಶ್ವರ ಲೇಜು ಮೈದಾನದಿಂದ ಎರಡು ಮಾರ್ಗಗಳಲ್ಲಿ ಮಹಿಳಾ ಗಣವೇಷಧಾರಿಗಳು ಪಥ ಸಂಚಲನ ಹೊರಟರು. ಸರಿಯಾಗಿ 5:20ಕ್ಕೆ ಪುನಃ ಬಸವೇಶ್ವರ ಮೈದಾನ ತಲುಪಿದರು. ಪಥಸಂಚಲನ ಹೊರಟಮಾರ್ಗದುದ್ದಕ್ಕೂ ಜಯಘೋಷಗಳು ಮೊಳಗಿದವು. ರಸ್ತೆಯ ಇಕ್ಕೆಲಗಳಲ್ಲಿ ಜನರು, ಗಣವೇಷಧಾರಿಗಳಿಗೆ ಹೂವಿನ ಮಳೆಗೈಯುತ್ತಿದ್ದರು.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

1-pV

Bagalkote; ಅಬ್ಬರದ ಮಳೆ: ಸಿಡಿಲು ಬಡಿದು ಯುವಕ ಸಾವು

1-eqwewqeqw

Bagalkote; ಕಾರಿಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.