Gangavathi; ಕುತೂಹಲ ಮೂಡಿಸಿದ ಗಾಲಿ ಜನಾರ್ದನ ರೆಡ್ಡಿ-ಶಿವನಗೌಡ ನಾಯಕ್ ಭೇಟಿ
ರಾಜಕೀಯ ಚರ್ಚೆ ಸಾಧ್ಯತೆ
Team Udayavani, Jan 10, 2024, 8:37 PM IST
ಗಂಗಾವತಿ: ಗಂಗಾವತಿಯ ಶಾಸಕ ,ಕೆ ಆರ್ ಪಿ ಪಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ ಗಂಗಾವತಿ ನಿವಾಸದಲ್ಲಿ ರಾಯಚೂರಿನ ಪ್ರಭಾವಿ ರಾಜಕೀಯ ಮುಖಂಡರು ಮತ್ತು ಮಾಜಿ ಸಚಿವರಾದ ಬಿಜೆಪಿಯ ಶಿವನಗೌಡ ನಾಯಕ್ ಭೇಟಿಯಾಗಿ ಒಂದು ತಾಸಿಗೂ ಹೆಚ್ಚು ಚರ್ಚೆ ನಡೆಸಿದ್ದು ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗಾಲಿ ಜನಾರ್ದನ ರೆಡ್ಡಿ ಹಾಗೂ ಸಂಗಡ ನಾಯಕರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದು, ಬಿಜೆಪಿಯ ಕೆಲ ಹಿರಿಯ ಮುಖಂಡರು ರೆಡ್ಡಿ ಅವರನ್ನು ಬಿಜೆಪಿ ಪಕ್ಷಕ್ಕೆ ಮರಳಿ ಆಹ್ವಾನಿಸುವ ಇರಾದೆಯಲ್ಲಿ ಇರುವುದರಿಂದ ರೆಡ್ಡಿ, ಶಿವನಗೌಡ ನಾಯಕ್ ಅವರ ಭೇಟಿ ಮಹತ್ವ ಪಡೆದುಕೊಂಡಿದೆ.
ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪಕ್ಷ ಪ್ರಥಮವಾಗಿ ಅಧಿಕಾರಕ್ಕೆ ಬರಲು ಗಾಲಿ ಜನಾರ್ದನ ರೆಡ್ಡಿ ಪ್ರಮುಖ ಕಾರಣರಾಗಿದ್ದು ಇವರ ಅವಧಿಯಲ್ಲಿಯೇ ಶಿವನಗೌಡ ನಾಯಕ್ ಅವರು ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿ ಸಚಿವರಾಗಿದ್ದರು .ನಂತರ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಪ್ರವರ್ತಮಾನಕ್ಕೆ ಬಂದಿದ್ದು ಈ ಹಿನ್ನೆಲೆಯಲ್ಲಿ ರೆಡ್ಡಿ ಹಾಗೂ ನಾಯಕ್ ಭೇಟಿ ಮಹತ್ವ ಪಡೆದುಕೊಂಡಿದೆ ಎನ್ನಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ
Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು
ಸ್ತ್ರೀ ಶಕ್ತಿ ಗುಂಪಿನ ಸದಸ್ಯೆಯರಿಗೆ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳ, ಪ್ರತಿಭಟನೆ
ಕುಕನೂರು: ಸೌಕರ್ಯವಿಲ್ಲದೇ ಹಮಾಲರ ಕಾಲೋನಿ ಅನಾಥ!
3ನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಗೆ 1ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ
MUST WATCH
ಹೊಸ ಸೇರ್ಪಡೆ
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ
Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ