ಕಾರ್ಮಿಕರಾಗಿ ಹಗಲು ವಿದ್ಯುತ್ ತಂತಿ ಎಳೆದವರು ರಾತ್ರಿ ಕದ್ದು ಪೊಲೀಸರ ಕೈಗೆ ಸಿಕ್ಕಿಬಿದ್ದರು
Team Udayavani, Jan 14, 2024, 4:48 PM IST
ಕುಷ್ಟಗಿ: ಹಗಲು ವೇಳೆ ಕಾರ್ಮಿಕರಾಗಿ ಇಲ್ಲಿನ ಹೊಸ ಲೇಔಟ್ ನಲ್ಲಿ ವಿದ್ಯುತ್ ಕಂಬಗಳಿಗೆ ವಿದ್ಯುತ್ ತಂತಿ ಅಳವಡಿಸಿದವರೇ ರಾತ್ರಿ ವೇಳೆ ಕಳ್ಳರಾಗಿ ಬಂದು ವಿದ್ಯುತ್ ಕಂಬಗಳಲ್ಲಿ ಹಾಕಿದ್ದ ತಂತಿಗಳನ್ನು ಕಳ್ಳತನ ಮಾಡಿದ ಘಟನೆ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಪಟ್ಟಣದ ಹೊರವಲಯದಲ್ಲಿರುವ ಮಾಜಿ ಸಚಿವ ಶಿವನಗೌಡ ಪಾಟೀಲ್ ಅವರಿಗೆ ಸೇರಿದ ಕೆವಿಸಿ ಲೇಔಟ್ ನಲ್ಲಿ ವಿದ್ಯುತ್ ಕಂಬಗಳಿಗೆ ವಿದ್ಯುತ್ ತಂತಿ ಅಳವಡಿಸಿ ಕೆಲವೇ ದಿನಗಳಲ್ಲಿ ತಂತಿ ಮಾಯವಾಗಿದ್ದವು. ಈ ಹಿನ್ನೆಲೆಯಲ್ಲಿ ಲೇಔಟ್ ಮಾಲೀಕರು ಕಳೆದ ಜ.10ರ ಮದ್ಯಾಹ್ನದಿಂದ ಜ.11ರ ಬೆಳಗ್ಗೆ 8 ರ ಅವಧಿಯಲ್ಲಿ 18 ವಿದ್ಯುತ್ ಕಂಬಗಳಿಗೆ ಅಳವಡಿಸಿದ್ದ ವಿದ್ಯುತ್ ತಂತಿ ಕಳವಾಗಿರುವ ಬಗ್ಗೆ ದೂರು ನೀಡಿದ್ದರು.
ದೂರು ದಾಖಲಿಸಿಕೊಂಡು ಕಾರ್ಯಪ್ರವೃತ್ತರಾದ ಕುಷ್ಟಗಿ ಪೊಲೀಸರು, ಈ ಲೇಔಟ್ ಗೆ ವಿದ್ಯುತ್ ಕಂಬ ಹಾಗೂ ತಂತಿ ಎಳೆಯಲು ಬಂದ ಕಾರ್ಮಿಕರಾದ ಚಿಕ್ಕನಂದಿಹಾಳ ಗ್ರಾಮದ ಮುತ್ತಣ್ಣ ಅಡಿವೆಪ್ಪ ಬುಕನಟ್ಟಿ, ಅಮರೇಶ ನಿಂಗಪ್ಪ ಕಾತ್ರಳ, ಯಲ್ಲಪ್ಪ ನಾಗಪ್ಪ ದಂಬಡಿ, ಶರಣಪ್ಪ ಹನಮಪ್ಪ ಸೂಳಿಕೇರಿ ಮಂಜುನಾಥ ಹನುಮಗೌಡ ಪೊಲೀಸ್ ಪಾಟೀಲ ಸೇರಿಕೊಂಡು ಕಳುವು ಮಾಡಿರುವುದು ವಿಚಾರಣೆ ವೇಳೆ ತಿಳಿದು ಬಂದಿದ್ದು , ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ವಿದ್ಯುತ್ ಕಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸದೇ ಇರುವುದನ್ನು ಖಚಿತ ಪಡಿಸಿಕೊಂಡೇ ಕಳ್ಳತನ ಮಾಡಿದ್ದರು. ವಿದ್ಯುತ್ ತಂತಿಯ ಮೌಲ್ಯ 1,400 ಕೆಜಿಯ ಒಟ್ಟು 2.80 ಲಕ್ಷ ರೂ. ಹಾಗೂ ಈ ಕಾರ್ಯಾಚರಣೆ ಯಲ್ಲಿ 2ಲಕ್ಷ ರೂ. ಮೌಲ್ಯದ ವಾಹನ ಸೇರಿದಂತೆ ಒಟ್ಟು 4.80 ಲಕ್ಷ ರೂ, ವಶಪಡಿಸಿಕೊಂಡಿದ್ದಾರೆ.
ಕಾರ್ಯಾಚರಣೆ ಯಲ್ಲಿ ಸಿಪಿಐ ಯಶವಂತ ಬಿಸನಳ್ಳಿ, ಪಿಎಸೈ ಮುದ್ದು ರಂಗಸ್ವಾಮಿ, ಕ್ರೈಂ ಪಿಎಸೈ ಮಾನಪ್ಪ ವಾಲ್ಮೀಕಿ ಹಾಗೂ ಪೊಲೀಸರಾದ ಎಂ.ಬಿ. ಇನಾಯತ್, ಅಮರೇಶ ಹುಬ್ಬಳ್ಳಿ, ಪ್ರಶಾಂತ ಪಟ್ಟಣಶೇಟ್ಟಿ, ನೀಲಕಂಠಸ್ವಾಮಿ, ಶರ್ಪುದ್ದೀನ್ ಸಿಡಿಆರ್ ವಿಭಾಗದ ಪ್ರಸಾದ್, ಕೋಟೇಶ ಭಾಗವಹಿಸಿ ಕಾರ್ಯಚರಣೆ ಯಶಸ್ವಿಗೊಳಿಸಿದ್ದಾರೆ. ಕುಷ್ಟಗಿ ಪೊಲೀಸರ ಯಶಸ್ವಿ ಕಾರ್ಯಕ್ಕೆ ಜಿಲ್ಲಾ ಎಸ್ಪಿ ಯಶೋಧ ವಂಟಿಗೋಡಿ, ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಅಭಿನಂಧಿಸಿ ಪ್ರೋತ್ಸಾಹ ಬಹುಮಾನ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ
Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು
ಸ್ತ್ರೀ ಶಕ್ತಿ ಗುಂಪಿನ ಸದಸ್ಯೆಯರಿಗೆ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳ, ಪ್ರತಿಭಟನೆ
ಕುಕನೂರು: ಸೌಕರ್ಯವಿಲ್ಲದೇ ಹಮಾಲರ ಕಾಲೋನಿ ಅನಾಥ!
3ನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಗೆ 1ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್