BJP ಮತ್ತು ಆರ್ಎಸ್ಎಸ್ಗೆ ಮಣಿಪುರವು ಭಾರತದ ಭಾಗವಾಗಿರಲಿಲ್ಲ: ರಾಹುಲ್ ಕಿಡಿ
ಸಾಮರಸ್ಯ, ಶಾಂತಿಯನ್ನು ಮರಳಿ ತರುತ್ತೇವೆ: ರಾಹುಲ್ ಗಾಂಧಿ ಭರವಸೆ
Team Udayavani, Jan 14, 2024, 5:29 PM IST
ಇಂಫಾಲ: ಜನಾಂಗೀಯ ಹಿಂಸಾಚಾರ ಪೀಡಿತ ರಾಜ್ಯ ಮಣಿಪುರದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ತರುವ ಭರವಸೆಯೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯನ್ನು ಆರಂಭಿಸಿದ್ದಾರೆ.
ಇಂಫಾಲ್ನ ದಕ್ಷಿಣ ಭಾಗದಲ್ಲಿರುವ ತೌಬಲ್ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗಾಂಧಿ, ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿ, ಬಹುಶಃ ಬಿಜೆಪಿ ಮತ್ತು ಆರ್ಎಸ್ಎಸ್ಗೆ ಮಣಿಪುರವು ಭಾರತದ ಭಾಗವಾಗಿರಲಿಲ್ಲ ಎಂದರು.
”ನಾನು 2004 ರಿಂದ ರಾಜಕೀಯದಲ್ಲಿದ್ದೇನೆ ಮತ್ತು ನಾನು ಮೊದಲ ಬಾರಿಗೆ ಭಾರತದಲ್ಲಿ ಸಂಪೂರ್ಣ ಆಡಳಿತದ ಮೂಲಸೌಕರ್ಯ ಕುಸಿದಿರುವ ಸ್ಥಳಕ್ಕೆ ಭೇಟಿ ನೀಡಿದ್ದೇನೆ. ಜೂನ್ 29 ರ ನಂತರ, ಮಣಿಪುರವು ಮಣಿಪುರವಾಗಿರಲಿಲ್ಲ, ಅದು ವಿಭಜನೆಯಾಯಿತು ಮತ್ತು ಎಲ್ಲೆಡೆ ದ್ವೇಷ ಹರಡಿತು”ಎಂದರು.
“ಲಕ್ಷಗಟ್ಟಲೆ ಜನರು ನಷ್ಟವನ್ನು ಅನುಭವಿಸಿದರು, ಆದರೆ ಪ್ರಧಾನಿ ನಿಮ್ಮ ಕಣ್ಣೀರು ಒರೆಸಲು, ನಿಮ್ಮ ಕೈ ಹಿಡಿಯಲು ಅಥವಾ ನಿಮ್ಮನ್ನು ಅಪ್ಪಿಕೊಳ್ಳಲು ಇಲ್ಲಿಗೆ ಬಂದಿಲ್ಲ. ಬಹುಶಃ ನರೇಂದ್ರ ಮೋದಿ, ಬಿಜೆಪಿ ಮತ್ತು ಆರ್ಎಸ್ಎಸ್ಗೆ ಮಣಿಪುರ ಭಾರತದ ಭಾಗವಲ್ಲ. ನಿಮ್ಮ ನೋವು ಅವರ ನೋವಲ್ಲ” ಎಂದರು.
ಬಗಲ್ ಮೇ ಚೂರಿ
ಪ್ರಧಾನಿ ಮೋದಿಯವರು ಮಣಿಪುರಕ್ಕೆ ಮತ ಕೇಳಲು ಬರುತ್ತಾರೆ ಆದರೆ ಮಣಿಪುರದ ಜನರು ಕಷ್ಟದಲ್ಲಿದ್ದಾಗ ಮುಖ ತೋರಿಸುವುದಿಲ್ಲ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದರು. (ಮುಖ್ ಮೇ ರಾಮ್, ಬಗಲ್ ಮೇ ಚೂರಿ) ಮುಖದಲ್ಲಿ ರಾಮ, ಬಗಲಲ್ಲಿ ಚೂರಿ ಎಂದರು. ಎಲ್ಲರಿಗೂ ದೇವರಲ್ಲಿ ನಂಬಿಕೆ ಇದೆ ಆದರೆ ಮತಕ್ಕಾಗಿ ಇದನ್ನು ಮಾಡಬೇಡಿ.ಜನರನ್ನು ಪ್ರಚೋದಿಸಲು ಬಿಜೆಪಿಯವರು ಧರ್ಮವನ್ನು ಬೆರೆಸುತ್ತಾರೆ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್