Vijayapura; ಸಿಎಂ ಸಿದ್ದುಗೆ ಸದ್ಬುದ್ಧಿ ನೀಡಿದ ಶ್ರೀರಾಮ: ಯತ್ನಾಳ್
ಸಾಯಬೇಕಾದ್ರೂ ಸೋನಿಯಾ ಅನುಮತಿ ಕೇಳ್ತಿರಾ?
Team Udayavani, Jan 14, 2024, 6:58 PM IST
ವಿಜಯಪುರ:ನಾನು ಗೌರವಾನ್ವಿತವಾಗಿ ಸನ್ಮಾನ್ಯ ಸಿದ್ದರಾಮಯ್ಯ ಎಂದೇ ಮಾತನಾಡುತ್ತೇನೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ನನ್ನ ಕರೆದಿಲ್ಲ, ಹೋಗಲ್ಲ ಎಂದು ಅವರು ಹೇಳಿದ್ದಾರೆ. ಉದ್ಘಾಟನೆ ಕಾರ್ಯಕ್ರಮ ಮುಗಿದ ನಂತರ ಹೋಗುವುದಾಗಿ ಹೇಳಿದ್ದಾರೆ. ಅಷ್ಟಾದರೂ ಶ್ರೀರಾಮಚಂದ್ರ ಅವರಿಗೆ ಸದ್ಬುದ್ಧಿ ನೀಡಿದ್ದಾನೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಸಂಸ್ಕೃತಿ ಎನ್ನುವುದು ಇಲ್ಲ. ಅಲ್ಲದೇ ರಾಮಮಂದಿರ ಉದ್ಘಾಟನೆಗೆ ಹೋಗಬೇಕಾದ್ರೆ ಹೈಕಮಾಂಡ್ ಅನುಮತಿ ಬೇಕೆಂದು ಸಚಿವರು ಹೇಳುತ್ತಾರೆ. ಇದು ನಾಚಿಕೆಗೇಡಿ ಸಂಗತಿ. ಸಾಯಬೇಕಾದರೂ ಸೋನಿಯಾ ಗಾಂಧಿ ಅನುಮತಿ ಕೇಳುತ್ತಾರಾ? ಕಾಂಗ್ರೆಸ್ ಗುಲಾಮಗಿರಿ ಸಂಕೇತ, ಬಿಜೆಪಿ ಸ್ವಾಭಿಮಾನದ ಸಂಕೇತ. ಸಿದ್ದರಾಮಯ್ಯ ಭಟ್ಕಳದ ಭಯೋತ್ಪಾದಕನೊಬ್ಬನಿಗೆ “ಅವರು’, “ಇವರು’ ಎಂದು ಮರ್ಯಾದೆಯಿಂದ ಮಾತನಾಡುತ್ತಾರೆ.
ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ ಮಾತನಾಡಿರುವ ಸಂಸ್ಕೃತಿ ಕುರಿತು ಹೇಳುವ ಸಿದ್ದರಾಮಯ್ಯ ತಮ್ಮ ಸಂಸ್ಕೃತಿ ಬದಲಾವಣೆ ಮಾಡಿಕೊಳ್ಳಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು
Anjali Ambigera Case; ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
Bidar; ಯುವಕರ ಬದುಕು ಹಾಳು ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ
Drugs ಮಾರಾಟ: ಮೂವರು ವಿದೇಶಿ ಪ್ರಜೆಗಳು ಸೇರಿ 8 ಮಂದಿ ಬಂಧನ
ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್ಕೌಂಟರ್… ಇಬ್ಬರು ಉಗ್ರರು ಹತ