Actress Leelavati: 55 ಲಕ್ಷ ರೂ.ವೆಚ್ಚದಲ್ಲಿ ನಟಿ ಲೀಲಾವತಿ ಸ್ಮಾರಕ ನಿರ್ಮಾಣಕ್ಕೆ ಪೂಜೆ


Team Udayavani, Jan 15, 2024, 10:57 AM IST

Actress Leelavati: 55 ಲಕ್ಷ ರೂ.ವೆಚ್ಚದಲ್ಲಿ ನಟಿ ಲೀಲಾವತಿ ಸ್ಮಾರಕ ನಿರ್ಮಾಣಕ್ಕೆ ಪೂಜೆ

ನೆಲಮಂಗಲ: ಚಿತ್ರರಂಗದಲ್ಲಿ ದೊಡ್ಡ ಮೈಲಿಗಲ್ಲು ಸಾಧಿಸಿರುವ ಲೀಲಾವತಿ ಅವರು ಬದುಕಿದ್ದಾಗಲೂ ಮಾದರಿಯಾಗಿದ್ದರು. ಮುಂದೆಯೂ ಅವರ ಸ್ಮಾರಕ ಕಲಾವಿದರಿಗೆ ಪ್ರೇರಣೆ ಆಗಲಿ ಎಂದು ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ಅಭಿಪ್ರಾಯಪಟ್ಟರು.

ತಾಲೂಕಿನ ಸೋಲದೇವನಹಳ್ಳಿ ಗ್ರಾಮದಲ್ಲಿ ಹಿರಿಯ ನಟಿ ಲೀಲಾವತಿ ಅಂತ್ಯಕ್ರಿಯೆ ಮಾಡಿದ ಸ್ಥಳದಲ್ಲಿ ಭವ್ಯ ಸ್ಮಾರಕ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಸ್ವತಃ ಹಣ: ಹಿರಿಯ ನಟಿ ಲೀಲಾವತಿ ಅವರು ಚಿತ್ರರಂಗದ ತುಂಬಿದ ಕೊಡವಿದ್ದಂತೆ. ಲೀಲಾವತಿ ಯವರ ಸ್ಮಾರಕ ನಿರ್ಮಾಣಕ್ಕೆ ವಿನೋದ್‌ರಾಜ್‌ ಮುಂದಾಗಿರುವುದು ಸಂತೋಷ. ಸರ್ಕಾರದ ಹಣ ಕೇಳದೇ, ಸ್ವಂತ ಹಣದಲ್ಲಿ ಮಾಡುತ್ತಿದ್ದಾರೆ. ಲೀಲಾವತಿ ಯವರ ಜೀವನದ ಶ್ರೇಷ್ಠತೆ ಸಾರುವ ವಿಚಾರಗಳ ಜತೆ ಸ್ಮಾರಕ ನಿರ್ಮಾಣ ಅದ್ಭುತವಾಗಿದೆ ಎಂದು ಹೇಳಿದರು.

ಮಾದರಿ: ವಿನೋದ್‌ ರಾಜ್‌ ಜತೆ ಸ್ಮಾರಕ ನಿರ್ಮಾಣದ ಸಮಯದಲ್ಲಿ ನಾವೆಲ್ಲರೂ ಜತೆಯಾಗಿರುತ್ತೇವೆ. ಲೀಲಾವತಿ ಅವರು ಮಾಡಿರುವ ಸೇವೆ ಸಮಾಜಕ್ಕೆ ಮಾದರಿಯಾಗಿದ್ದು ಅವರ ಸಿನಿಮಾಗಳಲ್ಲಿ ನೀತಿ ಪಾಠ ಕಾಣಬಹುದಾಗಿತ್ತು. ಆದರೆ, ಇವತ್ತಿನ ದಿನಗಳ ಸಿನಿ ಮಾಗಳಲ್ಲಿ ಆ ಕೊರತೆ ಹೆಚ್ಚಾಗಿ ಕಾಣುತ್ತಿದೆ ಎಂದರು. ನಟ ವಿನೋದ್‌ರಾಜ್‌ ಮಾತನಾಡಿ, ಅಮ್ಮನ ಮೊದಲ ಸಿನಿಮಾದಿಂದ ಕೊನೇ ಸಿನಿಮಾದವರೆಗೆ ಗ್ಯಾಲರಿ ನಿರ್ಮಾಣ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ನುಡಿದರು.

ಭೂಮಿ ಪೂಜೆ: ಹಿರಿಯ ನಟಿ ಲೀಲಾವತಿ ಅವರ ಸ್ಮಾರಕ ನಿರ್ಮಾಣಕ್ಕೆ ಪುತ್ರ ವಿನೋದ್‌ರಾಜ್‌, ಸೊಸೆ ಅನು, ಮೊಮ್ಮಗ ಯುವರಾಜ್‌ ರಿಂದ ಸಮಾಧಿಗೆ ಪೂಜೆ ಮಾಡಲಾಯಿತು. ಸಚಿವ ಕೆ.ಎಚ್‌.ಮುನಿಯಪ್ಪ, ಶಾಸಕ ಎನ್‌. ಶ್ರೀನಿವಾಸ್‌ ಭೂಮಿ ಪೂಜೆ ಮಾಡಿ ಭವ್ಯ ಸ್ಮಾರಕ ನಿರ್ಮಾಣಕ್ಕೆ ಚಾಲನೆ ನೀಡಿದರು. ಸಚಿವರು ಲೀಲಾವತಿ ಅವರ ಸ್ಮಾರಕದ ಮಾದರಿ ವೀಕ್ಷಣೆ ಮಾಡಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸಿ.ಎಂ.ಗೌಡ, ಪುರಸಭೆ ಮಾಜಿ ಅಧ್ಯಕ್ಷ ನಾರಾಯಣಗೌಡ, ಮುಖಂಡರಾದ ಟಿ.ನಾಗರಾಜು, ಸಿ.ಎಂ.ಗೌಡ, ಮಿಲ್ಟ್ರಿ ಮೂರ್ತಿ, ಜಗದೀಶ್‌, ಸೋಮಶೇಖರ್‌, ಮಂಜುನಾಥಯ್ಯ, ಮನುಗೌಡ, ಭೂಸಂದ್ರ ಚಿಕ್ಕಣ್ಣ, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷ ನಟಿ ಲೀಲಾವತಿ ಸ್ಮಾರಕದ ಮಾದರಿ. ಹಾಗೂ ಸದಸ್ಯರು, ಕಲಾವಿದರು ಉಪಸ್ಥಿತರಿದ್ದರು.

980 ಎಕರೆ ಮತ್ತೆ ಸರ್ವೆ : ತಾಲೂಕಿನ ಸೋಲದೇವನಹಳ್ಳಿ ಭಾಗದ 980 ಎಕರೆ ಭೂಮಿಯನ್ನು ಅರಣ್ಯ ಇಲಾಖೆ ನಮ್ಮದು ಎಂದು ರೈತರಿಗೆ ನೋಟಿಸ್‌ ನೀಡಿದೆ. ಅನಾದಿ ಕಾಲದಿಂದಲೂ ಉಳುಮೆ ಮಾಡಿಕೊಂಡು ಬಂದಿರುವ ರೈತರನ್ನು ಒಕ್ಕಲೆಬ್ಬಿಸುವ ಕೆಲಸವಾಗುತ್ತಿದ್ದು ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತಂದು ಮತ್ತೆ ಸರ್ವೆ ಮಾಡಿ ರೈತರಿಗೆ ನ್ಯಾಯ ನೀಡಬೇಕು ಎಂದು ನಟ ವಿನೋದ್‌ ರಾಜ್‌ ಅವರು ಸಚಿವ ಕೆ.ಎಚ್‌.ಮುನಿಯಪ್ಪ ಅವರಲ್ಲಿ ಮನವಿ ಮಾಡಿದರು.

ಹಣ ಅಪೇಕ್ಷೆ ಪಡಲ್ಲ: ಅಮ್ಮನ ಸಮಾಧಿ ಕೇವಲ ಸಮಾಧಿ ಅಲ್ಲ, ಅದು ಒಂದು ಆಧ್ಯಾತ್ಮಿಕ ಕ್ಷೇತ್ರವನ್ನಾಗಿ ಮಾಡುತ್ತೇನೆ. ತಾಯಿಯ ಸ್ಮಾರಕವನ್ನು ನನ್ನ ಆಸೆಯಂತೆ ನಿರ್ಮಿಸಲು ನಿರ್ಧರಿಸಿದ್ದೇನೆ. ಸುಮಾರು 55 ಲಕ್ಷ ರೂ.,ವೆಚ್ಚದಲ್ಲಿ ಸ್ಮಾರಕ ನಿರ್ಮಾಣವಾಗಲಿದ್ದು ಸರ್ಕಾರದಿಂದ ಯಾವುದೇ ಅಪೇಕ್ಷೆ ಪಡದೆ ನಾವೇ ಸ್ಮಾರಕ ಕಟ್ಟಲು ತೀರ್ಮಾನ ಮಾಡಿದ್ದೇನೆ. ಯಾವುದೇ ಹಣವನ್ನು ಯಾರಿಂದಲೂ ಅಪೇಕ್ಷೆ ಪಡೆಯುವುದಿಲ್ಲ ಎಂದು ನಟ ವಿನೋದ್‌ರಾಜ್‌ ತಿಳಿಸಿದರು.

 

ಟಾಪ್ ನ್ಯೂಸ್

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.