Sabarimala; ಭಕ್ತಿ ಭಾವದ ಮಕರ ಸಂಕ್ರಾಂತಿ ಆಚರಣೆ: ಲಕ್ಷಾಂತರ ಭಕ್ತರು ಭಾಗಿ


Team Udayavani, Jan 15, 2024, 8:06 PM IST

1-sadasdasd

ಪತ್ತನಂತಿಟ್ಟ : ಲಕ್ಷಕ್ಕೂ ಅಧಿಕ ಭಕ್ತರು, ಹಲವಾರು ಗಂಟೆಗಳ ಕಾಲ ಬೃಹತ್ ಸರತಿ ಸಾಲಿನಲ್ಲಿ ನಿಂತು ಸೋಮವಾರ ಇಲ್ಲಿನ ಅಯ್ಯಪ್ಪನ ಬೆಟ್ಟದ ದೇಗುಲದಲ್ಲಿ ಮಕರ ಸಂಕ್ರಾಂತಿ (ಮಕರವಿಳಕ್ಕು) ಆಚರಣೆಯ ದಿನದಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ತಿಂಗಳ ಅವಧಿಯ ವಾರ್ಷಿಕ ತೀರ್ಥಯಾತ್ರೆಯ ಋತು ಇದಾಗಿದ್ದು ಸಾಂಪ್ರದಾಯಿಕ ಕಪ್ಪು ಉಡುಪುಗಳನ್ನು ಧರಿಸಿದ ಭಕ್ತರ ದಂಡು ಮತ್ತು ತಮ್ಮ ತಲೆಯ ಮೇಲೆ ‘ಇರುಮುಡಿ’ ಹೊತ್ತುಕೊಂಡು ದೀಪಾರತಿ ಗಾಗಿ ದೇವಾಲಯದ ಸಂಕೀರ್ಣದಲ್ಲಿ ಮತ್ತು ಸುತ್ತಮುತ್ತ ಬೆಳಗ್ಗೆಯಿಂದಲೇ ಕಾಯುತ್ತಿದ್ದರು.ದೇವಸ್ವಂ ಅಧಿಕಾರಿಗಳು, ಪೊಲೀಸ್ ಸಿಬಂದಿ ಮತ್ತು ಅರ್ಚಕರು ವಿಶೇಷ ಸಿದ್ದತೆಗಳನ್ನು ಕೈಗೊಂಡಿದ್ದರು.

ಸಂಜೆ 6.30 ರ ಸುಮಾರಿಗೆ, ಅಯ್ಯಪ್ಪ ಜನಿಸಿದ ಪಂದಳಂ ಅರಮನೆಯಿಂದ ಪವಿತ್ರ ಆಭರಣಗಳನ್ನು ತರಲಾಯಿತು, ಸುಮಾರು 85 ಕಿಲೋಮೀಟರ್ ದೂರದಲ್ಲಿರುವ ಪಂದಳಂ ಅರಮನೆಯಿಂದ ಎರಡು ದಿನಗಳ ಹಿಂದೆ ವಿಧ್ಯುಕ್ತ ಮೆರವಣಿಗೆ ಆರಂಭವಾಗಿತ್ತು. ಅಯ್ಯಪ್ಪನ ವಿಗ್ರಹವನ್ನು ಪವಿತ್ರ ಆಭರಣಗಳಿಂದ ಅಲಂಕರಿಸಿದ ನಂತರ ದೀಪಾರಾಧನೆ ನಡೆಸಲಾಯಿತು.

ದೇಗುಲದ ಹೊರಗೆ ಅಪಾರ ಭಕ್ತಗಡಣವು ಸೇರಿದ್ದರಿಂದ ನೂಕುನುಗ್ಗಲು ಉಂಟಾಯಿತು, ಭಕ್ತರು ಪವಿತ್ರ ಆಭರಣಗಳಿಂದ ಅಲಂಕರಿಸಲ್ಪಟ್ಟ ಭಗವಾನ್ ಅಯ್ಯಪ್ಪನ ನೋಡಲು ಮುಗುಬಿದ್ದರು. ದೇಗುಲದ ಹೆಬ್ಬಾಗಿಲು ತೆರೆದಾಗ ‘ಶರಣಂ ಅಯ್ಯಪ್ಪ’ ಘೋಷಣೆಗಳು ಮತ್ತು ಸ್ತೋತ್ರಗಳು ಮುಗಿಲು ಮುಟ್ಟಿದ್ದವು.

ದೇವಾಲಯದ ಸಂಕೀರ್ಣದಿಂದ ಎಂಟು ಕಿಲೋಮೀಟರ್ ದೂರದ ಬೆಟ್ಟದ ಮೇಲಿರುವ ಪೊನ್ನಂಬಲಮೇಡು ಮೇಲಿನ ಪೂರ್ವ ಆಗಸದಲ್ಲಿ  ಕೆಲವು ನಿಮಿಷಗಳ ನಂತರ ‘ಮಕರ ಜ್ಯೋತಿ’ ಮಿನುಗಿತು. ದೈವಿಕ ಬೆಳಕು ಎಂದು ಪರಿಗಣಿಸಲ್ಪಟ್ಟ ‘ಮಕರ ಜ್ಯೋತಿ’ ಕಂಡಾಗ ಭಕ್ತರಿಂದ ಶರಣಂ ಅಯ್ಯಪ್ಪ ಘೋಷಗಳು ಮತ್ತಷ್ಟು ತೀವ್ರಗೊಂಡವು.

ಹಿನ್ನೆಲೆ ಗಾಯಕ ವೀರಮಣಿದಾಸನ್‌ಗೆ ಪ್ರಶಸ್ತಿ

ತಮಿಳು ಹಿನ್ನೆಲೆ ಗಾಯಕ ಪಿ.ಕೆ. ವೀರಮಣಿದಾಸನ್‌ ಅವರಿಗೆ ಪ್ರಸಕ್ತ ವರ್ಷದ ಪ್ರತಿಷ್ಠಿತ ಹರಿವರಾಸನಮ್‌ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಶಬರಿಮಲೆಯ ಸನ್ನಿಧಾನಂನಲ್ಲಿ ಕೇರಳ ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್‌ ಅವರು ಸೋಮವಾರ ವೀರಮಣಿದಾಸನ್‌ರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ. ಇದು ಒಂದು ಲಕ್ಷ ರೂ. ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ಇವರ ಕಂಠಸಿರಿಯಲ್ಲಿ ಕನ್ನಡ, ತಮಿಳು, ತೆಲುಗು ಸೇರಿದಂತೆ ವಿವಿಧ ಭಾಷೆಗಳ 6 ಸಾವಿರಕ್ಕೂ ಅಧಿಕ ಭಕ್ತಿಗೀತೆಗಳು ಹೊರಬಂದಿವೆ.

ಟಾಪ್ ನ್ಯೂಸ್

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

police crime

Sandeshkhali ಪ್ರಕರಣಕ್ಕೆ ದಿಢೀರ್‌ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್‌!

1-wqewqeqeqw

BJP ನಾಯಕಿ ವಿವಾದ: ಒವೈಸಿಗೆ 15 ನಿಮಿಷ ಬೇಕು,ನಮಗಾದ್ರೆ 15 ಸೆಕೆಂಡ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

7-kundapura

Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಶುಕ್ತಿಜಾ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

6-sslc

Rank: ರಾಜ್ಯಕ್ಕೆ 5ನೇ ರ‍್ಯಾಂಕ್ ಪಡೆದ ಪ್ರತ್ವಿತಾ ಪಿ.ಶೆಟ್ಟಿ; ಐ.ಎ.ಎಸ್ ಅಧಿಕಾರಿಯಾಗುವ ಆಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.