Missing Case ಮಂಗಳೂರು: ಪೊಲೀಸ್ ಸಿಬಂದಿ ನಾಪತ್ತೆ
Team Udayavani, Jan 15, 2024, 11:43 PM IST
ಮಂಗಳೂರು: ಹದಿನೈದು ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬಂದಿ ಮಂಜುನಾಥ ಹೆಗ್ಡೆ (41) ಅವರು ನಾಪತ್ತೆಯಾಗಿದ್ದಾರೆ.
ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಹೆಡ್ಕಾನ್ಸ್ಟೆಬಲ್ ಆಗಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ ಹೆಗ್ಡೆ ಅವರನ್ನು ಮಂಗಳೂರು ನಗರ ಸಿಸಿಆರ್ಬಿ ಘಟಕಕ್ಕೆ ಒಒಡಿ ನೆಲೆಯಲ್ಲಿ ವರ್ಗಾವಣೆ ಯಾಗಿದ್ದರು. ಅಲ್ಲಿ ಕೆಲಸಕ್ಕೆ ವರದಿ ಮಾಡುವುದಾಗಿ ಹೇಳಿ ಜ. 13ರಂದು ಮನೆಯಿಂದ ಹೋಗಿದ್ದಾರೆ. ಅದೇ ದಿನ ಮಧ್ಯಾಹ್ನ 1 ಗಂಟೆಗೆ ಮನೆಯಿಂದ ಅವರ ಮೊಬೈಲ್ಗೆ ಕರೆ ಮಾಡಿದಾಗ ಫೋನ್ ಸ್ವಿಚ್ಆಫ್ ಆಗಿತ್ತು. ಸ್ನೇಹಿತರಲ್ಲಿ, ಪರಿಚಯದವರಲ್ಲಿ ಸಂಬಂಧಿಕರಲ್ಲಿ ವಿಚಾರಿಸಿದಾಗ ಯಾವುದೇ ಮಾಹಿತಿ ಸಿಕ್ಕಿಲ್ಲ. ಈ ಕುರಿತಂತೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಹರೆ: 5.6 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಪೂರ ಶರೀರ, ಬಿಳಿ ಹಾಗೂ ಕ್ರೀಂ ಬಣ್ಣದ ಟೀ-ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು. ಕನ್ನಡ, ತುಳು ಮತ್ತು ಹಿಂದಿ ಭಾಷೆ ಬಲ್ಲವರಾಗಿದ್ದಾರೆ. ಅವರು ಕಂಡುಬಂದಲ್ಲಿ ಕಂಕನಾಡಿ ನಗರ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು
Mangaluru ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ
Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು
Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು