Udupi ಪರ್ಯಾಯ ಮಹೋತ್ಸವಕ್ಕೆ ಕಲಾತಂಡಗಳ ಮೆರುಗು

30ಕ್ಕೂ ಅಧಿಕ ಟ್ಯಾಬ್ಲೋ, ವಿವಿಧೆಡೆ ಸಾಂಸ್ಕೃತಿಕ ವೈಭವ

Team Udayavani, Jan 16, 2024, 11:38 PM IST

udUdupi ಪರ್ಯಾಯ ಮಹೋತ್ಸವಕ್ಕೆ ಕಲಾತಂಡಗಳ ಮೆರುಗು

ಉಡುಪಿ: ಪರ್ಯಾಯೋತ್ಸವದ ಸಂಭ್ರಮ ಹೆಚ್ಚಿಸಲು ನಗರದ ವಿವಿಧೆಡೆ ಸಾಂಸ್ಕೃತಿಕ ಕಲಾತಂಡಗಳು ಸಿದ್ಧತೆ ನಡೆಸುತ್ತಿವೆ. ರಥಬೀದಿ, ಹೊರೆಕಾಣಿಕೆ ಸ್ಥಳದ ಗದ್ದೆ, ಪೇಜಾವರ ಮಠದ ಮುಂಭಾಗ, ಶ್ರೀಕೃಷ್ಣ ಮಠದ ಎದುರು, ಕಿನ್ನಿಮೂಲ್ಕಿ, ಸರ್ವಿಸ್‌ ಬಸ್‌ ತಂಗುದಾಣ, ಹಳೆ ಕೆಎಸ್ಸಾರ್ಟಿಸಿ ಬಸ್‌ ತಂಗುದಾಣ, ತ್ರಿವೇಣಿ ಸರ್ಕಲ್‌, ತ್ರಿಶಾ ಸರ್ಜಿಕಲ್‌ ಬಳಿ, ಗಿರಿಜಾ ಸರ್ಜಿಕಲ್‌ ಬಳಿ, ಪುರಭವನದಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ನಾಸಿಕ್‌ ಡೋಲು
ಮೆರವಣಿಗೆಯಲ್ಲಿ ಸ್ಥಳೀಯ ಕಲಾತಂಡಗಳಷ್ಟೇ ಅಲ್ಲದೆ ಪುಣೆಯ ನಾಸಿಕ್‌ ಡೋಲು, 60-70 ಮಂದಿಯ ತಾಸೆ, ಪಂಢರಾಪುರದ ಭಜನ ತಂಡಗಳು ಭಾಗವಹಿಸಲಿವೆ. ಕೃಷ್ಣನ ಅವತಾರಕ್ಕೆ ಸಂಬಂಧಿಸಿದ 7ರಿಂದ 8 ಟ್ಯಾಬ್ಲೋಗಳು, ಗೀತೆಯ ನಾಣ್ಣುಡಿ ಇರುವ 3ರಿಂದ 4 ಟ್ಯಾಬ್ಲೋಗಳು, ವಿವಿಧ ಸರಕಾರಿ ಇಲಾಖೆಗಳ 4 ಟ್ಯಾಬ್ಲೋಗಳು ಇರಲಿವೆ.

300ಕ್ಕೂ ಅಧಿಕ ಚೆಂಡೆ ಬಳಗ
ಕೇರಳ-ಭಾರತೀಯ ಶೈಲಿಯ ವಿವಿಧ ಮಾದರಿಯ ಚೆಂಡೆಗಳ ಸಹಿತ ಒಟ್ಟು 300ಕ್ಕೂ ಅಧಿಕ ಚೆಂಡೆ ಬಳಗ ಮೆರವಣಿಗೆಯಲ್ಲಿ ಗಮನ ಸೆಳೆಯಲಿವೆ. ಕುಣಿತ ಭಜನೆ, ಜನಪದ ಕಲೆ, ಡೊಳ್ಳು ಕುಣಿತ, ಸೋಮನ ಕುಣಿತ, ವೀರಗಾಸೆ, 50 ಮಂದಿಯ ತಂಡದ ಕೊರಗರ ಡೋಲು ಮೆರವಣಿಗೆಯಲ್ಲಿರಲಿವೆ.

ಮಕ್ಕಳಿಂದ ಪಾರಾಯಣ
ಭಗವದ್ಗೀತೆಯ 18 ಅಧ್ಯಾಯದ ಫ‌ಲಕದೊಂದಿಗೆ ಕಿನ್ನಿಮೂಲ್ಕಿಯ ಸಂಸ್ಥೆಯೊಂದರ 40ರಿಂದ 50 ಮಂದಿ ಮಕ್ಕಳು ಪಾರಾಯಣ ಮಾಡಲಿದ್ದಾರೆ. 108 ಕೃಷ್ಣಭಕ್ತರಿಂದ ಭಜನೆ, ವೈವಿಧ್ಯಮಯ ಕೋಲಾಟ, ಕುಣಿತ ಭಜನೆ, ಬಳ್ಳಾರಿಯ ಕೋಲಾಟ, ಜನಪದ ಕಲಾ ಸಂಸ್ಕೃತಿ ಬಿಂಬಿಸುವ ಕಂಬಳದ ಜೀವಂತ ಕೋಣ, ತುಳುನಾಡ ಸಂಸ್ಕೃತಿಯನ್ನು ಬಿಂಬಿಸುವ ಟ್ಯಾಬ್ಲೋ, ಪರಶುರಾಮನ ಬೃಹತ್‌ ವಿಗ್ರಹ, ಹುಲಿಯ ಟ್ಯಾಬ್ಲೋ, ಚಿಲಿಪಿಲಿ ಗೊಂಬೆಗಳು, ಜನಪದ ಕಲೆಗಳು, ದರ್ಪಣ ಸಂಸ್ಥೆಯ 35 ಮಂದಿ ಮಹಿಳೆಯರ ಹುಲಿವೇಷ, ಕುರ್ಕಾಲಿನ 30 ಮಂದಿಯ ಹುಲಿವೇಷ, ಕೇರಳ ಶೈಲಿಯ ಧರ್ಮಾರ್ಥವಾಗಿ 70 ಚೆಂಡೆಗಳು, 70 ಮಂದಿಯ ಚೆಂಡೆ ಹಾಗೂ ವಯೋಲಿನ್‌ ಮೆರವಣಿಗೆಯಲ್ಲಿರಲಿದೆ.

ರಾಮಮಂದಿರದ ಟ್ಯಾಬ್ಲೋ
ಮಧ್ವಗಾನ ಯಾನ, ಜೋಗಿ ಸಮಾಜದ ಕುಣಿತ ಭಜನೆ, ವಿಷ್ಣುಸಹಸ್ರನಾಮ ಶ್ಲೋಕಗಳು, ಕೋಟಿಗೀತ ಯಜ್ಞದ ಭೂಮಂಡಲ ಮಾಡಿ ಡಿಜಿಟಲ್‌ ಮೂಲಕ ತೋರಿಸುವ ವ್ಯವಸ್ಥೆ, ವಾದ್ಯ, ಬ್ಯಾಂಡ್‌ಸೆಟ್‌ಗಳು, ಸ್ಯಾಕೊÕಫೋನ್‌, ಕೇರಳ ಶೈಲಿಯ ಪಂಚವಾದ್ಯ, ಅಯೋಧ್ಯೆ ರಾಮಮಂದಿರದ ಟ್ಯಾಬ್ಲೋ, ಪೌರಾಣಿಕ ಸನ್ನಿವೇಶದ ಟ್ಯಾಬ್ಲೋ, ಕೆಮ್ಮುಂಡೇಲು ಹಿ.ಪ್ರಾ. ಶಾಲೆಯ “ಗರುಡನಲ್ಲಿ ಕೃಷ್ಣ’ ಕಲ್ಪನೆಯ ಮಕ್ಕಳಿಂದಲೇ ರಚಿಸಲ್ಪಟ್ಟ ಮೋಡದ ಮೇಲೆ ಕೃಷ್ಣ ಹೋಗುವಂತಹ ಟ್ಯಾಬ್ಲೋಗಳು ಜನರನ್ನು ರಂಜಿಸಲಿವೆ.

 

ಟಾಪ್ ನ್ಯೂಸ್

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal: ಪಾರ್ಟ್‌ಟೈಮ್‌ ಜಾಬ್‌ ಲಿಂಕ್‌ 10.83 ಲಕ್ಷ ರೂ ಕಳೆದುಕೊಂಡ ವಿದ್ಯಾರ್ಥಿ

Manipal: ಪಾರ್ಟ್‌ಟೈಮ್‌ ಜಾಬ್‌ ಲಿಂಕ್‌ 10.83 ಲಕ್ಷ ರೂ ಕಳೆದುಕೊಂಡ ವಿದ್ಯಾರ್ಥಿ

Udupi: ಎದೆ ನೋವಿನಿಂದ ವ್ಯಕ್ತಿ ಸಾವು

Udupi: ಎದೆ ನೋವಿನಿಂದ ವ್ಯಕ್ತಿ ಸಾವು

7

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ: ಮಾಜಿ ಶಾಸಕ ರಘುಪತಿ ಭಟ್‌ ಬಿಜೆಪಿ ಪಕ್ಷದಿಂದ ಉಚ್ಚಾಟನೆ

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

PV Sindhu: ಮಲೇಷ್ಯಾ ಬ್ಯಾಡ್ಮಿಂಟನ್‌; ಸಿಂಧು-ವಾಂಗ್‌ ನಡುವೆ ಇಂದು ಫೈನಲ್‌

PV Sindhu: ಮಲೇಷ್ಯಾ ಬ್ಯಾಡ್ಮಿಂಟನ್‌; ಸಿಂಧು-ವಾಂಗ್‌ ನಡುವೆ ಇಂದು ಫೈನಲ್‌

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

French Open:‌ ಇಂದಿನಿಂದ ಫ್ರೆಂಚ್‌ ಓಪನ್‌; ಕಣದಲ್ಲಿ ಸುಮಿತ್‌ ನಾಗಲ್‌

French Open:‌ ಇಂದಿನಿಂದ ಫ್ರೆಂಚ್‌ ಓಪನ್‌; ಕಣದಲ್ಲಿ ಸುಮಿತ್‌ ನಾಗಲ್‌

43

ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ನಾನೂ ಸಿದ್ಧ: ರಾಜಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.