ಬಾಗಲಕೋಟೆ-ಕುಡಚಿ ರೈಲು ಮಾರ್ಗ 2025ಕ್ಕೆ ಪೂರ್ಣ


Team Udayavani, Jan 18, 2024, 5:25 PM IST

ಬಾಗಲಕೋಟೆ-ಕುಡಚಿ ರೈಲು ಮಾರ್ಗ 2025ಕ್ಕೆ ಪೂರ್ಣ

ಉದಯವಾಣಿ ಸಮಾಚಾರ
ಬಾಗಲಕೋಟೆ: ಬರಲಿರುವ ಮಾರ್ಚ್‌ ಅಂತ್ಯಕ್ಕೆ ಲೋಕಾಪುರ ರೈಲು ನಿಲ್ದಾಣ ಲೋಕಾರ್ಪಣೆಗೊಳಿಸಲಾಗುವುದು. 2025ಕ್ಕೆ
ಬಾಗಲಕೋಟೆ-ಕುಡಚಿ ರೈಲು ಮಾರ್ಗ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ನೈರುತ್ಯ ರೈಲ್ವೆ ಇಲಾಖೆಯ ಮಹಾ ವ್ಯವಸ್ಥಾಪಕ ಸಂಜೀವ ಕಿಶೋರ ತಿಳಿಸಿದರು.

ಬಾಗಲಕೋಟೆ-ಕುಡಚಿ ರೈಲು ಮಾರ್ಗ ಹಾಗೂ ಗದಗ-ಹುಟಗಿ ವಿದ್ಯುತ್ತೀಕರಣ ಕಾಮಗಾರಿ ಪರಿಶೀಲನೆಗೆ ಆಗಮಿಸಿದ್ದ ಅವರು, ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ಪದಾಧಿಕಾರಿಗಳ ನಿಯೋಗಕ್ಕೆ ಈ ಭರವಸೆ ನೀಡಿದರು
.
ಭರವಸೆ ಹುಸಿಗೊಳಿಸಿದ್ದೀರಿ: ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಕತ್ಬುದ್ದೀನ ಖಾಜಿ ಈ ವೇಳೆ ಮಾತನಾಡಿ, ಬಾಗಲಕೋಟೆ-ಕುಡಚಿ ರೈಲು ಮಾರ್ಗದ ಕಾಮಗಾರಿ 2024ರ ಒಳಗಾಗಿ ಪೂರ್ಣಗೊಳಿಸಬೇಕು. ಈ ಹಿಂದೆ ನಾವು ಹೋರಾಟ ಮಾಡಿದ ವೇಳೆ ರೈಲ್ವೆ ಹಿರಿಯ ಅಧಿಕಾರಿಗಳು, 2016 ಮತ್ತು 2020ರೊಳಗಾಗಿ ಪೂರ್ಣಗೊಳಿಸುವುದಾಗಿ ಎರಡು ಬಾರಿ ಪ್ರತ್ಯೇಕ
ಭರವಸೆ ನೀಡಿದ್ದರು. ಈವರೆಗೂ ಪೂರ್ಣಗೊಂಡಿಲ್ಲ.ಈಗ ಮತ್ತೆ 2025ರೊಳಗೆ ಪೂರ್ಣಗೊಳಿಸುವುದಾಗಿ ಹೇಳುತ್ತಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕುಡಚಿ ಮಾರ್ಗ ನಿರ್ಮಾಣ, ಈಗಾಗಲೇ ಬಹಳ ವಿಳಂಬವಾಗಿದೆ. ಇದರಿಂದ ಇಲಾಖೆಗೂ ಭಾರವಾಗಿದೆ.ಈಗಾಗಲೇ ರಾಜ್ಯ ಸರ್ಕಾರ ಅಗತ್ಯ ಭೂಸ್ವಾಧೀನ ಮಾಡಿಕೊಂಡು ಇಲಾಖೆಗೆ ಹಸ್ತಾಂತರಿಸಿದೆ. 2025ರೊಳಗೆ ಪೂರ್ಣಗೊಳಿಸುವ ವಿಶ್ವಾಸವಿಲ್ಲ. ಕಾರಣ, ಕಾಮಗಾರಿ ಅತ್ಯಂತ ನಿಧಾನಗತಿಯಲ್ಲಿ ನಡೆಯುತ್ತಿದೆ.

ಯಾದವಾಡದವರೆಗೆ ಮಾತ್ರ ವೇಗದಿಂದ ನಡೆದಿದ್ದು, ಅದರಂತೆ ಮುಧೋಳ, ಜಮಖಂಡಿ, ರಬಕವಿ, ಬನಹಟ್ಟಿ, ತೇರದಾಳ, ಹಾರೂಗೇರಿ ಸೇರಿದಂತೆ ಕುಡಚಿಯವರೆಗೂ ಭರದಿಂದ ಕಾಮಗಾರಿ ನಡೆದರೆ ಮಾತ್ರ ತಮ್ಮ ಭರವಸೆಯಂತೆ 2025ರ ಒಳಗಾಗಿ
ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದರು.

ಗೋವಾಕ್ಕೆ ರೈಲು ವಿಸ್ತರಿಸಿ: ಹುಬ್ಬಳ್ಳಿ ನಿಜಾಮುದ್ದೀನ ಎಕ್ಸ್‌ಪ್ರೆಸ್‌ ರೈಲನ್ನು ವಾರದಲ್ಲಿ 3 ಬಾರಿ ಸಂಚರಿಸುವಂತೆ ಕ್ರಮಕೈಗೊಳ್ಳಬೇಕು. ವಿಜಯಪುರದಿಂದ ತಿರುಪತಿಗೆ ಹೊಸ ರೈಲು ಆರಂಭಿಸಬೇಕು. ಈಚೆಗೆ ಇಂಟರ್‌ ಸಿಟಿ ರೈಲನ್ನು ಸ್ಥಗಿತಗೊಳಿಸಿದ್ದು, ಸೊಲಾಪೂರದಿಂದ ವಾಸ್ಕೋ (ಗೊವಾ) ಕ್ಕೆ ವಿಸ್ತರಿಸಿ ಪುನಃ ಆರಂಭಿಸಬೇಕು.

ಇದಕ್ಕೆ ಸೇರಿದಂತೆ ಗದಗ-ಹುಟಗಿ ಜೋಡಿ ಮಾರ್ಗ ವಿದ್ಯುತ್ತೀಕರಣ ಅತೀ ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಅನುಕೂಲ ಮಾಡಿಕೊಡಬೇಕು. ಬಾಗಲಕೋಟೆ ರೈಲು ನಿಲ್ದಾಣ ಅಮೃತ ಭಾರತ ರೈಲುಯೋಜನೆ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿದ್ದು,
ಪ್ಲಾಟ್‌ಫಾರ್ಮಗಳ ಸಂಪರ್ಕಕ್ಕೆ ಲಿಫ್ಟ್‌ ವ್ಯವಸ್ಥೆ, ಎಕ್ಸಿಲೇಟರ್‌ ಮೇಲುಸೇತುವೆ ಬ್ಯಾಟರಿ ಕಾರ್‌, ನಿರ್ಮಲ ಶೌಚಾಲಯಗಳು (ಸಿ.ಓ.ಪಿ) ಪ್ಲಾಟ್‌ ಫಾರ್ಮಗಳ ಪೂರ್ಣ ಪ್ರಮಾಣದ ಮೇಲ್ಛಾವಣಿಗೆ ಸೇರಿದಂತೆ ಯೋಜನೆಗೆ ಅನುಗುಣವಾಗಿ ಸಾರ್ವಜನಿಕ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಲೋಕಾಪುರದಿಂದ ರೈಲು ಸಂಪರ್ಕ : ಎಲ್ಲ ಬೇಡಿಕೆಗಳನ್ನು ಆಲಿಸಿದ ಸಂಜೀವ ಕಿಶೋರ, ನಾವು ಕೊಟ್ಟ ಭರವಸೆಯಂತೆ ಕುಡಚಿ ಮಾರ್ಗ 2025ರ ಒಳಗಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಕಾಮಗಾರಿ ಪ್ರಾರಂಭಿಸಲು ಕ್ರಮಕೈಗೊಳ್ಳಲಾಗುವುದು. ಅದರಂತೆ ಮಾರ್ಚ್‌ ತಿಂಗಳ ಒಳಗಾಗಿ ಲೋಕಾಪುರ ರೈಲು ನಿಲ್ದಾಣ ಉದ್ಘಾಟಿಸಿ, ಪ್ರಮುಖ ನಗರಗಳಿಗೆ ಲೋಕಾಪುರದಿಂದ ರೈಲು ಸಂಪರ್ಕ ಕಲ್ಪಿಸಲಾಗುವುದು ಎಂದು ತಿಳಿಸಿದರು.

ರೈಲ್ವೆ ಇಲಾಖೆಯ ವಿಭಾಗೀಯ ವ್ಯವಸ್ಥಾಪಕ ಹರ್ಷಾ ಖರೆ, ರೈಲ್ವೆ ಹೋರಾಟ ಸಮಿತಿಯ ಅಧ್ಯಕ್ಷ ಕುತ್ಬುದ್ದಿನ ಖಾಜಿ, ಶ್ರೀನಿವಾಸ ಬಳ್ಳಾರಿ, ಜಯಶ್ರೀ ಗುಳಬಾಳ, ಮಂಜುಳಾ ಬುಸಾರೆ, ಪ್ರೇಮಾ ರಾಠೊಡ, ಧರ್ಮ ಡಿ.ಸಿ, ಫಹಾದ ಪಟೇಲ, ಮೈನುದ್ದೀನ ಖಾಜಿ ಮುಂತಾದವರು ಇದ್ದರು.

ಸಂಸದ ನೇತೃತ್ವದಲ್ಲಿ ಮನವಿ: ಬಾಗಲಕೋಟೆಯಿಂದ ಮಲ್ಲಾಪುರ-ಮುಗಳ್ಳೋಳ್ಳಿ ರಸ್ತೆ ನಿರ್ಮಾಣ ಮಾಡುವಂತೆ
ಮಲ್ಲಿಕಾರ್ಜುನ ದೇವಸ್ಥಾನ ಜೀರ್ಣೋದ್ಧಾರ ಕಮಿಟಿಯಿಂದ ಸಂಸದ ಪಿ.ಸಿ. ಗದ್ದಿಗೌಡರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಬಾಗಲಕೋಟೆಯಿಂದ 2-3 ಕಿಮೀ ಅಂತರದಲ್ಲಿರುವ ಮಲ್ಲಾಪುರ ಮಲ್ಲಯ್ಯನ ದೇವಸ್ಥಾನವು ಬಹಳ ಪುರಾತನವಾಗಿದ್ದು, ಈ
ದೇವಸ್ಥಾನಕ್ಕೆ ಬಾಗಲಕೋಟೆಯಿಂದ ಸಾವಿರಾರು ಭಕ್ತಾದಿಗಳು ಹೋಗಿ ಬರುತ್ತಿದ್ದು, ಆಲಮಟ್ಟಿ ಹಿನ್ನಿರಿನಿಂದ ರಸ್ತೆ ಮುಳಗಡೆ ಹೊಂದಿದೆ. ದೇವಸ್ಥಾನಕ್ಕೆ ಹೋಗಿ ಬರಲು 20-25 ಕಿಮೀ ಸುತ್ತುವರಿದು ಹೋಗಿಬರಬೇಕಾಗುತ್ತದೆ. ಅಲ್ಲದೆ ಮಲ್ಲಾಪೂರದ ಸುತ್ತಮುತ್ತಲು ರೈತರ ಜಮಿನುಗಳಿದ್ದು, ಜಮೀನುಗಳಿಗೆ ಹೋಗಲು ರೈತರಿಗೂ ಸಹ ತೊಂದರೆಯಾಗುತ್ತಿದೆ, ಈಗ ಹೊಸದಾಗಿ ರೈಲ್ವೆ ಹಳಿ ಕಾಮಗಾರಿ ನಡೆದಿದ್ದು, ಬಾಗಲಕೋಟೆಯಿಂದ (ಮಲ್ಲಾಪುರ) ಮುಗಳೊಳ್ಳಿಗೆ ಹೋಗಲು ರಸೆ ಡಬಲ್‌ ಲೈನ್‌ ನಿರ್ಮಾಣ ಕಾರ್ಯ ತೀವ್ರಗತಿಯಲ್ಲಿ ನಡೆದಿದ್ದು, ರೈತರಿಗೆ ಮತ್ತು ಸಾರ್ವಜನಿಕರಿಗೆ ಅನುಕೂಲವಾಗವಂತೆ ಬಾಗಲಕೋಟೆಯಿಂದ ಮಲ್ಲಾಪುರ ಮುಗಳ್ಳೋಳ್ಳಿಗೆ ಹೋಗಲು ಹೊಸದಾಗಿ ನಿರ್ಮಾಣವಾಗುತ್ತಿರುವ ರೈಲ್ವೆ ಹಳಿಯ ಮಗ್ಗಲು ರಸ್ತೆಯನ್ನು ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದರು.

ಕಮಿಟಿ ಪ್ರಭುಕಾಂತ ನಾರಾ, ಮಲ್ಲಪ್ಪ ಡಾವಣಗೇರೆ, ವೀರಣ್ಣ ಗಂಗಾವತಿ, ರಾಮಣ್ಣ ಕಟ್ಟಿಮನಿ, ಬಸವರಾಜ ಯಂಕಂಚಿ , ನಾನಾಗೌಡ ಪಾಟೀಲ, ಮಲ್ಲಯ್ಯಸ್ವಾಮಿ ಕುಂದರಿಗಿಮಠ, ಬಸಯ್ಯ, ಶಂಕರ ಸಗರ, ಸಂಗಪ್ಪ ಸಜ್ಜನ, ದರಿಯಪ್ಪಯಳ್ಳಿಗುತ್ತಿ, ಸಂಗಪ್ಪ ಕೊಪ್ಪದ, ಶಿವಶಂಕರ ಯಾದವಾಡ, ತಮ್ಮಣ್ಣ ಯಳ್ಳಿಗುತ್ತಿ, ಸುರೇಶ ಮಜ್ಜಗಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ‍್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ

IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ‍್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.