Hunsur: ಅಕ್ರಮ ಸಂಬಂಧ ಪ್ರಶ್ನಿಸಿದ ಪತ್ನಿಗೆ ಥಳಿತ- ಜೈಲು ಸೇರಿದ ಪತಿರಾಯ- ಪ್ರೇಯಸಿ ಪರಾರಿ
Team Udayavani, Jan 20, 2024, 9:07 PM IST
ಹುಣಸೂರು: ಅಕ್ರಮ ಸಂಬಂಧ ಪ್ರಶ್ನಿಸಿದ ಪತ್ನಿಗೆ ಬೆಲ್ಟ್ ನಿಂದ ಹಿಗ್ಗಾಮುಗ್ಗ ಥಳಿಸಿದ ಪತಿರಾಯನನ್ನ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂದನಕ್ಕೆ ಒಪ್ಪಿಸಿರುವ ಘಟನೆ ತಾಲೂಕಿನ ಹಂಚ್ಯ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.
ಗ್ರಾಮದ ಸಯ್ಯಾದ್ ಮೊಹಿದೀನ್ರ ಪುತ್ರ ಸೈಯದ್ ಯಾಸಿನ್(32) ನ್ಯಾಯಾಂಗ ಬಂಧನಕ್ಕೊಳಗಾದಾತ, ಈತನ ಪತ್ನಿ ಅಮ್ರಿನ್ಭಾನು ಪತಿಯಿಂದ ಹಿಗ್ಗಾಮುಗ್ಗ ಥಳಿತದ ಹಲ್ಲೆಗೆ ಒಳಗಾಗಿ ಸಾರ್ವಜನಿಕ ಅಸ್ಪತ್ರೆ ಸೇರಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ವಿವರ: ಪತಿಯ ಥಳಿತಕ್ಕೆ ಒಳಗಾಗಿ ಅಸ್ಪತ್ರೆಗೆ ದಾಖಲಾಗಿರುವ ಅಮ್ರಿನ್ಬಾನುರಿಗೆ ಕಳೆದ 8 ವರ್ಷಗಳ ಹಿಂದೆ ಹಂಚ್ಯಾದ ಸೈಯದ್ ಯಾಸ್ಮಿನ್ನೊಂದಿಗೆ ಮದುವೆಯಾಗಿ ಮೂರು ಮಕ್ಕಳಿದ್ದಾರೆ. ಸೈಯದ್ ಯಾಸ್ಮಿನ್ ಟೂರಿಸ್ಟ್ ಬಸ್ಗಳನ್ನು ಬಾಡಿಗೆಗೆ ಕಳುಹಿಸುತ್ತಿದ್ದ, ಪ್ರವಾಸಕ್ಕೆ ಬಸ್ಗಳನ್ನು ಬಾಡಿಗೆಗೆ ಕಳುಹಿಸುತ್ತಿದ್ದ ವೇಳೆ ರಾಮನಾಥಪುರದ ಮಹಿಳೆಯೊಂದಿಗೆ ಪರಿಚಯವಾಗಿ ಆಕೆ ಆಗಾಗ್ಗೆ ಮನೆಗೆ ಬರುತ್ತಿದ್ದಳು. ಸೈಯದ್ ಯಾಸ್ಮಿನ್ ಆಕೆಯೊಂದಿಗೆ ಅಕ್ರಮ ಸಂಬಂಧ ವಿರಿಸಿಕೊಂಡಿದ್ದ ಎನ್ನಲಾಗಿದ್ದು, ಈ ವಿಚಾರವಾಗಿ ಜ. 16 ರಂದು ತನ್ನ ಪತಿ ಅಪರಿಚಿತ ಮಹಿಳೆಯೊಂದಿಗೆ ನಡೆದುಕೊಳ್ಳುತ್ತಿರುವುದನ್ನು ಕಂಡು ಈ ರೀತಿ ಒಳ್ಳೆಯದಲ್ಲವೆಂದು ಪತ್ನಿ ತಿಳಿಹೇಳಿದ್ದರಿಂದ ಕುಪಿತಗೊಂಡ ಪತಿರಾಯ ಮಾರಣಾಂತಿಕವಾಗಿ ಹಿಗ್ಗಾ ಮುಗ್ಗಾ ಥಳಿಸಿ, ತನ್ನ ಬೆಲ್ಟ್ನಿಂದ ಕುತ್ತಿಗೆಗೆ ಸುತ್ತಿ, ಕೊಲೆ ಮಾಡಲು ಪ್ರಯತ್ನಪಟ್ಟಿದ್ದರಿಂದ ಅಸ್ಪಸ್ಥಗೊಂಡಾಕೆಯನ್ನು ಕುಟುಂಬದವರು ಅಮ್ರಿನ್ಬಾನುಳನ್ನು ಸಾರ್ವಜನಿಕ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಪೊಲೀಸರಿಗೆ ದೂರು ನೀಡಿದ್ದರು. ಹಲ್ಲೆ ನಡೆಸಿ ತನ್ನ ಪ್ರೇಯಸಿಯೊಂದಿಗೆ ಪರಾರಿಯಾಗಿದ್ದ.
ಪರಾರಿಯಾಗಿದ್ದ ಸೈಯದ್ಯಾಸ್ಮಿನ್ ಶನಿವಾರದಂದು ಹುಣಸೂರು ಬಸ್ ನಿಲ್ದಾಣದಲ್ಲಿ ನಿಂತಿದ್ದ ವೇಳೆ ಪೋಲಿಸರು ಅರೋಪಿಯನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿ ಅರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕಾರ್ಯಚರಣೆಯಲ್ಲಿ ಇನ್ಸ್ಪೆಕ್ಟರ್ ಎನ್.ಮುನಿರಾಜು ಮಾರ್ಗದರ್ಶನದಲ್ಲಿ ಮಲ್ಲೇಶ್, ಸಿದ್ದರಾಜು ಮತ್ತಿತರ ಸಿಬ್ಬಂದಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ
Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್ನೋಟ್ ಪತ್ತೆ!
Hunsur: ನಾಗರಹೊಳೆಯಲ್ಲಿ ಗುಂಡಿಕ್ಕಿ ಅಪರೂಪದ ಕೂರ ಭೇಟೆಯಾಡಿದ್ದ ಇಬ್ಬರ ಬಂಧನ; ಓರ್ವ ಪರಾರಿ
Hunsur: ಅತಿಯಾದ ಮದ್ಯ ಸೇವನೆ; ಯುವಕ ಸಾವು
State Politics: ನಮ್ಮಲ್ಲಿ ಒಳಜಗಳ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Dakshina Kannada: 14 ಗ್ರಾ.ಪಂ.ಗಳಲ್ಲಿ ಶೇಕಡಾ 100 ತೆರಿಗೆ ಸಂಗ್ರಹ
“ಫೆಡೆಕ್ಸ್ ಪಾರ್ಸೆಲ್’ ಹೆಸರಲ್ಲಿ ಸೈಬರ್ ವಂಚಕರಿಂದ “ಗಾಳ’
Daily Horoscope: ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಅನವಶ್ಯ ವೈಮನಸ್ಯಕ್ಕೆ ಅವಕಾಶ ಬೇಡ
ಆಧಾರ್-ಪಹಣಿ ಸೀಡಿಂಗ್ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!
49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ