Manipal ನನ್ನ ಬದುಕಿಗೆ ಅರ್ಥವಂತಿಕೆ ಕೊಟ್ಟ ಉದಯವಾಣಿ: ಜಯಮಾಲಾ ಬಣ್ಣನೆ


Team Udayavani, Jan 20, 2024, 11:06 PM IST

Manipal ನನ್ನ ಬದುಕಿಗೆ ಅರ್ಥವಂತಿಕೆ ಕೊಟ್ಟ ಉದಯವಾಣಿ: ಜಯಮಾಲಾ ಬಣ್ಣನೆ

ಮಣಿಪಾಲ: ನನ್ನ ಜೀವನದ ಹಾದಿ ಅನೇಕ ರಮ್ಯ ರೋಚಕ ತಿರುವುಗಳಿಂದ ಕೂಡಿರುವ ಕಾಡಿನ ಪಯಣದಂತೆ. ನನ್ನನ್ನು ಕೈಹಿಡಿದು ಕೊನೆಗೆ ಮಣಿಪಾಲದ ಈ ವೇದಿಕೆ ಮೇಲೆ ನಿಲ್ಲಿಸಿದೆ. ಈ ಯಶಸ್ಸಿನಲ್ಲಿ ಕೈ ಹಿಡಿದು ನಡೆಸಿದ ಅನೇಕ ಮಹಾನುಭಾವರು, ಸಂಸ್ಥೆಗಳು, ದೈವಗಳ ಕೃಪೆಯೂ ಇದೆ. ಅಂತಹ ಪ್ರಾತಃಸ್ಮರಣೀಯರಲ್ಲಿ ನನ್ನ ಬದುಕಿಗೆ ಅರ್ಥವಂತಿಕೆ ತಂದ ಸಂಗತಿಗಳಲ್ಲಿ ಮಣಿ ಪಾಲದ “ಉದಯವಾಣಿ’ ಪಾತ್ರ ಹಿರಿದು ಎಂದು ಹಿರಿಯ ಚಲನಚಿತ್ರ ನಟಿ ಡಾ| ಜಯಮಾಲಾ ರಾಮಚಂದ್ರ ಹೇಳಿದರು.

ಅಕಾಡೆಮಿ ಆಫ್ ಜನರಲ್‌ ಎಜುಕೇಶನ್‌, ಮಾಹೆ, ಮಣಿಪಾಲ್‌ ಎಜುಕೇಶನ್‌ ಆ್ಯಂಡ್‌ ಮೆಡಿಕಲ್‌ ಗ್ರೂಪ್‌, ಮಣಿಪಾಲ್‌ ಮೀಡಿಯ ನೆಟ್‌ವರ್ಕ್‌ ಲಿ. ಡಾ| ಟಿಎಂಎ ಪೈ ಫೌಂಡೇಶನ್‌ ವತಿಯಿಂದ ಶುಕ್ರವಾರ ಮಣಿಪಾಲ ಗ್ರೀನ್ಸ್‌ನಲ್ಲಿ ನಡೆದ ಹೊಸ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

ನಾನು ಚಿತ್ರರಂಗಕ್ಕೆ ಬಂದ ದಿನದಿಂದಲೂ ನನ್ನ ಬೆಳವಣಿಗೆಯನ್ನು ಪ್ರೋತ್ಸಾಹಿಸಿದ್ದಲ್ಲದೆ ನನ್ನ ಓರೆಕೋರೆಗ ಳನ್ನು ಉದಯವಾಣಿ ಗುರುತಿಸಿ ತಿದ್ದಿದೆ. ಈ ಋಣವನ್ನು ತೀರಿಸಲು ಸಾಧ್ಯವಿಲ್ಲ ಎನ್ನುವಾಗ ಮತ್ತೆ ಈ ಪ್ರಶಸ್ತಿ ಮೂಲಕ ನನ್ನನ್ನು ಮತ್ತೆ ಮಹಾ ಋಣಭಾರವನ್ನು ಮಣಿಪಾಲದ ಸಂಸ್ಥೆಗಳು ಹೊರಿಸಿವೆ ಎಂಬ ಮಾತು ಉತ್ಪ್ರೇಕ್ಷೆಯಲ್ಲ ಎಂದು ಅವರು ಜಯಮಾಲಾ ಹೇಳಿದರು.

ದಕ್ಷಿಣ ಭಾರತದಲ್ಲಿ ಗಂಡು ಆಳ್ವಿ ಕೆಯ ಕ್ಷೇತ್ರವಾಗಿದ್ದ ಚಲನಚಿತ್ರವಾಣಿಜ್ಯ ಮಂಡಳಿಗೆ ಅಧ್ಯಕ್ಷೆಯಾಗಿ ಆಯ್ಕೆ ಯಾದಾಗ ಕನ್ನಡ ಚಿತ್ರರಂಗದ ಅಮೃತ ಮಹೋತ್ಸವವನ್ನು ಮುನ್ನಡೆಸಬೇಕಾದ ಸವಾಲು ಬಂದಾಗಲೂ ನನಗೆ ಒಳ ಧೈರ್ಯವಾಗಿ ಇದ್ದದ್ದು ಉದಯವಾಣಿ ಬೆಂಬಲ. ಉದಯವಾಣಿಯಿಂದ ಬದು ಕನ್ನು ಕಲಿತ ಸಹಸ್ರಾರು ಮಂದಿಯಲ್ಲಿ ನಾನೂ ಒಬ್ಬಳು ಎಂಬುದು ಹೆಮ್ಮೆಯ ವಿಷಯ ಎಂದರು.

ಇತರ ಪುರಸ್ಕೃತರಾದ ಇಂಡಿಯನ್‌ ಓವರ್ಸಿಸ್‌ ಬ್ಯಾಂಕ್‌ ನಿವೃತ್ತ ಅಧ್ಯಕ್ಷ ಡಾ| ಎಂ. ನರೇಂದ್ರ, ಮಣಿಪಾಲ ಕೆಎಂಸಿ ಮೆಡಿಸಿನ್‌ ವಿಭಾಗದ ಪ್ರಾಧ್ಯಾಪಕ ಡಾ| ಎಚ್‌. ಮಂಜುನಾಥ ಹಂದೆ, ಹಿರಿಯ ಕೃಷಿಕ ಬಿ.ಕೆ. ದೇವ ರಾವ್‌, ಮಂಗಳೂರು ಕೆಎಂಸಿ ನಿವೃತ್ತ ಡೀನ್‌ ಡಾ| ಎಡ್ಕತೋಡಿ ಸಂಜೀವ ರೈ, ಪ್ರಶಸ್ತಿ ಪ್ರದಾನ ಮಾಡಿದ ಮಾಹೆ ಟ್ರಸ್ಟ್‌ ಅಧ್ಯಕ್ಷ ಡಾ| ರಂಜನ್‌ ಪೈ, ಟ್ರಸ್ಟಿ ವಸಂತಿ ಪೈ, ಎಂಎಂಎನ್‌ಎಲ್‌ ಕಾರ್ಯನಿರ್ವಾಹಕ ಅಧ್ಯಕ್ಷ ಟಿ. ಸತೀಶ್‌ ಯು. ಪೈ, ಡಾ| ಟಿಎಂಎ ಪೈ ಪ್ರತಿಷ್ಠಾನದ ಅಧ್ಯಕ್ಷ ಟಿ. ಅಶೋಕ್‌ ಪೈ, ಮಾಹೆ ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌, ಕುಲಪತಿ ಲೆ| ಜ| ಡಾ| ಎಂ.ಡಿ. ವೆಂಕಟೇಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.