Ayodhya Ram Mandir; ಸಾರ್ವಜನಿಕರೊಂದಿಗೆ ದೀಪೋತ್ಸವದಲ್ಲಿ ಮಿಂದೆದ್ದ ಮುಸ್ಲಿಂ ಬಾಂಧವರು
Team Udayavani, Jan 22, 2024, 9:26 PM IST
ಕುಷ್ಟಗಿ:ಅಯೋಧ್ಯೆ ಶ್ರೀರಾಮ ಮಂದಿರ ಲೋಕಾರ್ಪಣೆ ಹಾಗೂ ಶ್ರೀರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕುಷ್ಟಗಿ ಪಟ್ಟಣದ ಹಳೆ ಬಜಾರ್ ಶ್ಯಾಮೀದ್ ಕಟ್ಟೆಯಲ್ಲಿ ಮುಸ್ಲಿಂ ಸಮುದಾಯದವರು ಸೇರಿದಂತೆ ಸಾರ್ವಜನಿಕರು ದೀಪಗಳನ್ನು ಹಚ್ಚಿ ದೀಪೋತ್ಸವ ಆಚರಿಸಿ ಸಂಭ್ರಮಿಸಿದರು.
ಹಳೆ ಬಜಾರದಲ್ಲಿ ಹಲವು ವರ್ಷಗಳಿಂದ ಮುಸ್ಲಿಂ ಸಮುದಾಯ ಸೇರಿದಂತೆ ಸ್ಥಳೀಯರು ಪ್ರತಿ ವರ್ಷ ಗಣೇಶೋತ್ಸವ ಆಚರಿಸುತ್ತಾ ಬಂದಿರುವುದು ಭಾವೈಕ್ಯತೆಗೆ ಹಳೆ ಬಜಾರ ಸಾಕ್ಷಿಯಾಗಿದೆ.
ಮುಂದುವರಿದ ಭಾಗವಾಗಿ ಮುಸ್ಲಿಂ ಸಮುದಾಯವರು ಆರಾಧಿಸುವ ಶ್ಯಾಮೀದ ಸಾಬ್ ಕಟ್ಟೆಯಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಬಿಂಬಿಸಲು ಮುಸ್ಲಿಂ ಸಮುದಾಯದ ಯುವಕರು ಶ್ಯಾಮೀದಸಾಬ್ ಕಟ್ಟೆಯಲ್ಲಿ ಹಣತೆಯ ದೀಪ ಹಚ್ಚಿ ಸಂಭ್ರಮಿಸಿದರು.
ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಅಮೀನುದ್ದೀನ್ ಮುಲ್ಲಾ, ಅನ್ವರ್ ಅತ್ತಾರ ನೇತೃತ್ವದಲ್ಲಿ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಶ್ಯಾಮೀದದಾಬ್ ಕಟ್ಟೆಯ ಮೇಲೆ ಹಣತೆಗಳಿಗೆ ದೀಪೋತ್ಸವ ಆಚರಿಸಿರುವುದು ಗಮನಾರ್ಹ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು
ಸ್ತ್ರೀ ಶಕ್ತಿ ಗುಂಪಿನ ಸದಸ್ಯೆಯರಿಗೆ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳ, ಪ್ರತಿಭಟನೆ
ಕುಕನೂರು: ಸೌಕರ್ಯವಿಲ್ಲದೇ ಹಮಾಲರ ಕಾಲೋನಿ ಅನಾಥ!
3ನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಗೆ 1ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ
Gangavathi ಖಾಸಗಿ ಶಾಲೆಗಳಿಂದ ಪ್ರವೇಶ ನೆಪದಲ್ಲಿ ಲಕ್ಷಾಂತರ ರೂ.ವಸೂಲಿ ಖಂಡಿಸಿ ಪ್ರತಿಭಟನೆ