Lok Sabha ಚುನಾವಣೆ ನಂತರ ರಾಹುಲ್ ಗಾಂಧಿಯವರನ್ನು ಬಂಧಿಸಲಾಗುವುದು: ಅಸ್ಸಾಂ ಸಿಎಂ
ಎಷ್ಟು ಬೇಕೋ ಅಷ್ಟು ಕೇಸ್ ಹಾಕಲಿ ನನಗೆ ಭಯವಿಲ್ಲ..ರಾಹುಲ್ ಆಕ್ರೋಶ
Team Udayavani, Jan 24, 2024, 8:13 PM IST
ಸಿಬ್ಸಾಗರ್: ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಎಫ್ಐಆರ್ ದಾಖಲಾಗಿರುವ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಚುನಾವಣೆ ನಂತರ ಬಂಧಿಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಬುಧವಾರ ಹೇಳಿದ್ದಾರೆ.
ಮಂಗಳವಾರ ನಡೆದ ಕಾಂಗ್ರೆಸ್ ಪಕ್ಷದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ವೇಳೆ ಅಸ್ಸಾಂ ಪೊಲೀಸರು ಸ್ವಯಂ ಪ್ರೇರಿತವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಇತರ ಹಲವು ನಾಯಕರ ವಿರುದ್ಧ “ಉದ್ದೇಶಪೂರ್ವಕ ಹಿಂಸಾಚಾರದ ಕೃತ್ಯಗಳ” ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
“ನಾವು ಎಫ್ಐಆರ್ ದಾಖಲಿಸಿದ್ದೇವೆ. ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸಲಿದೆ ಮತ್ತು ಲೋಕಸಭೆ ಚುನಾವಣೆಯ ನಂತರ ರಾಹುಲ್ ಗಾಂಧಿಯವರನ್ನು ಬಂಧಿಸಲಾಗುವುದು ”ಎಂದು ಸಿಬ್ಸಾಗರ್ ಜಿಲ್ಲೆಯ ನಜೀರಾದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಶರ್ಮಾ ಸುದ್ದಿಗಾರರಿಗೆ ಹೇಳಿಕೆ ನೀಡಿದ್ದಾರೆ.
”ಎಸ್ಐಟಿ ಮೂಲಕ ಸಮಗ್ರ ತನಿಖೆಗಾಗಿ ಪ್ರಕರಣವನ್ನು ಅಸ್ಸಾಂ ಸಿಐಡಿಗೆ ವರ್ಗಾಯಿಸಲಾಗಿದೆ” ಎಂದು ಪೊಲೀಸ್ ಮಹಾನಿರ್ದೇಶಕ ಜಿ.ಪಿ. ಸಿಂಗ್ ಹೇಳಿದ್ದಾರೆ.
ರಾಹುಲ್ ಆಕ್ರೋಶ
ಅಸ್ಸಾಂ ನಲ್ಲಿ ನಡೆಯುತ್ತಿರುವ ಯಾತ್ರೆ ವೇಳೆ ಆಕ್ರೋಶ ಹೊರ ಹಾಕಿರುವ ರಾಹುಲ್ ಗಾಂಧಿ, ”ಹಿಮಂತ ಬಿಸ್ವಾ ಶರ್ಮಾ ದೇಶದ ಅತ್ಯಂತ ಭ್ರಷ್ಟ ಮುಖ್ಯಮಂತ್ರಿಯಾಗಿದ್ದು, ಅವರ ನಿಯಂತ್ರಕ ದೆಹಲಿಯಲ್ಲಿ ಕುಳಿತಿದ್ದಾರೆ. ಶರ್ಮಾ ಅವರಿಗೆ ರಾಹುಲ್ ಗಾಂಧಿಯನ್ನು ಹೆದರಿಸಬಹುದು ಎಂಬ ಕಲ್ಪನೆ ಎಲ್ಲಿಂದ ಬಂತು ಎಂದು ತಿಳಿದಿಲ್ಲ.ನನ್ನ ಮೇಲೆ ಎಷ್ಟು ಬೇಕೋ ಅಷ್ಟು ಕೇಸ್ ಹಾಕಲಿ ನನಗೆ ಭಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಿಕಿತ್ಸೆಗೆಂದು ಭಾರತಕ್ಕೆ ಬಂದು ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದ ಶವವಾಗಿ ಪತ್ತೆ
Loksabha poll: ಇವಿಎಂ ನೆಲಕ್ಕೆ ಎಸೆದು ಪುಡಿಗೈದ ಶಾಸಕ, ಕೃತ್ಯ ಸಿಸಿಟಿವಿಯಲ್ಲಿ ಸೆರೆ
Maharashtra: ಜಲಾಶಯದ ಹಿನ್ನೀರಿನಲ್ಲಿ ದೋಣಿ ಮಗುಚಿ ಆರು ಮಂದಿ ಮೃತ್ಯು
Telangana: ACP ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ; 3.5 ಕೋಟಿ ರೂ. ಆಸ್ತಿ ಪತ್ತೆ!
Porsche ಅವಘಡ: ಬಿಲ್ಡರ್ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಪೊಲೀಸರು
MUST WATCH
ಹೊಸ ಸೇರ್ಪಡೆ
ಚಿಕಿತ್ಸೆಗೆಂದು ಭಾರತಕ್ಕೆ ಬಂದು ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದ ಶವವಾಗಿ ಪತ್ತೆ
Bantwala: ಸ್ಕೂಟರ್ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು
Thirthahalli ತಾಲೂಕುಆಸ್ಪತ್ರೆ ಪಕ್ಕದ ಜನೌಷಧಿ ಕೇಂದ್ರ ಬಾಗಿಲು ಬಂದ್:ರೋಗಿಗಳ ತೀವ್ರ ಪರದಾಟ
Ballari: 55 ಕೆಜಿ ಗಾಂಜಾ ಸಹಿತ ಐವರ ಬಂಧನ
Loksabha poll: ಇವಿಎಂ ನೆಲಕ್ಕೆ ಎಸೆದು ಪುಡಿಗೈದ ಶಾಸಕ, ಕೃತ್ಯ ಸಿಸಿಟಿವಿಯಲ್ಲಿ ಸೆರೆ