Politics: ಲೋಕಸಭೆ ಚುನಾವಣೆ ಬಳಿಕ ಮೂರು ಡಿಸಿಎಂ ಬೇಡಿಕೆ: ಸತೀಶ್ ಜಾರಕಿಹೊಳಿ
Team Udayavani, Jan 25, 2024, 12:12 AM IST
ಬೆಂಗಳೂರು: ಮೂರು ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿ ವಿಚಾರಕ್ಕೆ ಸದ್ಯಕ್ಕೆ ತಡೆ ಬಿದ್ದಿರಬಹುದು. ಆದರೆ ಲೋಕಸಭೆ ಚುನಾವಣೆ ಬಳಿಕ ಮತ್ತೆ ಈ ವಿಚಾರ ಮುನ್ನೆಲೆಗೆ ಬರುವುದು ಖಚಿತ. – ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಇಂಥದ್ದೊಂದು ಸುಳಿವು ನೀಡಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಹುದ್ದೆ ಸೃಷ್ಟಿ ವಿಚಾರದ ಪ್ರಸಾವ ಸದ್ಯಕ್ಕಿಲ್ಲ. ಲೋಕಸಭೆ ಚುನಾವಣೆಯಲ್ಲಿ ಪಕ್ಷ ಅತಿ ಹೆಚ್ಚು ಸೀಟುಗಳೊಂದಿಗೆ ಗೆಲ್ಲಬೇಕು ಅಷ್ಟೇ. ಈಗ ಡಿಸಿಎಂ ಕೊಡಿ ಅನ್ನೋದು ಸರಿಯಲ್ಲ. ಲೋಕಸಭೆ ಚುನಾವಣೆ ಬಳಿಕ ಆ ಬೇಡಿಕೆ ಇರಲಿದೆ ಎಂದರು.
ಹೆಬ್ಟಾಳ್ಕರ್ ಮಗನಿಂದಲೂ ಟಿಕೆಟ್ಗೆ ಅರ್ಜಿ
ಲೋಕಸಭೆಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿ ಕೇಳಿದಾಗ, ಈಗ ಕೇವಲ ಒಂದು ಸುತ್ತಿನ ಸಮೀಕ್ಷೆ ಮತ್ತು ಚರ್ಚೆ ಆಗಿದೆ. ಇನ್ನೂ ಒಂದೆರಡು ಸುತ್ತಿನ ಸಭೆಗಳು ಆಗಬೇಕಿವೆ. ಬೆಳಗಾವಿಯಿಂದಲೂ ಎರಡು- ಮೂರು ಹೆಸರುಗಳನ್ನು ನೀಡಲಾಗಿದೆ. ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಅವರೂ ತಮ್ಮ ಮಗನಿಗೆ ಟಿಕೆಟ್ ಕೊಡಿಸಲು ಅರ್ಜಿ ಹಾಕಿದ್ದಾರೆ. ಆದರೆ ಅವರು ಬಹಿರಂಗವಾಗಿ ಎಲ್ಲೂ ಹೇಳಿಲ್ಲ. ಸಮೀಕ್ಷೆಯಲ್ಲಿ ಒಲವು ವ್ಯಕ್ತವಾದರೆ, ಅವರಿಗೇ ಟಿಕೆಟ್ ಕೊಡುತ್ತಾರಷ್ಟೇ ಎಂದರು.
ಟಿಕೆಟ್ ಅಂತಿಮಗೊಳ್ಳುವ ಮೊದಲು ಎಐಸಿಸಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಸಮೀಕ್ಷೆ ಮಾಡಿಸುತ್ತಾರೆ. ಯಾರಿಗೆ ಹೆಚ್ಚು ಒಲವು ಇದೆಯೋ ಅವರಿಗೆ ಟಿಕೆಟ್ ಆಗುತ್ತದೆ ಎಂದ ಅವರು, ರಾಮ ಮಂದಿರಕ್ಕೆ ಕಾಂಗ್ರೆಸ್ ನಾಯಕರು ಹೋಗುವ ಬಗ್ಗೆ ಸ್ವತಃ ಮುಖ್ಯಮಂತ್ರಿ ಈಗಾಗಲೇ ತಿಳಿಸಿದ್ದಾರೆ. ಅದರಂತೆ ವಿಶೇಷ ವಿಮಾನದಲ್ಲಿ ಹೋಗುವುದು ಅಂತ ಆಗಿದೆ. ಎಲ್ಲರೂ ಹೋಗುತ್ತೇವೆ ಅಂತ ಹೇಳುತ್ತಿದ್ದಾರೆ. ಅಲ್ಲಿಗೆ ಹೋಗಬಾರದು ಎಂದೇನಿಲ್ಲ ಎಂದು ಸ್ಪಷ್ಟಪಡಿಸಿದರು.
ಚಿಕ್ಕೋಡಿ ಉಸ್ತುವಾರಿಯಾಗಿ ಲಕ್ಷ್ಮೀ ಹೆಬ್ಟಾಳ್ಕರ್ ನೇಮಕಕ್ಕೆ ಮಾಜಿ ಸಚಿವ ಪ್ರಕಾಶ ಹುಕ್ಕೇರಿ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, ಈ ಸಂಬಂಧ ನನಗೂ ಹುಕ್ಕೇರಿ ಅವರು ಕರೆ ಮಾಡಿ ಮಾತನಾಡಿದ್ದಾರೆ. ಅವರೂ ನಮ್ಮ ಪಕ್ಷದವರೇ ಆಗಿದ್ದಾರೆ. ಅದಕ್ಕೆ ಬೇರೆ ವ್ಯಾಖ್ಯಾನ ಮಾಡುವುದು ಸರಿಯಲ್ಲ. ಜಿಲ್ಲೆಯವರು ಎಂದು ತಪ್ಪುಕಲ್ಪನೆ ಬೇಡ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್ ಬಳಕೆ
ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?
Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು
Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!
Heavy rain: ಮತ್ತೆ 8 ಜಿಲ್ಲೆಗಳಲ್ಲಿ ಭಾರೀ ಮಳೆ; ಸಿಡಿಲಿಗೆ ಮತ್ತೋರ್ವ ಯುವಕ ಸಾವು
MUST WATCH
ಹೊಸ ಸೇರ್ಪಡೆ
Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
ಕಾರ್ತಿಕ್ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?
Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ
The Judgement; ಭವಿಷ್ಯ ನಿರ್ಧರಿಸುವ ಜಡ್ಜ್ಮೆಂಟ್: ರವಿಚಂದ್ರನ್