Mumbai: ದೇಶದ ಮೊದಲ ಬಾಹ್ಯಾಕಾಶ ತರಬೇತಿ- ಕೇಂದ್ರ ಮುಂಬೈನಲ್ಲಿ ಸ್ಥಾಪನೆ

ದೇಶದಲ್ಲೂ ವ್ಯೂಮ ಪ್ರವಾಸಕ್ಕೆ ಜನಪ್ರಿಯ ಸಾಧ್ಯತೆ- ಖಾಸಗಿ ಕಂಪನಿಯ ಮೊದಲ ಪ್ರಯತ್ನ

Team Udayavani, Feb 1, 2024, 12:50 AM IST

astrooo

ನವದೆಹಲಿ: ಮಾನವ ಸಹಿತ ಬಾಹ್ಯಾಕಾಶ ಯಾತ್ರೆ ನಡೆಸಬೇಕು ಎಂಬ ಕನಸನ್ನು ಇಸ್ರೋ ಹೊತ್ತಿರುವಾಗಲೇ ನವೀ ಮುಂಬೈನಲ್ಲಿ , ಏಷ್ಯಾದ ಮೊದಲ ಬಾಹ್ಯಾಕಾಶ ತರಬೇತಿ ಕೇಂದ್ರ ಸ್ಥಾಪನೆ ಬಗ್ಗೆ ಚಿಂತನೆ ನಡೆದಿದೆ. ಆ್ಯಸ್ಟ್ರೋಬೋರ್ನ್ ಏರೋಸ್ಪೇಸ್‌ ಎಂಬ ಕಂಪನಿ ಈ ಸಾಹಸಕ್ಕೆ ಕೈ ಹಾಕಿದೆ. ಅಮೆರಿಕ ಮತ್ತು ಇತರ ದೇಶಗಳಲ್ಲಿ ಇರುವಂತೆ ಭಾರತದಲ್ಲಿಯೂ ವ್ಯೋಮ ಪ್ರವಾಸ ಕ್ಷೇತ್ರವನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆಗಳನ್ನು ಇರಿಸಿದೆ.

ಈ ಉದ್ದೇಶಕ್ಕಾಗಿ ಸಂಸ್ಥೆ ಇಂಡಿಯನ್‌ ನ್ಯಾಷನಲ್‌ ಸ್ಪೇಸ್‌ ಪ್ರೊಮೋಷನ್‌ ಆ್ಯಂಡ್‌ ಅಥೊರೈಸೇಷನ್‌ ಸೆಂಟರ್‌ (ಇನ್‌-ಸ್ಪೇಸ್‌) ಜತೆಗೆ ನೋಂದಣಿಯನ್ನು ಮಾಡಿಸಿಕೊಳ್ಳಲಾಗಿದೆ ಎಂದು ಕಂಪನಿಯ ಸಹ ಸಂಸ್ಥಾಪಕ ಮತ್ತು ಸಿಇಒ ಅಕ್ಷತ್‌ ಮೊಹಿತೆ ತಿಳಿಸಿದ್ದಾರೆ. ತರಬೇತಿ ಮತ್ತು ಇತರ ಅಗತ್ಯಗಳಿಗಾಗಿ ಅಮೆರಿಕದ ನಾಸ್ಟರ್‌ ಸೆಂಟರ್‌ ಜತೆಗೆ ಸಹಭಾಗಿತ್ವ ಹೊಂದಲಾಗುತ್ತದೆ ಎಂದಿದ್ದಾರೆ ಮೊಹಿತೆ.

ತರಬೇತಿ ಕೇಂದ್ರ ಸ್ಥಾಪನೆ ಮಾಡುವ ನಿಟ್ಟಿನಲ್ಲಿ 1.5 ಎಕರೆ ಜಮೀನು ಅಗತ್ಯವಿದ್ದು, ಅದಕ್ಕಾಗಿ ಮಹಾರಾಷ್ಟ್ರ ಸರ್ಕಾರದ ಜತೆಗೆ ಮಾತುಕತೆ ನಡೆಸಲಾಗುತ್ತಿದೆ. ಶೀಘ್ರವೇ ಅದು ಲಭ್ಯವಾಗುವ ಸಾಧ್ಯತೆ ಇದೆ.

ಪರಿಣತರಿಂದ ತರಬೇತಿ:
18-24 ತಿಂಗಳ ಅವಧಿ ತರಬೇತಿ ಕೇಂದ್ರ ಸಿದ್ಧವಾಗಲಿದೆ. ಅಲ್ಲಿ ಖಾಸಗಿ ಮತ್ತು ಸರ್ಕಾರಿ ಕ್ಷೇತ್ರದ ಪರಿಣತರಿಂದ ಬಾಹ್ಯಾಕಾಶ ಯಾನಕ್ಕೆ ತರಬೇತಿ ನೀಡಲಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಬಂದರೂ 10-15 ಮಂದಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದರು.

6 ಸೀಟುಗಳ ವಾಣಿಜ್ಯಿಕ ವ್ಯೋಮ ವಿಮಾನ ನಿರ್ಮಾಣ
ಈ ಸಂಸ್ಥೆ ದೇಶದ ಮೊದಲ ಆರು ಸೀಟುಗಳ ಸಾಮರ್ಥ್ಯದ ವಾಣಿಜ್ಯಿಕ ವ್ಯೋಮ ವಿಮಾನ, ಐರಾವತವನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ಮೋಹಿತೆ ವಿವರಿಸಿದ್ದಾರೆ. ಅದು 400 ಕಿಮೀ ಎತ್ತರದಷ್ಟು ಪ್ರಯಾಣ ಮಾಡುವ ಸಾಮರ್ಥ್ಯ ಹೊಂದಿರಲಿದೆ. ಇತ್ತೀಚೆಗಷ್ಟೇ ಕಂಪನಿ ರಾಕೆಟ್‌ಗಳಿಗೆ ಬಳಕೆ ಮಾಡುವ ಇಂಧನದ ಬಗ್ಗೆ ಸಂಶೋಧನೆ ನಡೆಸಿ, ಪೇಟೆಂಟ್‌ ಪಡೆದುಕೊಂಡಿದೆ ಎಂದರು.

ಟಾಪ್ ನ್ಯೂಸ್

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Chabahar

Chabahar ಮಧ್ಯ ಏಷ್ಯಾಕ್ಕೆ ಭಾರತದ ಹೆಬ್ಟಾಗಿಲು

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Pudu ಗ್ರಾಮದ ಪುರಾತನ ಫರಂಗಿ ಕೆರೆ; ನರೇಗಾದಲ್ಲಿ ಪ್ರಯತ್ನಿಸಿದರೂ ಕೈಗೂಡದ ಅಭಿವೃದ್ಧಿ ಕಾರ್ಯ

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Chabahar

Chabahar ಮಧ್ಯ ಏಷ್ಯಾಕ್ಕೆ ಭಾರತದ ಹೆಬ್ಟಾಗಿಲು

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Pudu ಗ್ರಾಮದ ಪುರಾತನ ಫರಂಗಿ ಕೆರೆ; ನರೇಗಾದಲ್ಲಿ ಪ್ರಯತ್ನಿಸಿದರೂ ಕೈಗೂಡದ ಅಭಿವೃದ್ಧಿ ಕಾರ್ಯ

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.