Karnataka: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿಎಂ ಕ್ಲಾಸ್‌

ಜಾತ್ಯತೀತತೆಗೆ ಬದ್ಧರಾಗಿರಿ, ತಿಂಗಳಿಗೆ ಕನಿಷ್ಠ ಎರಡು ಬಾರಿಯಾದರೂ ತಮ್ಮ ಉಸ್ತುವಾರಿಯ ಜಿಲ್ಲೆಗೆ ಭೇಟಿ ನೀಡಿ

Team Udayavani, Feb 1, 2024, 1:11 AM IST

SIDDARAMAYYA IMP 2

ಬೆಂಗಳೂರು: ನಮ್ಮ ಸರಕಾರ ದಲ್ಲಿ ಅಧಿಕಾರಿಗಳು ಜಾತ್ಯತೀತತೆ ಮತ್ತು ಸಂವಿಧಾನಕ್ಕೆ ಬದ್ಧರಾಗಿರಬೇಕು. ಇಲ್ಲದಿದ್ದರೆ ಅಂಥವರಿಗೆ ಇಲ್ಲಿ ಮುಂದುವರಿಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜರಗಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಅವರು ಈ ಎಚ್ಚರಿಕೆ ನೀಡಿದ್ದಾರೆ.

ನಿಮ್ಮ ಅನುಭವಗಳು ಜಿಲ್ಲಾಡಳಿತಕ್ಕೆ ನೆರವಾಗ ಬೇಕು. ಸರಕಾರದ ಯೋಜನೆ, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು, ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ಷಿಪ್ರವಾಗಿ ತೀರ್ಮಾನ ತೆಗೆದುಕೊಳ್ಳಲು ನೆರವಾಗಬೇಕು ಎನ್ನುವ ಕಾರಣಕ್ಕೆ ನಿಮ್ಮನ್ನು ನೇಮಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಸಭೆಯಲ್ಲಿ ಹೇಳಿದರು.

ಎಪ್ರಿಲ್‌ ತಿಂಗಳಲ್ಲಿ ಮೇವಿನ ಕೊರತೆ ?
ಮೇವಿನ ಕಿಟ್‌ ವಿತರಣೆಗಾಗಿ ಸಂಪುಟ ಸಭೆಯಲ್ಲಿ 20 ಕೋಟಿ ರೂ ಮೊತ್ತದ ಪ್ರಸ್ತಾವ ಸಲ್ಲಿಸುವಂತೆ ಸೂಚಿಸಿದ ಸಿದ್ದರಾಮಯ್ಯ, ಮಾರ್ಚ್‌ , ಎಪ್ರಿಲ್‌ ಮತ್ತು ಮೇ ತಿಂಗಳಿನಲ್ಲಿ ಸಮಸ್ಯೆ ಎದುರಾಗಬಹುದು. ಇದಕ್ಕೆ ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು. ರೇಷ್ಮೆ, ತೋಟಗಾರಿಕೆ ಹಾಗೂ ಪಶುಸಂಗೋಪನೆ ಇಲಾಖೆಯ ಫಾರಂಗಳಲ್ಲಿ ಮೇವು ಬೆಳೆಯಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಕುಡಿಯುವ ನೀರು, ಮೇವು, ಜನರು ಗುಳೆ ಹೋಗದಂತೆ ನೋಡಿಕೊಳ್ಳುವುದು ಹಾಗೂ ಇನ್‌ಪುಟ್‌ ಸಬ್ಸಿಡಿ ವಿತರಣೆ – ಈ ನಾಲ್ಕು ಅಂಶಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ದಿನಚರಿ ನಿರ್ವಹಣೆ ಮಾಡಬೇಕು. ತಿಂಗಳಿಗೆ ಕನಿಷ್ಠ ಎರಡು ಬಾರಿಯಾದರೂ ತಂತಮ್ಮ ಉಸ್ತುವಾರಿಯ ಜಿಲ್ಲೆಗಳಿಗೆ ಭೇಟಿ ನೀಡುವುದನ್ನು ಕಡ್ಡಾಯ ಮಾಡಿಕೊಳ್ಳಿ ಎಂದು ನಿರ್ದೇಶನ ನೀಡಿದರು.

ಅರಣ್ಯದಲ್ಲೇ ಆಹಾರ ಕಲ್ಪಿಸಿ

ಮಾನವ-ವನ್ಯಪ್ರಾಣಿ ಸಂಘರ್ಷದ ಸಮಸ್ಯೆ ಕುರಿತು ಪ್ರಸ್ತಾವಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವನ್ಯಪ್ರಾಣಿಗಳು ರೈತರ ಜಮೀನಿಗೆ ನುಗ್ಗಲು ಆಹಾರ ಮತ್ತು ನೀರಿನ ಕೊರತೆಯೇ ಕಾರಣ. ಪ್ರಾಣಿಗಳಿಗೆ ಅರಣ್ಯದೊಳಗೆಯೇ ಆಹಾರ, ನೀರಿನ ವ್ಯವಸ್ಥೆ ಕಲ್ಪಿಸುವ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಿದ್ದರಾಮಯ್ಯ ಖಡಕ್‌ ಸೂಚನೆಗಳು
 ಸರಕಾರ ಬಂದು 8 ತಿಂಗಳಾಗಿದೆ. ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಒಗಳ ಸಭೆ ನಡೆಸಿ ಮೂರ್‍ನಾಲ್ಕು ತಿಂಗಳ ಹಿಂದೆ ಹಲವು ನಿರ್ದೇಶನ ನೀಡಿದ್ದೆ. ನೀವು ಉಸ್ತುವಾರಿ ವಹಿಸಿದ ಮೇಲೆ ಆಡಳಿತಾತ್ಮಕವಾಗಿ ಏನು ಬದಲಾವಣೆ ಆಗಿದೆ ಎನ್ನುವ ಮಾಹಿತಿಗಳನ್ನು ಸಭೆಗೆ ನೀಡಬೇಕು ಎಂದು ಸಭೆಯ ಆರಂಭದಲ್ಲೇ ಸಿಎಂ ಸೂಚಿಸಿದರು.
 ಸರಕಾರದ ಕಾರ್ಯಕ್ರಮಗಳು ಜನರಿಗೆ ತಲುಪಿಸುವಲ್ಲಿ ನಿಮ್ಮ ಅನುಭವ ಎಷ್ಟು ನೆರವಾಗಿದೆ ಹೇಳಿ ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳನ್ನು ಪ್ರಶ್ನಿಸಿದರು.
 ಕೆಲವು ಕಡೆ ಸರಕಾರದ ಗ್ಯಾರಂಟಿ ಯೋಜನೆಗಳು ಕೆಲವೇ ಕೆಲವು ಫ‌ಲಾನುಭವಿಗಳಿಗೆ ತಲುಪಲು ಆಗಿರುವ ತಾಂತ್ರಿಕ ಸಮಸ್ಯೆ ಬಗೆಹರಿಸಲು ಇನ್ನೂ ಯಾಕೆ ಆಗಿಲ್ಲ ಎಂದು ಖಾರವಾಗಿ ಪ್ರಶ್ನಿಸಿದ ಸಿಎಂ, ಕೆಲವರಿಗೆ ಮಾತ್ರ ಗ್ಯಾರಂಟಿ ಅನುಕೂಲ ತಲುಪಿಲ್ಲ. ಇವರೇ ಹೆಚ್ಚು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಯ ಅನುಕೂಲ ಪಡೆಯುತ್ತಿರುವವರು ಮೌನವಾಗಿದ್ದಾರೆ. ಆದ್ದರಿಂದ ತಾಂತ್ರಿಕ ಸಮಸ್ಯೆಯನ್ನು ಮೊದಲು ಬಗೆಹರಿಸಿ, ಅನರ್ಹ ಫ‌ಲಾನುಭವಿಗಳಿಗೆ ಮಾಹಿತಿ ನೀಡಿ ಅವರ ಅರ್ಜಿಯನ್ನು ತಿರಸ್ಕರಿಸಿ ಎಂದು ಸೂಚನೆ ನಿಡಿದರು.
 ಎಷ್ಟು ಆಸ್ಪತ್ರೆಗಳಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೀರಿ? ಡಯಾಲಿಸಿಸ್‌ ಕೇಂದ್ರಗಳಲ್ಲಿ ಸಮರ್ಪಕ ಸೇವೆ ಜನರಿಗೆ ಸಿಗುತ್ತಿದೆಯಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
 ಜನತಾ ಸ್ಪಂದನದಲ್ಲಿ ಬಂದ ಸಮಸ್ಯೆಗಳಿಗೆ ಸಮರೋಪಾದಿಯಲ್ಲಿ ಪರಿಹಾರ ಒದಗಿಸಿಕೊಡಿ ಎನ್ನುವ ಸೂಚನೆ ನೀಡಿದ್ದೆ. ಸದ್ಯ ಸಮಾಧಾನಕರವಾಗಿ ಕೆಲಸ ಮಾಡಿದ್ದೀರಿ. ಇದರ ಪ್ರಮಾಣ ಮತ್ತು ವೇಗವನ್ನು ಇನ್ನಷ್ಟು ಹೆಚ್ಚಿಸಿ.
 ಕೋಲಾರದ ಹಾಸ್ಟೆಲ್‌ನಲ್ಲಿ ಊಟದಲ್ಲಿ ಆದ ಸಮಸ್ಯೆಗೆ ಯಾರು ಹೊಣೆ? ಸಮಸ್ಯೆ ಯಾಕಾಯಿತು? ಮೊದಲೇ ಅಧಿಕಾರಿಗಳು ಈ ಬಗ್ಗೆ ನಿಗಾ ಇಡಬೇಕಿತ್ತು. ನಿಗಾ ವಹಿಸದ ಕಾರಣಕ್ಕೆ ಈ ರೀತಿಯ ಘಟನೆಗಳು ಸಂಭವಿಸುತ್ತದೆ. ಇವು ಮರು ಕಳಿಸಿದರೆ ಸೂಕ್ತ ಕ್ರಮ ಅನಿವಾರ್ಯವಾಗುತ್ತದೆ.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

bjpMLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.