Congress ಬರಲ್ಲ ಗ್ಯಾರಂಟಿ ಇರಲ್ಲ: ಕೆ.ಎಸ್. ಈಶ್ವರಪ್ಪ ಭವಿಷ್ಯ
Team Udayavani, Feb 1, 2024, 8:20 PM IST
ಕುಷ್ಟಗಿ: ಮುಂದಿನ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವುದಿಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.
ಸರ್ಕ್ಯೂಟ್ ಹೌಸ್ ನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇದ್ದರೆ ತಾನೆ ಗ್ಯಾರಂಟಿಗಳು ಉಳಿಯೋದು, ಕಳೆದ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಈ ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ ಬಿಜೆಪಿ ಎರಡು ಸ್ಥಾನ ಗಳಿಸುವುದೇ ಹೆಚ್ಚು ಎಂದಿದ್ದರು. ಆದರೆ ಚುನಾವಣೆಯಲ್ಲಿ ಅವರ ಹಣೆಬರಹಕ್ಕೆ ಕೇವಲ ಒಂದೇ ಸೀಟು ಗೆಲ್ಲಲು ಸಾಧ್ಯವಾಯಿತು. ನಾವು ಆಗ 25 ಸ್ಥಾನಗಳಿಸಿದ್ದೆವು. ಹಿಂದಿನ ಫಲಿತಾಂಶವೇ 2024ರ ಲೋಕಸಭೆ ಚುನಾವಣೆಯಲ್ಲಿ ಮರುಕಳಿಸಲಿದೆ ಎಂದರು.
ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ, ಶಾಸಕ ದೊಡ್ಡನಗೌಡ ಪಾಟೀಲ, ಜಿ.ಪಂ. ಮಾಜಿ ಸದಸ್ಯ ಕೆ.ಮಹೇಶ, ಪಕೀರಪ್ಪ ಚಳಗೇರಿ, ರಾಜು ಗಂಗನಾಳ ಮತ್ತಿತರರಿದ್ದರು.