Congress; ಸರ್ಕಾರದಲ್ಲಿ ವರ್ಗಾವಣೆಗಳು ನಡೆಯುತ್ತಿವೆ: ಕಾಂಗ್ರೆಸ್ ಮುಖಂಡ ಬಿ.ಶಿವರಾಂ ಆರೋಪ
Team Udayavani, Feb 2, 2024, 2:10 PM IST
ಬೆಂಗಳೂರು: ಸರ್ಕಾರದಲ್ಲಿ ಸಣ್ಣಪುಟ್ಟ ವರ್ಗಾವಣೆಗಳು ನಡೆಯುತ್ತಿವೆ ಎಂದು ಸ್ವತಃ ಆಡಳಿತ ಪಕ್ಷದ ಮುಖಂಡ ಮಾಜಿ ಸಚಿವ ಬಿ.ಶಿವರಾಂ ಆರೋಪಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರಚನೆಯಾಗಿ ಎಂಟು ತಿಂಗಳು ಆಗಿದೆ. ಯಾವುದೇ ಕಾಮಗಾರಿಗಳು ಶುರುವಾಗಿಲ್ಲ. ಆದ್ದರಿಂದ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ಆಗಿಲ್ಲ. ಆದರೆ, ಸಣ್ಣಪುಟ್ಟ ವರ್ಗಾವಣೆಗಳು ನಡೆಯುತ್ತಿವೆ ಎಂದು ಹೇಳಿದರು.
ಇದು ರಾಜ್ಯಾದ್ಯಂತ ನಡೆಯುತ್ತಿಲ್ಲ. ಹಾಸನ ಜಿಲ್ಲೆಗೆ ಮಾತ್ರ ಸೀಮಿತವಾಗಿ ನಾನು ಹೇಳಿತ್ತಿದ್ದೇನೆ ಎಂದೂ ಅವರು ಸ್ಪಷ್ಟಪಡಿಸಿದರು. ವರ್ಗಾವಣೆಗಾಗಿ ಎಷ್ಟು ಪರ್ಸೆಂಟ್ ಎಂದು ಕೇಳಿದಾಗ, ಆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಚ್ಚರಿಕೆ ಕೊಟ್ಟಿರುವುದನ್ನು ಒಪ್ಪಿಕೊಂಡ ಬಿ. ಶಿವರಾಂ, ನಾನು ಅದನ್ನು ಸ್ವಾಗತಿಸುತ್ತೇನೆ. ಬೇಡ ಅಂತ ಹೇಳುವುದಿಲ್ಲ. ಅವರು ಪಕ್ಷದ ಹಿತದೃಷ್ಟಿಯಿಂದ ಹೇಳಿರಬಹುದು. ಆದರೆ, ಒಬ್ಬರು ಸಚಿವರಾಗಿ ನಾನು ಹೈಕಮಾಂಡ್ ಗುಲಾಮರಲ್ಲ ಅಂತಾರೆ ಅದು ಏನಾಯ್ತು ಎಂದು ತೀಕ್ಷ್ಣವಾಗಿ ಕೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ