Maharashtra; ‘ಸಿಎಂ ಶಿಂಧೆ ನನ್ನನ್ನು ಕ್ರಿಮಿನಲ್ ಮಾಡಿದರು…..’: ಬಿಜೆಪಿ ಶಾಸಕನ ಆರೋಪ
Team Udayavani, Feb 4, 2024, 9:00 AM IST
ಮುಂಬೈ: ಮಹಾರಾಷ್ಟ್ರದ ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್ ಮತ್ತು ಶಿವಸೇನಾ ಶಾಸಕ ಮಹೇಶ್ ಗಾಯಕ್ವಾಡ್ ಅವರ ಜಗಳ ಇದೀಗ ಹೊಸ ರೂಪ ಪಡೆದಿದೆ. ಬಿಜೆಪಿ ಶಾಸಕನು ಮುಖ್ಯಮಂತ್ರಿ ಏಕನಾಥ್ ಶಿಂಧೆ ವಿರುದ್ಧ ಆರೋಪ ಮಾಡಿದ್ದು, ‘ಶಿಂಧೆ ನನ್ನನ್ನು ಕ್ರಿಮಿನಲ್ ಮಾಡಿದರು’ ಎಂದಿದ್ದಾರೆ.
ಶುಕ್ರವಾರ ಬಂಧನಕ್ಕೂ ಮುನ್ನ ಸುದ್ದಿ ವಾಹಿನಿಯೊಂದಕ್ಕೆ ದೂರವಾಣಿ ಮೂಲಕ ಮಾತನಾಡಿದ ಗಣಪತ್ ಗಾಯಕ್ವಾಡ್, ಏಕನಾಥ್ ಶಿಂಧೆ ನನ್ನನ್ನು ಅಪರಾಧಿಯನ್ನಾಗಿ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಘಟನೆಯ ನಂತರ ಪ್ರಸಾರವಾದ ದೂರವಾಣಿ ಸಂಭಾಷಣೆಯ ಆಡಿಯೋ ಕ್ಲಿಪ್ ನಲ್ಲಿ ಕಲ್ಯಾಣ್ ಪೂರ್ವದ ಬಿಜೆಪಿ ಶಾಸಕ ಗಣಪತ್, “ಪೊಲೀಸ್ ಠಾಣೆಯಲ್ಲಿ ನನ್ನ ಮಗನನ್ನು ಅಮಾನುಷವಾಗಿ ಹಲ್ಲೆ ಮಾಡಲಾಗಿದೆ, ನನ್ನ ಭೂಮಿಯನ್ನು ನನ್ನಿಂದ ಬಲವಂತವಾಗಿ ಕಸಿದುಕೊಳ್ಳಲಾಗಿದೆ, ಏಕನಾಥ್ ಶಿಂಧೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಮುಂದುವರಿದರೆ, ಎಲ್ಲಾ ಕ್ರಿಮಿನಲ್ಗಳು ಹೆಚ್ಚಾಗುವುದನ್ನು ನಾವು ನೋಡುತ್ತೇವೆ, ಅವರು ಇಂದು ನನ್ನಂತಹ ಒಳ್ಳೆಯ ವ್ಯಕ್ತಿಯನ್ನು ಅಪರಾಧಿಯನ್ನಾಗಿ ಮಾಡಿದ್ದಾರೆ” ಎಂದು ದೂರಿದ್ದಾರೆ.
ಪೊಲೀಸ್ ಠಾಣೆಯಲ್ಲಿ ತನ್ನ ಮಗನಿಗೆ ಥಳಿಸಲಾಗುತ್ತಿದ್ದು, ಅದಕ್ಕೆ ಪ್ರತೀಕಾರವಾಗಿ ಮಹೇಶ್ ಗಾಯಕ್ವಾಡ್ ಗೆ ಗುಂಡು ಹಾರಿಸಿದ್ದಾರೆ ಎಂದು ಬಿಜೆಪಿ ಶಾಸಕರು ಆರೋಪಿಸಿದ್ದಾರೆ.
“ನಾನು ಹತಾಶನಾಗಿದ್ದೆ ಮತ್ತು ಅದಕ್ಕಾಗಿಯೇ ನಾನು ಗುಂಡು ಹಾರಿಸಿದೆ. ನನಗೆ ಯಾವುದೇ ಪಶ್ಚಾತ್ತಾಪವಿಲ್ಲ. ಪೊಲೀಸ್ ಠಾಣೆಯಲ್ಲಿ ಯಾರಾದರೂ ನನ್ನ ಮಗನನ್ನು ಥಳಿಸಿದರೆ, ನಾನೇನು ಮಾಡಬೇಕೆಂದು ನೀವು ಬಯಸುತ್ತೀರಿ? ನಾನು ಅವರನ್ನು ಕೊಲ್ಲಲು ಉದ್ದೇಶಿಸಿಲ್ಲ” ಎಂದು ಗಣಪತ್ ಗಾಯಕ್ವಾಡ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ
ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್ನಲ್ಲೇ ಹೆಚ್ಚು
Bengaluru-Mysuru Expressway; 15 ದಿನಗಳಲ್ಲಿ 12 ಸಾವಿರ ವಾಹನಗಳಿಗೆ ದಂಡ!
Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು
Kota ಮೇಲ್ಮನೆ ಸ್ಥಾನ ನಳಿನ್ ಕುಮಾರ್ಗೆ ? ವಿಧಾನಸಭೆ ಮೂಲಕ ಪರಿಷತ್ ಪ್ರವೇಶಿಸಲು ಯತ್ನ