Modi ಹೆಸರಿನಲ್ಲಿ ಮತ ಹಾಕಿಸಿಕೊಂಡರೆ ಇದೇ ಹಣೆಬರಹ : ಮಧು ಬಂಗಾರಪ್ಪ ಕಿಡಿ

ಎಲ್ಲವೂ ಧರ್ಮಕ್ಕೆ ಜೋಡಣೆ... ಎಸ್ ಎಲ್ ಸಿ ಪೂರ್ವ ಸಿದ್ದತಾ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ವಿರುದ್ಧ ಕಿಡಿ

Team Udayavani, Feb 4, 2024, 10:14 PM IST

madhu-bangara

ಶಿವಮೊಗ್ಗ :ಎಸ್ ಎಸ್ ಎಲ್ ಸಿ ಪೂರ್ವ ಸಿದ್ದತಾ ಪರೀಕ್ಷೆಗೆ 50 ರೂ ಶುಲ್ಕ ಪಡೆಯುವುದು ಬಿಜೆಪಿ ಸರಕಾರ ಇದ್ದಾಗಲೇ ಆರಂಭವಾಗಿದೆ. ಈ ಮೊದಲು ಪರೀಕ್ಷಾ ಶುಲ್ಕ 60 ರೂಪಾಯಿ ಇತ್ತು, ನಾವು 10 ರೂಪಾಯಿ ಕಡಿಮೆ ಮಾಡಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾನುವಾರ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಗೃಹಲಕ್ಷ್ಮೀ 2 ಸಾವಿರ ರೂ. ಕೊಟ್ಟು, ಗೃಹ ಜ್ಯೋತಿ ಕೊಟ್ಟು, ಫ್ರೀಯಾಗಿ ಬಸ್ಸಿನಲ್ಲಿ ಓಡಾಡಿಸುತ್ತಿದ್ದೇವೆ. ಹಿಂದಿನ ಸರಕಾರ ಪರೀಕ್ಷಾ ಶುಲ್ಕ 60 ರೂ. ಮಾಡಿದ್ದನ್ನು 50 ರೂ. ಗೆ ಇಳಿಸಿದ್ದೇವೆ. ಮುಂದೆ ಏನಾದರೂ ಇನ್ನೂ ಅನುಕೂಲ ಆದರೆ ಕಡಿಮೆ ಮಾಡುತ್ತೇವೆ. ಹುಡುಕುವ ಕೆಲಸವನ್ನು ನಿಲ್ಲಿಸಬೇಕು ಎಂದು ಬಿಜೆಪಿಗೆ ತಿರುಗೇಟು ನೀಡಿದರು.

ಉತ್ತರ ಕೊಡದಿರುವುದೇ ಒಳ್ಳೆಯದು. ಕುಮಾರಸ್ವಾಮಿ ಅವರು ಪ್ರಶ್ನೆ ಕೇಳುವ ಮೊದಲು ಸ್ವಲ್ಪ ತಿಳಿದುಕೊಳ್ಳುವುದು ಒಳ್ಳೆಯದು. ಇಲ್ಲದಿರುವುದನ್ನು ಹುಡುಕಿ ಜನರಿಗೆ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ವಿರೋಧ ಪಕ್ಷದವರಂತಹ ದಡ್ಡರು ಯಾರೂ ಇಲ್ಲ ಎಂದರು.

ಎಸ್ ಎಸ್ ಎಲ್ ಸಿ ಪೂರ್ವ ಸಿದ್ದತಾ ಪರೀಕ್ಷೆ ವಿಜ್ಞಾನ ವಿಷಯ ಶುಕ್ರವಾರ ಮಧ್ಯಾಹ್ನ ನಡೆಸುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ,ಬಿಜೆಪಿಯವರು ಎಲ್ಲವನ್ನು ಜೋಡಣೆ ಮಾಡುವ ಕೆಲಸ ಮಾಡುತ್ತಾರೆ. ಕೆಲವು ಧರ್ಮಕ್ಕೆ ಒಲವು ತೋರಿಸುವ ಕೆಲಸ ಮಾಡಿದ್ದಾರೆ ಎಂಬ ಆಪಾದನೆ ಮಾಡಿದ್ದಾರೆ. ಕಳ್ಳ‌ನಿಗೆ ಒಂದು ಸುಳ್ಳು ನೆಪ ಬೇಕು ಅಂತಾರಲ್ಲ ಹಾಗೆ. ಬಿಜೆಪಿಯವರ ಅಂಗ ಸಂಸ್ಥೆ ಆರ್ ಎಸ್ ಎಸ್ ನವರ ಕೆಲಸ ಇದು ಎಂದು ಕಿಡಿ ಕಾರಿದರು.

ಆ ದಿನ ಪಿಯುಸಿ ಪರೀಕ್ಷೆ ಆರಂಭವಾಗುತ್ತದೆ. 1 ರಂದು ಬೆಳಗ್ಗೆ ಪಿಯುಸಿ ಪರೀಕ್ಷೆ ಇರುವುದರಿಂದ, ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ ಅಲ್ಲ, ಪೂರ್ವ ಸಿದ್ದತಾ ಪರೀಕ್ಷೆ ಆಗಿದ್ದರಿಂದ ಮಧ್ಯಾಹ್ನ ಮಾಡುತ್ತಿದ್ದೇವೆ. ಒಂದು ದಿನ ಮುಂದೆ ಹಾಕಬಹುದು ಅಂತಾ ಹೇಳಬಹುದು. ಒಂದು ದಿನ ಮುಂದೆ ಹಾಕಿದರೆ ಮೂರು‌ ಮೂರು ಪರೀಕ್ಷೆ ಇರುವುದರಿಂದ ಸಮಸ್ಯೆ ಆಗುತ್ತದೆ. ಇಂತಹ ದುರುದ್ದೇಶ, ಯೋಚನೆ ಇವರಿಗೆ ಮಾತ್ರ ಸಾಧ್ಯ. ನೀವು ಏನಾದರೂ ಅಭಿವೃದ್ಧಿ ಕೆಲಸ ಮಾಡಿದರೆ ಅದನ್ನು ಹೇಳಿ. ನಮ್ಮ ಸರಕಾರ ಇದೆ. ನಮ್ಮ ಮಕ್ಕಳಿಗೆ ಅನುಕೂಲ ಆಗುವ ರೀತಿಯಲ್ಲಿ ನಮಗೆ ಆಡಳಿತ ನಡೆಸಲು ಬರುತ್ತದೆ. ಅದನ್ನು ನಾವು ಮಾಡುತ್ತೇವೆ ಎಂದು ಕಿಡಿ ಕಾರಿದರು.

ಫೆ.7 ರಂದು ಕೇಂದ್ರ ಸರಕಾರದ ವಿರುದ್ದ ದೆಹಲಿಯಲ್ಲಿ ಹೋರಾಟ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ”26 ಜನರನ್ನು ಇಲ್ಲಿಂದ ಗೆಲ್ಲಿಸಿಕೊಟ್ರಲ್ಲಾ, ಯಾರಾದರೂ ಒಬ್ಬರಾದರೂ‌ ಕೇಂದ್ರ ಸರಕಾರದ ಬಳಿ ಒದರಿದ್ದಾರಾ? ರಾಮನ ತಂದು ಬೀದಿಗೆ ನಿಲ್ಲಿಸಿದರು ಇವರಿಗೆ ಮಾನ ಮರ್ಯಾದೆ ಇದೆಯಾ?” ಎಂದು ಪ್ರಶ್ನಿಸಿದರು.

ಬಂಗಾರಪ್ಪ ಅವರು 35 ವರ್ಷದ‌ ಹಿಂದೆಯೇ ರಾಮನಿಗೆ ಆರಾಧನಾ ಎನ್ನುವ ಕಾರ್ಯಕ್ರಮ ಕೊಟ್ಟಿದ್ದರು. ಬಗರ್ ಹುಕುಂಗೆ ಯಾವೊಬ್ಬ ಸಂಸದ ಧ್ವನಿ ಎತ್ತಲ್ಲ. ಸರಕಾರದ ಹಣ 4 ಲಕ್ಷ ಕೋಟಿ ರೂ. ತೆಗೆದುಕೊಳ್ಳುತ್ತಾರೆ. ಮುಖ್ಯಮಂತ್ರಿ ಗಳು, ಮಂತ್ರಿಗಳು ಹೋಗಿ‌ ಕೇಳುತ್ತಾರೆ. ಈಗ ಹೋಗಿ ಹೋರಾಟ ಮಾಡಬೇಕಾಗುತ್ತದೆ. ಯಾರಿಗಾದರೂ ತೊಂದರೆ ಆದರೆ ಹೋರಾಟ ಮಾಡುವುದಿಲ್ಲವಾ? ಹಾಗಾದರೆ ನಾವು ಹೋರಾಟ ಮಾಡೋದು ತಪ್ಪಾ? ಇವರಿಗಂತು ಯೋಗ್ಯತೆ ‌ಇಲ್ಲ. ಮೋದಿ ಅವರ ಹೆಸರಿನಲ್ಲಿ ಮತ ಹಾಕಿಸಿಕೊಂಡರೆ ಇದೇ ಹಣೆಬರಹ ಆಗುವುದು. ಜನರ ಜೊತೆ ಇದ್ದವರ ಮುಖ ನೋಡಿ ಮತ ಹಾಕಬೇಕು. ಮೋದಿ ಅವರ ಹೆಸರನ್ನು ತಗೊಂಡು‌ ಬರುತ್ತಾರಲ್ಲ ಇವರು. ನಾಳೆ ಮೋದಿ ಸಹಾಯ ಮಾಡಲ್ಲ ಅನ್ನುವುದಕ್ಕೆ ಇದೊಂದು ದೊಡ್ಡ ಉದಾಹರಣೆಯಾಗಿದ್ದು, ಅನಿವಾರ್ಯವಾಗಿ ಹೋರಾಟ ಮಾಡಬೇಕಿದೆ. ನಮ್ಮ ಕರ್ತವ್ಯ ಮಾಡಬೇಕಿದೆ. ನಾನು ಕೂಡಾ ಹೋಗುತ್ತಿದ್ದೇನೆ. ಅಲ್ಲಿ ಹೋಗಿ ಧ್ವನಿ ಎತ್ತುತ್ತೇವೆ ಎಂದರು.

ಟಾಪ್ ನ್ಯೂಸ್

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

1-raisi

Iran ತೀವ್ರಗಾಮಿ ಅಧ್ಯಕ್ಷ ಕಟ್ಟರ್‌ ಸಂಪ್ರದಾಯವಾದಿ ರೈಸಿ ಸಾವಿನ ಸುತ್ತ ನಾನಾ ಕತೆ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

Prajwal ಎಲ್ಲಿದ್ದೀಯಪ್ಪಾ? ಬಂದುಬಿಡು: ಎಚ್‌ಡಿಕೆ

Prajwal ಎಲ್ಲಿದ್ದೀಯಪ್ಪಾ? ಬಂದುಬಿಡು: ಎಚ್‌ಡಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.