Madikeri; ಚೇಲಾವರ ಫಾಲ್ಸ್ನಲ್ಲಿ ಮುಳುಗಿ ಪ್ರವಾಸಿ ಸಾವು
Team Udayavani, Feb 4, 2024, 11:03 PM IST
ಮಡಿಕೇರಿ: ಪ್ರವಾಸಕ್ಕೆಂದು ಬಂದಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಚೆಯ್ಯಂಡಾಣೆ ಸಮೀಪದ ಚೇಲಾವರ ಫಾಲ್ಸ್ನಲ್ಲಿ ರವಿವಾರ ಸಂಭವಿಸಿದೆ.
ಮೃತನನ್ನು ಕೇರಳದ ಮಟ್ಟನ್ನೂರು ನಿವಾಸಿ, ಮಹಮ್ಮದ್ ಅಶ್ರಫ್ ಅವರ ಪುತ್ರ ರಾಶೀದ್ (25) ಎಂದು ಗುರುತಿಸಲಾಗಿದೆ.
ತನ್ನ ಮೂವರು ಸ್ನೇಹಿತರೊಂದಿಗೆ ಕೊಡಗಿನ ಪ್ರವಾಸಿತಾಣಗಳ ವೀಕ್ಷಣೆಗೆ ಬಂದಿದ್ದ ರಾಶೀದ್, ಚೇಲಾವರ ಜಲಪಾತದಲ್ಲಿ ಸ್ನಾನಕ್ಕೆಂದು ಇಳಿದಾಗ ನೀರಿನಲ್ಲಿ ಮುಳುಗಿ ಸಾವಿಗೀಡಾದರು ಎಂದು ಹೇಳಲಾಗಿದೆ.
ಜಲಪಾತದಿಂದ ಮೃತದೇಹವನ್ನು ಮೇಲೆತ್ತು ವಲ್ಲಿ ಅಗ್ನಿಶಾಮಕ ದಳದ ಸಿಬಂದಿ ಯಶಸ್ವಿಯಾಗಿದ್ದು, ನಾಪೋಕ್ಲು ಠಾಣೆಯ ಅಪರಾಧ ವಿಭಾಗದ ಠಾಣಾಧಿಕಾರಿ ಶ್ರೀಧರ್ ಹಾಗೂ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು