Bantwala: ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು
Team Udayavani, Feb 5, 2024, 10:48 AM IST
ಬಂಟ್ವಾಳ: ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲಿ ಮೃತಪಟ್ಟ ಘಟನೆ ಬಿಸಿರೋಡು ಸಮೀಪದ ಮಾರ್ನಬೈಲು ಎಂಬಲ್ಲಿ ಫೆ.5 (ಇಂದು) ಬೆಳಿಗ್ಗೆ ಸುಮಾರು 7.30 ಗಂಟೆಗೆ ಸಂಭವಿಸಿದೆ.
ಮೂಲತಃ ಮಡಂತ್ಯಾರು ಪಣಕಜೆ ನಿವಾಸಿಯಾಗಿದ್ದು, ಪ್ರಸ್ತುತ ಸಜೀಪಮುನ್ನೂರು ಗ್ರಾ.ಪಂ. ವ್ಯಾಪ್ತಿಯ ಮಾರ್ನಬೈಲು ದಾಸರ ಗುಡ್ಡೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹರಿಶ್ಚಂದ್ರ (37) ಮೃತಪಟ್ಟ ವ್ಯಕ್ತಿ.
ಕೂಲಿ ಕಾರ್ಮಿಕನಾಗಿರುವ ಹರಿಶ್ಚಂದ್ರ ಇಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ತೆರಳುವ ಸಂದರ್ಭದಲ್ಲಿ ರೈಲ್ವೆ ಹಳಿಯನ್ನು ದಾಟುವ ಉದ್ದೇಶದಿಂದ ನಿಂತಿದ್ದ ವೇಳೆ ರೈಲು ಡಿಕ್ಕಿ ಹೊಡೆದಿರಬೇಕು ಎಂದು ಸ್ಥಳೀಯರು ತಿಳಿಸಿದ್ದಾರೆ.
ರೈಲು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಹರಿಶ್ಚಂದ್ರ ಸ್ಥಳದಲ್ಲಿಯೇ ಮೃತಪಟ್ಟಿದ್ದರು.
ಡಿಕ್ಕಿಯಾದ ಕೂಡಲೇ ರೈಲ್ವೆ ಇಲಾಖೆಯ ಹಳಿಯ ಕಾಮಗಾರಿ ನೋಡಿಕೊಳ್ಳುವ ಸಿಬ್ಬಂದಿಗಳಿಗೆ ಮಾಹಿತಿ ಸಿಕ್ಕಿದ್ದು, ಅವರು ಮಂಗಳೂರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ರೈಲ್ವೆ ಪೋಲೀಸ್ ಇಲಾಖೆಯ ಎ.ಎಸ್.ಐ.ಜಾನ್ ಕೊರಿಯ ಕೋಸ್ ಸ್ಥಳಕ್ಕೆ ಆಗಮಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಘಟನೆಯ ಮಾಹಿತಿ ಸಿಕ್ಕಿದ ಕೂಡಲೇ ಹೊಯ್ಸಳ 112 ವಾಹನದ ಜೊತೆ ಎಎಸ್ ಐ ದೇವಪ್ಪ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
POCSO Case: ಅನ್ಯ ಕೋಮಿನ ಯುವಕನಿಂದ ಅಪ್ರಾಪ್ತೆಗೆ ಕಿರುಕುಳ: ಪೋಕ್ಸೋ ಕೇಸ್ ದಾಖಲು!
Udupi; ಯಕ್ಷರಂಗಕ್ಕೆ ಜಿವ ತುಂಬುವ ಮಟ್ಟು ಲಕ್ಷ್ಮಣ ಶೆಟ್ಟಿಗಾರರ ಕೈಮಗ್ಗದ ಸೀರೆ
Anwarul Azim Anwar; ಹನಿ ಟ್ರ್ಯಾಪ್ ಮಾಡಿ ಬಾಂಗ್ಲಾ ಸಂಸದನ ಹತ್ಯೆ; ಢಾಕಾದಲ್ಲಿ ಮಹಿಳೆ ಬಂಧನ
10km ದೂರದಲ್ಲಿರುವ ಪ್ರವಾಸಿತಾಣಕ್ಕೆ ಕರೆದೊಯ್ಯಲಿಲ್ಲವೆಂದು ನೇಣಿಗೆ ಶರಣಾದ 10 ವರ್ಷದ ಬಾಲಕಿ
ಪುತ್ತೂರು: 10 ಶಾಲೆಗಳಿಗೆ ಹೈ ಟೆನ್ಶ ನ್ ತಂತಿ ಟೆನ್ಶನ್| ಸ್ಥಳಾಂತರಕ್ಕೆ ಪೋಷಕರ ಆಗ್ರಹ