Bangalore Traffic: ಟ್ರಾಫಿಕ್‌:ನಂ.2 ಸ್ಥಾನದಿಂದ 6ಕ್ಕಿಳಿದ ಬೆಂಗಳೂರು


Team Udayavani, Feb 7, 2024, 10:53 AM IST

2

ಬೆಂಗಳೂರು: ಎರಡು ವರ್ಷಗಳ ಹಿಂದೆ ವಿಶ್ವದಲ್ಲೇ 2ನೇ ಅತೀ ಹೆಚ್ಚು ಸಂಚಾರ ದಟ್ಟಣೆ ನಗರ ಎಂಬ ಅಪಖ್ಯಾತಿಗೆ ಒಳಗಾಗಿದ್ದ ಸಿಲಿಕಾನ್‌ ಸಿಟಿ ಬೆಂಗಳೂರು 2023ರಲ್ಲಿ ಸುಧಾರಣೆ ಕಂಡಿದ್ದು, 6ನೇ ಸ್ಥಾನಕ್ಕೆ ಇಳಿದಿದೆ.

ಡಚ್‌ ಲೋಕೇಷನ್‌ ಟೆಕ್ನಾಲಜಿ ಸಂಸ್ಥೆಯಾದ ‌ ಟಾಮ್‌ ಇತ್ತೀಚೆಗೆ 2023ರ ವಿಶ್ವ ಸಂಚಾರ ಸೂಚ್ಯಂಕವನ್ನು ಬಿಡು ಗಡೆ ಮಾಡಿದ್ದು, ಬೆಂಗಳೂರು ನಗರ ಸಂಚಾರ ವ್ಯವಸ್ಥೆ ಸೂಚ್ಯಂಕದಲ್ಲಿ ಗಣನೀಯ ಬದಲಾವಣೆ ಆಗಿದೆ. 2022ನೇ ಸಾಲಿನಲ್ಲಿ ಬೆಂಗಳೂರು ವಿಶ್ವದಲ್ಲೇ 2ನೇ ಅತೀ ಹೆಚ್ಚು ಸಂಚಾರ ದಟ್ಟಣೆಯ ನಗರವಾಗಿದ್ದು, 2023 ರಲ್ಲಿ 6ನೇ ಸ್ಥಾನಕ್ಕೆ ಇಳಿದಿದೆ. ಅದನ್ನು ಇನ್ನಷ್ಟು ಸುಧಾರಣೆಗೆ ತರಲು ಕೆಲ ಯೋಜನೆಗಳನ್ನು ರೂಪಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಮಂಗಳವಾರ  ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಟಾಮ್‌ ಸಂಸ್ಥೆ ಪ್ರಕಾರ, ಮೊದಲ ಸ್ಥಾನದಲ್ಲಿ ಲಂಡನ್‌, ಎರಡು ಹಾಗೂ ಮೂರನೇ ಸ್ಥಾನದಲ್ಲಿ ಅನುಕ್ರಮವಾಗಿ ಐರ್ಲೆಂಡ್‌ ರಾಜಧಾನಿ ಡಬ್ಲೀನ್‌, ಕೆನಡಾದ ಟೊರೊಂಟೊ ನಗರವಿದ್ದರೆ, ಆರನೇ ಸ್ಥಾನದಲ್ಲಿ ಬೆಂಗಳೂರು ಹಾಗೂ ಪುಣೆ ಏಳನೇ ಸ್ಥಾನದಲ್ಲಿದೆ ಎಂದು ಸಂಸ್ಥೆಯ ಅಧ್ಯಯನದ ವರದಿ ತಿಳಿಸಿದೆ. ಇನ್ನು 2022ರಲ್ಲಿ ಪ್ರತಿ ಗಂಟೆಗೆ ಸರಾಸರಿ ವೇಗ 14 ಕಿ.ಮೀಟರ್‌ ಇದ್ದರೆ 2023ರಲ್ಲಿ 18 ಕಿ.ಮೀಟರ್‌ಗೆ ಏರಿಕೆಯಾಗಿದೆ. ಅಲ್ಲದೆ ಪ್ರಯಾಣ ಸಮಯ ಒಂದು ನಿಮಿಷ ತಗ್ಗಿರುವುದು ಕಂಡುಬಂದಿದೆ.

2022ರಲ್ಲಿ ನಗರದಲ್ಲಿ ಪ್ರತಿ 10 ಕಿ.ಮೀ. ಕ್ರಮಿಸಲು 28 ನಿಮಿಷ 11 ಸೆಕೆಂಡ್‌ ತಗುಲುತಿತ್ತು. 2023ರಲ್ಲಿ 27 ನಿಮಿಷ 11 ಸೆಕೆಂಡ್‌ಗೆ ತಗ್ಗಿದೆ. ವಿಶ್ವದ 10 ನಗರಗಳ ಪೈಕಿ ಬೆಂಗಳೂರು ನಗರ ಮಾತ್ರವೇ ಪ್ರಯಾಣ ಸಮಯದಲ್ಲಿ 1 ನಿಮಿಷ ಕಡಿಮೆಯಾಗಿದೆ ಎಂದು ವರದಿಯಲ್ಲಿ ಉಲ್ಲೇಖೀಸಿದೆ. ಈ ನಡುವೆ 2023ರಲ್ಲಿ 10 ಲಕ್ಷ ವಾಹನಗಳ ನೋಂದಣಿಗಳ ಹೊರತಾಗಿಯೂ ಸುಧಾರಣೆ ಕಂಡಿದೆ ಎಂದು ತಿಳಿಸಿದ್ದಾರೆ.

ಸುಧಾರಣೆಗೆ ಪ್ರಮುಖ ಕಾರಣಗಳೇನು?: ಸಂಚಾರ ದಟ್ಟಣೆ ನಿಯಂತ್ರಿಸಲು ಸಂಚಾರ ಪೊಲೀಸರು ಹಲವು ಸುಧಾರಣ ಕ್ರಮಕೈಗೊಂಡಿದ್ದಾರೆ. ಹೆಬ್ಟಾಳ ಜಂಕ್ಷನ್‌, ಟಿನ್‌ ಫ್ಯಾಕ್ಟರಿ, ಗೊರಗುಂಟೆಪಾಳ್ಯ ಹಾಗೂ ಸಾರಕ್ಕಿ ಜಂಕ್ಷನ್‌ ಸೇರಿ ಹಲವಾರು ದಟ್ಟಣೆಯ ಜಂಕ್ಷನ್‌ಗಳಲ್ಲಿ ದಟ್ಟಣೆ ನಿವಾರಣೆಗೆ ಕ್ರಮಕೈಗೊಂಡಿದ್ದಾರೆ. ವಾಹನ ದಟ್ಟಣೆಯಾಗುತ್ತಿದ್ದ ರಸ್ತೆ ವಿಭಜಕಗಳನ್ನ ಮುಚ್ಚಿಸಲಾಗಿದೆ. ಅನಗತ್ಯ ಬಸ್‌ ನಿಲ್ದಾಣಗಳ ತೆರವು, ಅವೈಜ್ಞಾನಿಕ ಯುಟರ್ನ್ ಬಂದ್‌, ಫ್ರೀ ಸಿಗ್ನಲ್‌ಗೆ ಒತ್ತು ನೀಡಿದ್ದರಿಂದ ಸುಗಮವಾಗಿ ವಾಹನ ಸಂಚಾರಕ್ಕೆ ಕಾರಣವಾಗಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸುವುದಕ್ಕಿಂತ ವಾಹನಗಳ ಸುಗಮ ಸಂಚಾರಕ್ಕೆ ಆದ್ಯತೆ ನೀಡಲಾಗಿದೆ. ಪೀಕ್‌ ಅವರ್‌ ನಿರ್ವಹಣೆಗೆ ಭಾರೀ ಗಾತ್ರದ ವಾಹನಗಳ ನಿಷೇಧ ಮತ್ತು ಮಾರ್ಗ ಬದಲಾವಣೆ ಹಾಗೂ ಅತ್ಯಾಧುನಿಕ ತಂತ್ರಜ್ಞಾನಗಳ ಬಳಕೆ, ಟ್ರಾಫಿಕ್‌ ಎಂಜಿನಿಯರಿಂಗ್‌, ಸುಧಾರಿತ ಮೆಟ್ರೋ ಸಂಪರ್ಕ ಕಲ್ಪಿಸಲಾಗುತ್ತಿದೆ ಎಂದು ಬಿ.ದಯಾನಂದ್‌ ಮಾಹಿತಿ ನೀಡಿದರು.

ಭವಿಷ್ಯದ ಯೋಜನೆಗಳೇನು?:

ಕೃತಕ ಬುದ್ಧಿಮತ್ತೆ ಆಧಾರಿತ ಟ್ರಾಫಿಕ್‌ ಸಿಗ್ನಲ್‌ಗ‌ಳು. ಮೂಲಕ ಅತ್ಯುತ್ತಮ ಸಿಗ್ನಲಿಂಗ್‌ಗೆ ವ್ಯವಸ್ಥೆ ನೀಡುವುದು.  

ಎ1 ಮತ್ತು ಇತರೆ ಅತ್ಯಾಧುನಿಕ ತಂತ್ರಜ್ಞಾನಗಳ ಆಧಾರಿತ ವ್ಯವಸ್ಥೆಗಳ ಬಳಕೆ.

ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಟ್ರಾಫಿಕ್‌ ಅರಿವನ್ನು ಸುಧಾರಿಸಲು ವಿವಿಧ ಏಜೆನ್ಸಿಗಳು, ಪ್ರಮುಖ ಸಂಶೋಧನಾ ಸಂಸ್ಥೆಗಳು, ಎನ್‌ಜಿಒಗಳೊಂದಿಗೆ ಸಹಯೋಗ.

 

ಟಾಪ್ ನ್ಯೂಸ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1wewqewq

Bantwal; ಮಂಚಿಯಲ್ಲಿ ಹಿಟ್ ಆ್ಯಂಡ್ ರನ್: ಸ್ಕೂಟರ್ ಸವಾರ ಮೃತ್ಯು

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

1-aaaaa

Shirva: ಭದ್ರಾವತಿ ಮೂಲದ ವೃದ್ಧೆ ನಾಪತ್ತೆ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.