KPTCL 404 ಎಇ ಹುದ್ದೆ ಭರ್ತಿ- ತಾತ್ಕಾಲಿಕ ನೇಮಕಾತಿ ಪತ್ರ ನೀಡಲು ಹೈಕೋರ್ಟ್‌ ಆದೇಶ


Team Udayavani, Feb 7, 2024, 11:15 PM IST

HIGH COURT KARNATAKA 3

ಬೆಂಗಳೂರು: ರಾಜ್ಯ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್‌)ದಲ್ಲಿನ 404 ಸಹಾಯಕ ಅಭಿಯಂತ ಹುದ್ದೆಗಳಿಗೆ ತಾತ್ಕಾಲಿಕ ನೇಮಕಾತಿ ಆದೇಶ ನೀಡುವಂತೆ ಹೈಕೋರ್ಟ್‌ ಮಧ್ಯಾಂತರ ಆದೇಶ ಹೊರಡಿಸಿದೆ.

ಕೆಪಿಟಿಸಿಎಲ್‌ 2023ರ ಫೆ. 4ರಂದು ಪ್ರಕಟಿಸಿದ್ದ ತಾತ್ಕಾಲಿಕ ಅರ್ಹತಾ ಪಟ್ಟಿಯನ್ನು ರದ್ದುಪಡಿಸಿ ಏಕಸದಸ್ಯ ನ್ಯಾಯಪೀಠ ನೀಡಿದ ಆದೇಶ ಪ್ರಶ್ನಿಸಿ, ಆ ಪಟ್ಟಿಯಲ್ಲಿ ಅರ್ಹತೆ ಪಡೆದುಕೊಂಡಿದ್ದ 50ಕ್ಕೂ ಹೆಚ್ಚು ಅಭ್ಯರ್ಥಿಗಳು ಸಲ್ಲಿಸಿದ್ದ ಮೇಲ್ಮನವಿಗಳನ್ನು ಸಿಜೆ ಪಿ.ಎಸ್‌. ದಿನೇಶ್‌ ಕುಮಾರ್‌, ನ್ಯಾ| ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ಈ ತಾತ್ಕಾಲಿಕ ನೇಮಕಾತಿಗಳು ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಡುತ್ತವೆ ಎಂದು ನೇಮಕಾತಿ ಆದೇಶಗಳಲ್ಲಿ ನಮೂದಿಸಬೇಕು ಎಂದು ಹೇಳಿರುವ ನ್ಯಾಯಪೀಠ, ವಿಚಾರಣೆಯನ್ನು ಮಾರ್ಚ್‌ 13ಕ್ಕೆ ಮುಂದೂಡಿತು.

404 ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟಿ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2022ರ ಆ. 24ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ, ಆ. 25ಕ್ಕೆ ಕೀ ಉತ್ತರಗಳನ್ನು ಪ್ರಕಟಿಸಿತ್ತು. ಕೀ ಉತ್ತರ ಪಟ್ಟಿಯಲ್ಲಿ ಕೆಲವು ಉತ್ತರಗಳು ತಪ್ಪಾಗಿವೆ ಎಂದು ಹಲವು ಅಭ್ಯರ್ಥಿಗಳು ಆಕ್ಷೇಪಿಸಿದ್ದರು. ಇದಕ್ಕೆ ಪರೀಕ್ಷಾ ಪ್ರಾಧಿಕಾರ ತಜ್ಞರ ಸಮಿತಿ ರಚಿಸಿ ಡಿ. 27ರಂದು ಪರಿಷ್ಕೃತ ಕೀ ಉತ್ತರ ಪ್ರಕಟಿಸಲಾಯಿತು. ಅದರ ಆಧಾರದಲ್ಲಿ 2023ರ ಜ. 3ರಂದು ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಯಿತು. ಅದರಲ್ಲಿ 501 ಅಭ್ಯರ್ಥಿಗಳು ಅರ್ಹತೆ ಪಡೆದುಕೊಂಡು, 404 ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಯಿತು.

900ಕ್ಕೂ ಹೆಚ್ಚು ಆಕ್ಷೇಪಣೆ
ಈ ಮಧ್ಯೆ ಪರಿಷ್ಕೃತ ಕೀ ಉತ್ತರ ಪಟ್ಟಿಗೆ 900ಕ್ಕೂ ಹೆಚ್ಚು ಆಕ್ಷೇಪಣೆ ವ್ಯಕ್ತವಾದವು. ಆದಕ್ಕೆ ಪುನಃ ತಜ್ಞರ ಸಮಿತಿಯ ಪರಿಶೀಲನೆಗೊಳಪಡಿಸಲಾಯಿತು. ಹೆಚ್ಚುವರಿ ಅಂಕಗಳನ್ನು ನೀಡಿ 2023ರ ಫೆ. 4ರಂದು ಪರಿಷ್ಕೃತ ಪಟ್ಟಿ ಪ್ರಕಟಿಸಲಾಯಿತು. ಇದರ ಪರಿಣಾಮ 135 ಅಭ್ಯರ್ಥಿಗಳು ಅರ್ಹತೆ ಪಡೆದುಕೊಂಡು ಒಟ್ಟು ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಸಂಖ್ಯೆ 636 ಆಯಿತು. 2ನೇ ಬಾರಿ ಪರಿಷ್ಕೃತ ಪಟ್ಟಿಯನ್ನು ಪ್ರಕಟಿಸಿದ್ದನ್ನು ಆಕ್ಷೇಪಿಸಿ ಮೊದಲ ಪಟ್ಟಿಯಲ್ಲಿ ಆಯ್ಕೆಯಾಗಿದ್ದ ಕೆಲವು ಅಭ್ಯರ್ಥಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದರು. 2ನೇ ಪರಿಷ್ಕರಣೆಯನ್ನು ಏಕಸದಸ್ಯ ನ್ಯಾಯಪೀಠ ರದ್ದುಪಡಿಸಿತ್ತು. ಇದರಿಂದ ಅರ್ಹತಾ ಪಟ್ಟಿಯಿಂದ ವಂಚಿತರಾದ 135 ಅಭ್ಯರ್ಥಿಗಳ ಪೈಕಿ 50ಕ್ಕೂ ಅಧಿಕ ಅಭ್ಯರ್ಥಿಗಳು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಟಾಪ್ ನ್ಯೂಸ್

1-eqwewqeqwe

ಅಗ್ನಿ ದೇವರು ಎನ್ನುವವರು ಅದರ ಜತೆ ಮಲಗುತ್ತಿರಾ ಎಂದಿದ್ದ ಬಸವಣ್ಣ : ನಿಜಗುಣಾನಂದ ಶ್ರೀ

tejaswi

Rahul Gandhi ಅವರಿಗೆ ಪತ್ರ ಬರೆದು ಬಹಿರಂಗ ಚರ್ಚೆಗೆ ಪ್ರತಿನಿಧಿ ಸಿದ್ದ ಎಂದ ತೇಜಸ್ವಿ ಸೂರ್ಯ

1-qweqwewqeq

Nomination; ವಾರಾಣಸಿಯಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

1-qweqwewqe

Hyderabad; ನಿಖಾಬ್ ತೆಗೆಯುವಂತೆ ಹೇಳಿದ ಬಿಜೆಪಿ ಅಭ್ಯರ್ಥಿ ಮಾಧವಿ ಮೇಲೆ ಕೇಸ್

Kohli IPL 2024

RCB ಕೊಹ್ಲಿಯನ್ನು ಮತ್ತೆ ನಾಯಕನನ್ನಾಗಿ ಮಾಡಬೇಕು: ಹರ್ಭಜನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwewqeqwe

ಅಗ್ನಿ ದೇವರು ಎನ್ನುವವರು ಅದರ ಜತೆ ಮಲಗುತ್ತಿರಾ ಎಂದಿದ್ದ ಬಸವಣ್ಣ : ನಿಜಗುಣಾನಂದ ಶ್ರೀ

Revanna 2

Bail; ಎಚ್.ಡಿ.ರೇವಣ್ಣ ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರು

siddanna

Eknath Shinde ಭ್ರಮೆಯಲ್ಲಿದ್ದಾರೆ, ನಮ್ಮ ಶಾಸಕರು ಮಾರಾಟವಾಗಲು ಸಿದ್ದರಿಲ್ಲ: ಸಿದ್ದರಾಮಯ್ಯ

police

Vijayapura: ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ

MLC Election; ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ರಘುಪತಿ ಭಟ್ ನಿರ್ಧಾರ

MLC Election; ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ರಘುಪತಿ ಭಟ್ ನಿರ್ಧಾರ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-eqwewqeqwe

ಅಗ್ನಿ ದೇವರು ಎನ್ನುವವರು ಅದರ ಜತೆ ಮಲಗುತ್ತಿರಾ ಎಂದಿದ್ದ ಬಸವಣ್ಣ : ನಿಜಗುಣಾನಂದ ಶ್ರೀ

accident

Mundgod: ಬೈಕ್ ಗಳ ನಡುವೆ ಮುಖಾಮುಖಿ ; ಓರ್ವ ಸಾವು, ಇಬ್ಬರು ಗಂಭೀರ

tejaswi

Rahul Gandhi ಅವರಿಗೆ ಪತ್ರ ಬರೆದು ಬಹಿರಂಗ ಚರ್ಚೆಗೆ ಪ್ರತಿನಿಧಿ ಸಿದ್ದ ಎಂದ ತೇಜಸ್ವಿ ಸೂರ್ಯ

1-qweqwewqeq

Nomination; ವಾರಾಣಸಿಯಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.