Chennai: ಶಾಲೆಗಳಿಗೆ ಬಾಂಬ್ ಬೆದರಿಕೆ: ತನಿಖೆ
Team Udayavani, Feb 8, 2024, 8:31 PM IST
ಚೆನ್ನೈ: ಈ ಹಿಂದೆ ಬೆಂಗಳೂರು, ಮುಂಬೈ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದಂತೆ, ಗುರುವಾರ ಚೆನ್ನೈ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿನ ಶಾಲಾ ವಿದ್ಯಾರ್ಥಿಗಳನ್ನು ಹೆತ್ತವರೊಂದಿಗೆ ಮನೆಗಳಿಗೆ ಕಳಿಸಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಬಾಂಬ್ ಬೆದರಿಕೆಯೊಡ್ಡಿ ಇ-ಮೇಲ್ ಬಂದಿರುವ ಶಾಲೆಗಳಲ್ಲಿ ದಿ ಚೆನ್ನೈ ಪಬ್ಲಿಕ್ ಸ್ಕೂಲ್, ಸೇಂಟ್ ಮೇರೀಸ್ ಸ್ಕೂಲ್ ಮತ್ತು ಪೇರೀಸ್ ಸ್ಕೂಲ್ ಸೇರಿವೆ.
ಬಾಂಬ್ ಬೆದರಿಕೆ ಕರೆ ಬಂದ ಬೆನ್ನಲ್ಲೇ ಪೊಲೀಸರು ಬಾಂಬ್ ನಿಷ್ಕ್ರಿಯದಳವನ್ನು ಕರೆಸಿ ತಪಾಸಣೆ ನಡೆಸಿದ್ದಾರೆ. ಘಟನೆಯ ಬಳಿಕ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿರುವುದರಿಂದ ಜನ ದಿಗಿಲಾಗಬೇಕಿಲ್ಲ, ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಬಾಂಬ್ ಬೆದರಿಕೆ ಕಳುಹಿಸಿದ ವ್ಯಕ್ತಿಯನ್ನು ಶೀಘ್ರವೇ ಪತ್ತೆಹಚ್ಚುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!
J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ
Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ
ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ
ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ
MUST WATCH
ಹೊಸ ಸೇರ್ಪಡೆ
Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!
J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ
Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ
Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ
ಬರಲಿದೆ ಮತ್ತೊಂದು ಸ್ಕ್ಯಾಮ್ ಸಿರೀಸ್: ʼಸ್ಕ್ಯಾಮ್ 2010: ಸುಬ್ರತಾ ರಾಯ್ʼ ಅನೌನ್ಸ್