Kadaba; ಸ್ಕೂಟರ್-ಟಿಪ್ಪರ್ ಢಿಕ್ಕಿ: ಸವಾರ ಗಂಭೀರ
Team Udayavani, Feb 9, 2024, 12:08 AM IST
ಕಡಬ: ಸ್ಕೂಟರ್ ಹಾಗೂ ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೊಯಿಲ ಕೆ.ಸಿ. ಫಾರ್ಮ್ ಗೇಟ್ ಬಳಿ ಬುಧವಾರ ಸಂಭವಿಸಿದೆ.
ಸ್ಕೂಟರ್ ಸವಾರ, ರಾಮಕುಂಜ ಗ್ರಾಮದ ನೀರಾಜೆ ನಿವಾಸಿ ಆದಂ ಎನ್. (52) ಅವರು ಗಂಭೀರ ಗಾಯಗೊಂಡವರು.ಅವರು ಸ್ಕೂಟರ್ನಲ್ಲಿ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ರಸ್ತೆಯಲ್ಲಿ ಉಪ್ಪಿನಂಗಡಿ ಕಡೆಗೆ ಹೋಗುತ್ತಿರುವಾಗ ಕೊಯಿಲ ಕೆ.ಸಿ. ಫಾರ್ಮ್ ಗೇಟ್ ಬಳಿ ಕಡಬ ಕಡೆಗೆ ಬರುತ್ತಿದ್ದ ಟಿಪ್ಪರ್ ಚಾಲಕ ರಸ್ತೆಯ ತೀರಾ ಬಲಬದಿಗೆ ಟಿಪ್ಪರ್ ಅನ್ನು ಚಲಾಯಿಸಿಕೊಂಡು ಸ್ಕೂಟರ್ಗೆ ಢಿಕ್ಕಿ ಹೊಡೆಸಿದ್ದ. ಘಟನೆಯಲ್ಲಿ ಸ್ಕೂಟರ್ ಸವಾರ ಆದಂ ಅವರು ಸ್ಕೂಟರ್ ಸಮೇತ ಟಿಪ್ಪರ್ನಡಿಗೆ ಬಿದ್ದು ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡಿರುವ ಆದಂ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. Vasantha Bangera: ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ
Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!
ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ
Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ
K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ
MUST WATCH
ಹೊಸ ಸೇರ್ಪಡೆ
ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ
K. Vasantha Bangera: ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ
ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫಲ…
Paris Olympics: ಇಂದಿನಿಂದ ಒಲಿಂಪಿಕ್ಸ್ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ
Federation Cup 2024: ಮೂರು ವರ್ಷ ಬಳಿಕ ಜಾವೆಲಿನ್ ಎಸೆತಗಾರ ನೀರಜ್ ಭಾರತದಲ್ಲಿ ಸ್ಪರ್ಧೆ