ತೇರದಾಳ: ಗ್ರಾಪಂಗೆ ಬೀಗ ಹಾಕಿ ಸದಸ್ಯರ ಪ್ರತಿಭಟನೆ


Team Udayavani, Feb 9, 2024, 5:30 PM IST

ತೇರದಾಳ: ಗ್ರಾಪಂಗೆ ಬೀಗ ಹಾಕಿ ಸದಸ್ಯರ ಪ್ರತಿಭಟನೆ

ಉದಯವಾಣಿ ಸಮಾಚಾರ
ತೇರದಾಳ: ಅಭಿವೃದ್ಧಿ ಕಾಮಗಾರಿಗಳಿಗೆ ಅಧಿಕಾರಿಗಳಿಂದಲೇ ವಿಳಂಬ ಆಗುತ್ತಿದೆ ಎಂದು ಆರೋಪಿಸಿ ಗ್ರಾಮ ಪಂಚಾಯಿತಿಯ
ಬಿಜೆಪಿ-ಕಾಂಗ್ರೆಸ್‌ ಸದಸ್ಯರು ಹನಗಂಡಿ ಗ್ರಾಪಂ ಕಾರ್ಯಾಲಯಕ್ಕೆ ಬೀಗ ಹಾಕಿ ಪ್ರತಿಭಟಿಸಿದರು.

ಕಳೆದ ಆರು ತಿಂಗಳಿಂದ ರಾಷ್ಟ್ರೀಯ ಉದ್ಯೋಗ ಖಾತ್ರಿ ಕೆಲಸಗಳಿಗೆ ಅನುಮತಿ ನೀಡುತ್ತಿಲ್ಲ. ಶಾಲೆಗಳಿಗೆ ಕಂಪೌಂಡ್‌, ಶೆಡ್‌, ಕೃಷಿ ಹೊಂಡ, ಕೆರೆ ಅಭಿವೃದ್ಧಿ, ಬಾಂದಾರ ಸೇರಿದಂತೆ ಹಲವು ಕೆಲಸಗಳಿಗೆ ತಡೆ ಹಿಡಿಯಲಾಗಿದೆ. ಹೀಗಾದರೆ ಗ್ರಾಮಸ್ಥರಿಗೆ ಏನು ಉತ್ತರ ನೀಡಬೇಕೆಂದು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

ಸ್ವಲ್ಪ ಸಮಯದ ನಂತರ ತಾಪಂ ಎಡಿ ಮುನ್ನೊಳಿ ಹಾಗೂ ಪಿಡಿಒ ರಾವಳ ಆಗಮಿಸಿ, ಕಚೇರಿ ಬೀಗ ತೆಗೆಯಿರಿ. ಒಳಗೆ ಕುಳಿತು ಮಾತನಾಡೋಣ ಎಂದು ಹೇಳಿದರು. ಅದಕ್ಕೆ ಒಪ್ಪದ ಸದಸ್ಯರು, ಎಡಿ ಹಾಗೂ ಪಿಡಿಒ ಅವರನ್ನು ತರಾಟೆಗೆ ತಗೆದುಕೊಂಡು ನಿಮ್ಮಿಂದಲೇ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಿಂತಿವೆ. ಸದಸ್ಯರುಗಳ ಕುರಿತು ಹಗುರವಾಗಿ ಮಾತನಾಡಿದ್ದಿರಿ. ಸ್ಥಳಕ್ಕೆ
ತಾಪಂ ಇಒ ಬರುವವರೆಗೆ ಬೀಗ ತಗೆಯುವುದಿಲ್ಲ ಎಂದು ಹಠ ಹಿಡಿದು ಕುಳಿತರು.

ಹನಗಂಡಿ ಗ್ರಾಮ ಪಂಚಾಯಿತಿಗೆ ಆಗಮಿಸಿದ ತಾಪಂ ಇಒ ಸಿದ್ದಪ್ಪ ಪಟ್ಟಿಹಾಳ, ನೆಲದ ಮೇಲೆ ಕುಳಿತಿದ್ದ ಸದಸ್ಯರ ಕೈ ಹಿಡಿದು ಒಳಗೆ ಕುಳಿತು ಮಾತನಾಡೋಣ ಬನ್ನಿ ಎಂದು ವಿನಂತಿಸಿದರು. ಆದರೆ ಸದಸ್ಯರು ಅದಕ್ಕೆ ಒಪ್ಪದೆ ಇಲ್ಲಿಯೇ ಮಾತನಾಡಿ ಎಂದು ಹಠ ಹಿಡಿದರು. ಕೊನೆಗೆ ಇಒ ಅವರೇ ಸದಸ್ಯರುಗಳ ಜತೆಗೆ ಕುಳಿತರು.

ಯಾವ ಕಾರಣಕ್ಕೆ ಕಾಮಗಾರಿ ತಡೆ ಹಿಡಿಯಲಾಗಿದೆ ಎಂದು ಸದಸ್ಯರು, ಇಒ ಅವರನ್ನು ಪ್ರಶ್ನಿಸಿದರು. ಇಒ ಪಟ್ಟಿಹಾಳ
ಮಾತನಾಡಿ, ಕಾಮಗಾರಿ ಶೀಘ್ರ ಆರಂಭಿಸುವುದರ ಜತೆಗೆ ಪಿಡಿಒ ಅವರನ್ನು ಬದಲಾಯಿಸುವುದಾಗಿ ಭರವಸೆ ನೀಡಿದರು. ಸದಸ್ಯರಾದ ಚಂದ್ರಶೇಖರ ಗುಬಚಿ, ಪ್ರಕಾಶ ನಾರವ್ವಗೋಳ, ಕುಮಾರ ಕಾಂಬಳೆ, ನಬೀಸಾಬ ಶಿಲ್ಲೇದಾರ, ಹಸನ್‌ ಮೌಲಾನಾ ಪಕಾಲಿ, ಮಹಾವೀರ ಬಿದರಿ ಕಮಾಲ್‌ ರಾಮದುರ್ಗ, ಅನಿಲ ಗುಬಚಿ, ಕರೆಪ್ಪ ದಳವಾಯಿ, ಅಲ್ಲಾಬಕ್ಷ ಅಲಾಸ, ಸಿದ್ದಪ್ಪ ಸೋರಗಾಂವಿ, ಮಂಜುನಾಥ ಕೊಡಗನೂರ, ಪರುಶರಾಮ ಮಾದರ, ರಸೂಲ ಬಾಗಿ, ವಿಠಲ ಮತ್ತಿತರಿದ್ದರು.

ಟಾಪ್ ನ್ಯೂಸ್

ISREL

West Bank ಮೇಲೆ ಇಸ್ರೇಲ್ ದಾಳಿ; ವೈದ್ಯ ಸೇರಿ ಕನಿಷ್ಠ 7 ಮೃತ್ಯು

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

3-mahalingapur

Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ISREL

West Bank ಮೇಲೆ ಇಸ್ರೇಲ್ ದಾಳಿ; ವೈದ್ಯ ಸೇರಿ ಕನಿಷ್ಠ 7 ಮೃತ್ಯು

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.