Siddaramaiah; ಯಾವಾಗ ಸಭೆ ನಡೆಸುತ್ತೀರಿ? ಯಾವಾಗ ಪರಿಹಾರ ನೀಡುತ್ತೀರಿ?
Team Udayavani, Feb 11, 2024, 12:45 AM IST
ಬೆಂಗಳೂರು: ಬರ ಪರಿಹಾರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳುಗಳಾಗಿವೆ. ಯಾವಾಗ ಸಭೆ ನಡೆಸುತ್ತೀರಿ? ಎಂದು ಪರಿಹಾರ ನೀಡುತ್ತೀರಿ? ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪ್ರಶ್ನೆ ಮಾಡಿದ್ದಾರೆ.
ಅಮಿತ್ ಶಾ ರಾಜ್ಯ ಪ್ರವಾಸ ಹಿನ್ನೆಲೆಯಲ್ಲಿ ಪತ್ರಿಕಾ ಪ್ರಕಟನೆ ನೀಡಿ ಈ ಪ್ರಶ್ನೆ ಮುಂದಿಟ್ಟಿರುವ ಅವರು, ಕೇಂದ್ರ ತಜ್ಞರ ಸಮಿತಿ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿಯಾಗಿದೆ. ನಿಯಮಗಳ ಪ್ರಕಾರ ಕೇಂದ್ರ ಗೃಹಸಚಿವರ ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತಜ್ಞರ ವರದಿಯನ್ನು ಪರಿಶೀಲಿಸಿ ಪರಿಹಾರಕ್ಕೆ ಅನುಮೋದನೆ ನೀಡಬೇಕು. ಇಂತಹದ್ದೊಂದು ಸಣ್ಣ ಸಭೆ ನಡೆಸಲು ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಪುರುಸೊತ್ತಿಲ್ಲ. ಯಾವಾಗ ಬರ ಪರಿಹಾರ ನೀಡುತ್ತೀರಿ? ಕರ್ನಾಟಕಕ್ಕೆ ಕಾಲಿಡುವ ಮೊದಲು ಈ ಪ್ರಶ್ನೆಗೆ ಉತ್ತರಿಸಿ ಎಂದಿದ್ದಾರೆ.
ತಾರತಮ್ಯ ನೀತಿಯನ್ನು ಕನ್ನಡಿಗರಿಗೆ ತಿಳಿಸಲು ಕರ್ನಾಟಕಕ್ಕೆ ಬರುತ್ತಿದ್ದೀರಾ ಅಮಿತ್ ಶಾ ಅವರೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna ವಿರುದ್ಧ ಕ್ರಮಕ್ಕೆ ಜೋಷಿ ಒತ್ತಾಯಿಸಿದ್ದರಾ?: ಪ್ರಿಯಾಂಕ್ ಖರ್ಗೆ
PSI Exam ರಾಜ್ಯದ 402 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ: ಸೆಪ್ಟಂಬರ್ನಲ್ಲಿ ಪರೀಕ್ಷೆ
Prajwal Revanna Case ವೀಡಿಯೋ ಹಂಚಿದವರು ಜಾಮೀನಿಗಾಗಿ ಹೈಕೋರ್ಟ್ಗೆ
Prajwal Revanna Case ಅಶ್ಲೀಲ ವಿಡಿಯೋ: ಸಹಾಯವಾಣಿಗೆ ಕರೆ ಬಂದರೂ ದೂರು ನೀಡದ ಸ್ತ್ರೀಯರು
Prajwal ಪ್ರಚಾರಕ್ಕೆ ಹೋದಾಗ ಬಂಧಿಸದೇ ಕತ್ತೆ ಕಾಯುತ್ತಿದ್ದರಾ?: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Devaraje Gowda ನ್ಯಾಯಾಂಗ ಬಂಧನ ಜೂ.7ರವರೆಗೆ ವಿಸ್ತರಣೆ
Prajwal Revanna ವಿರುದ್ಧ ಕ್ರಮಕ್ಕೆ ಜೋಷಿ ಒತ್ತಾಯಿಸಿದ್ದರಾ?: ಪ್ರಿಯಾಂಕ್ ಖರ್ಗೆ
PSI Exam ರಾಜ್ಯದ 402 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ: ಸೆಪ್ಟಂಬರ್ನಲ್ಲಿ ಪರೀಕ್ಷೆ
Prajwal Revanna Case ವೀಡಿಯೋ ಹಂಚಿದವರು ಜಾಮೀನಿಗಾಗಿ ಹೈಕೋರ್ಟ್ಗೆ
Prajwal Revanna Case ಅಶ್ಲೀಲ ವಿಡಿಯೋ: ಸಹಾಯವಾಣಿಗೆ ಕರೆ ಬಂದರೂ ದೂರು ನೀಡದ ಸ್ತ್ರೀಯರು