Koteshwara; ಯುವಕರಿಗೆ ಉದ್ಯೋಗ ನೀಡಲು ಆದ್ಯತೆ ಕೊಡಿ: ಜಯಪ್ರಕಾಶ್ ಹೆಗ್ಡೆ
ಕೋಟೇಶ್ವರ: ಭಾವೈಕ್ಯ - ಬಂಟರ ಮಹಾ ಸಮಾಗಮ
Team Udayavani, Feb 11, 2024, 11:54 PM IST
ಕುಂದಾಪುರ: ಉಡುಪಿಯಲ್ಲಿ ಬಂಟರೆಂದು, ದ.ಕ. ದಲ್ಲಿ ನಾಡವರೆಂದು ಕರೆದರೂ, ಈಗಲೂ ಈ ಜಿಲ್ಲೆ ಭಾವನಾತ್ಮಕವಾಗಿ ಒಂದೇ ಆಗಿದೆ. ಬ್ಯಾಂಕ್ ಅಥವಾ ಉದ್ಯಮ ಆರಂಭಿಸಿ, ಸಮುದಾಯದ ಇನ್ನಷ್ಟು ಯುವಕರಿಗೆ ಕೆಲಸ ಕೊಡುವ ಕಾರ್ಯ ಆಗಲಿ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದರು.
ಕೋಟೇಶ್ವರದಲ್ಲಿ ರವಿವಾರ ಕುಂದಾಪುರ ತಾಲೂಕು ಯುವ ಬಂಟರ ಸಂಘದದಶಮ ಸಂಭ್ರಮದ ಭಾಗವಾಗಿ ಆಯೋಜಿಸಿದ “ಭಾವೈಕ್ಯ : ಬಂಟರ ಮಹಾ ಸಮಾಗಮ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮುಂಬಯಿನ ಉದ್ಯಮಿ ಕೂಳೂರುಕನ್ಯಾನ ಸದಾಶಿವ ಶೆಟ್ಟಿ ಉದ್ಘಾಟಿಸಿದರು.
ಸಂಸ್ಮರಣ ಪ್ರಶಸ್ತಿ ಪ್ರದಾನ
ದಿ| ಯಡ್ತರೆ ನರಸಿಂಹ ಶೆಟ್ಟಿ ಸಂಸ್ಮರಣ ಪ್ರಶಸ್ತಿ ಸ್ವೀಕರಿಸಿದ ಎಂಆರ್ಜಿ ಸಮೂಹ ಸಂಸ್ಥೆ ಸಿಎಂಡಿ ಕೆ. ಪ್ರಕಾಶ್ ಶೆಟ್ಟಿ ಮಾತನಾಡಿ, ಬಂಟ ಸಮಾಜದವರಿಂದಲೇ ನಾನು ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗಿದೆ. ಆ ಋಣ ನನ್ನ ಮೇಲಿದೆ. ಅದಕ್ಕಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಮಾಡುತ್ತಿದ್ದೇನೆ ಎಂದರು.
ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ಮಾತನಾಡಿ, ಕಾಸರಗೋಡಿನಿಂದ ಶಿರೂರುವರೆಗಿನ ಬಂಟರೆಲ್ಲರೂ ಒಂದೇ. ಅವರ ಕೀರ್ತಿ ಇನ್ನಷ್ಟು ಪಸರಿಸಲಿ ಎಂದು ಹಾರೈಸಿದರು.
ಉದ್ಯಮಿಗಳಾದ ದುಬಾೖಯ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ದಶಪಥ ಸಂಚಿಕೆ, ಬೆಂಗಳೂರಿನ ಎಸ್.ಎಸ್. ಹೆಗ್ಡೆ ವಿದ್ಯಾ ದೀವಿಗೆ ಹಾಗೂ ಬೆಳ್ಳಾಡಿ ಅಶೋಕ ಶೆಟ್ಟಿ ನವಚೇತನಕ್ಕೆ ಚಾಲನೆ ನೀಡಿದರು. ಯುವ ಸಾಧಕರನ್ನು ಗೌರವಿಸಲಾಯಿತು.
ಶಾಸಕ ಗುರುರಾಜ ಗಂಟಿಹೊಳೆ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಕೋಶಾಧಿಕಾರಿ ಉಳೂ¤ರು ಮೋಹನದಾಸ ಶೆಟ್ಟಿ, ಪುಣೆಯ ಕುಶಲ್ ಎಸ್. ಹೆಗ್ಡೆ, ಬಂಟರ ಯಾನೆ ನಾಡವರ ಸಂಘದ ಮಾಜಿ ಸಂಚಾಲಕ ಡಾ| ವೈ.ಎಸ್. ಹೆಗ್ಡೆ, ಮಾಜಿ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಸಂಚಾಲಕ ಆವರ್ಸೆ ಸುಧಾಕರ ಶೆಟ್ಟಿ, ಸಹ ಸಂಚಾಲಕ ಅಶೋಕ ಶೆಟ್ಟಿ ಸಂಸಾಡಿ, ಸಂಘಗಳ ಅಧ್ಯಕ್ಷರಾದ ಪುಣೆಯ ಸಂತೋಷ ವಿ. ಶೆಟ್ಟಿ, ಗಣೇಶ ಹೆಗ್ಡೆ, ಬೆಂಗಳೂರಿನ ಮುರಳೀಧರ ಹೆಗ್ಡೆ, ಎ.ಜೆ. ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ| ಪ್ರಶಾಂತ್ ಮಾರ್ಲ, ಕುಶಲ ಹೆಗ್ಡೆ ಟ್ರಸ್ಟ್ನ ಉದಯ ಕುಮಾರ್ ಹೆಗ್ಡೆ, ಅರುಣ್ ಕುಮಾರ್ ಹೆಗ್ಡೆ, ಉದ್ಯಮಿಗಳಾದ ಆನಗಳ್ಳಿ ಕರುಣಾಕರ ಹೆಗ್ಡೆ, ಚಂದ್ರ ಶೆಟ್ಟಿ ಕುಂದಾಪುರ, ವಿಜಯ ಕುಮಾರ್ ಶೆಟ್ಟಿ, ಕೃಷ್ಣ ಪ್ರಸಾದ್ ಅಡ್ಯಂತಾಯ, ಇಂಬು ರತ್ನಾಕರ ಶೆಟ್ಟಿ, ಗೋಪಾಲ ಶೆಟ್ಟಿ ಮೂರೂರು, ಕಮಲ ಕಿಶೋರ ಹೆಗ್ಡೆ, ವತ್ಸಲಾ ದಯಾನಂದ ಶೆಟ್ಟಿ, ವಿನಯ ಆಸ್ಪತ್ರೆಯ ಡಾ| ರಂಜಿತ್ ಕುಮಾರ್ ಶೆಟ್ಟಿ, ನಗು ಗ್ರೂಪ್ನ ಕುಶಲ ಶೆಟ್ಟಿ, ಸಿಎಗಳಾದ ಜಯರಾಮ ಶೆಟ್ಟಿ, ದಯಾ ಶರಣ್ ಶೆಟ್ಟಿ, ಸುಧಾಕರ ಹೆಗ್ಡೆ, ತಲ್ಲೂರು ಫ್ಯಾಮಿಲಿ ಟ್ರಸ್ಟ್ನ ಡಾ| ತಲ್ಲೂರು ಶಿವರಾಮ ಶೆಟ್ಟಿ, ಯುವ ಬಂಟರ ಸಂಘದ ಗೌರವಾಧ್ಯಕ್ಷ ಬಿ. ಉದಯ ಕುಮಾರ್ ಶೆಟ್ಟಿ, ಬಿ. ವಿನಯ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಅಧ್ಯಕ್ಷ ಡಾ| ಅಂಪಾರು ನಿತ್ಯಾನಂದ ಶೆಟ್ಟಿ ಸ್ವಾಗತಿಸಿ, ಪ್ರ. ಸಂಚಾಲಕ ಪ್ರತಾಪ್ಚಂದ್ರ ಶೆಟ್ಟಿ ಹಳ್ನಾಡು ಪ್ರಸ್ತಾವಿಸಿದರು. ಡಾ| ಚೇತನ್ ಶೆಟ್ಟಿ ಕೋವಾಡಿ, ಆರ್ಜೆ ನಯನಾ ನಿರೂಪಿಸಿ, ಅಕ್ಷಯ್ ಹೆಗ್ಡೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ