U19’ಕಿರಿಯರಿಗೆ ಉಜ್ವಲ ಭವಿಷ್ಯ’: ಸೀನಿಯರ್‌ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಕೆಲವರು 

ಇಲ್ಲಿ ತೀವ್ರ ಸ್ಪರ್ಧೆ ಎನ್ನುವುದನ್ನು ಗಮನಿಸಬೇಕು...

Team Udayavani, Feb 13, 2024, 6:20 AM IST

1-WEEEWQEWQ

ಬೆನೋನಿ: ಭಾರತದ ಅಂಡರ್‌-19 ತಂಡ ವಿಶ್ವಕಪ್‌ ಫೈನಲ್‌ನಲ್ಲಿ ಆಸ್ಟ್ರೇಲಿಯಕ್ಕೆ ಶರಣಾಗಿ ತೀವ್ರ ನಿರಾಸೆ ಮೂಡಿಸಿದೆ. ಆದರೆ ತಂಡದ ಒಟ್ಟಾರೆ ಸಾಧನೆ ತೃಪ್ತಿಕರ ಎಂಬುದು ಕೋಚ್‌ ಹೃಷಿಕೇಶ್‌ ಕಾನಿಟ್ಕರ್‌ ಅಭಿಪ್ರಾಯ. ಇವರಲ್ಲಿ ಕೆಲವರಾದರೂ ಭಾರತದ ಸೀನಿಯರ್‌ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದಿದ್ದಾರೆ.

“ಭಾರತದ ಕ್ರಿಕೆಟ್‌ ಭವಿಷ್ಯ ಖಂಡಿತವಾಗಿಯೂ ಉಜ್ವಲವಾಗಿದೆ. ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗಗಳೆರಡರಲ್ಲೂ ಪ್ರತಿಭಾನ್ವಿತ ಆಟಗಾರರಿದ್ದಾರೆ. ಪರಿಸ್ಥಿತಿಗೆ ತಕ್ಕಂತೆ ಪ್ರಬುದ್ಧತೆ ತೋರಿದರೆ ಮುಂದೊಂದು ದಿನ ಭಾರತದ ಸೀನಿಯರ್‌ ತಂಡವನ್ನು ಖಂಡಿತವಾಗಿಯೂ ಪ್ರತಿನಿಧಿಸಲಿದ್ದಾರೆ’ ಎಂಬುದಾಗಿ ಕಾನಿಟ್ಕರ್‌ ಹೇಳಿದರು.

ನಾಯಕ ಉದಯ್‌ ಸಹಾರಣ್‌, ಮುಶೀರ್‌ ಖಾನ್‌, ಸಚಿನ್‌ ಧಾಸ್‌, ಸೌಮ್ಯಕುಮಾರ್‌ ಪಾಂಡೆ ಅವರೆಲ್ಲ ಈ ಕೂಟದಲ್ಲಿ ಉತ್ತಮ ಪ್ರದರ್ಶನ ಕಾಯ್ದುಕೊಂಡು ಬಂದಿದ್ದರು.

ಪಂಜಾಬ್‌ ತಂಡವನ್ನು ಪ್ರತಿನಿಧಿಸುವ ಉದಯ್‌ ಸಹಾರಣ್‌ ಕೂಟದಲ್ಲೇ ಸರ್ವಾಧಿಕ 397 ರನ್‌ ಬಾರಿಸಿದ್ದಾರೆ. ಮುಶೀರ್‌ ಖಾನ್‌ ಅವಳಿ ಶತಕದೊಂದಿಗೆ 360 ರನ್‌ ಪೇರಿಸಿದ್ದಾರೆ. ಸಚಿನ್‌ ಧಾಸ್‌ ಫಿನಿಶಿಂಗ್‌ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ. ಎಡಗೈ ಸ್ಪಿನ್ನರ್‌ ಪಾಂಡೆ ಅವರದು 18 ವಿಕೆಟ್‌ ಸಾಧನೆಯಾಗಿದೆ.

ಯಶಸ್ವಿ ಕ್ರಿಕೆಟಿಗರು
ಕಿರಿಯರ ಕ್ರಿಕೆಟ್‌ನಲ್ಲಿ ಯಶಸ್ವಿಯಾಗಿ ಟೀಮ್‌ ಇಂಡಿಯಾವನ್ನು ಪ್ರತಿನಿಧಿ ಸಿದವರ ದೊಡ್ಡದೊಂದು ಯಾದಿಯೇ ಇದೆ. ಯುವರಾಜ್‌ ಸಿಂಗ್‌, ಮೊಹಮ್ಮದ್‌ ಕೈಫ್, ಸುರೇಶ್‌ ರೈನಾ, ಶಿಖರ್‌ ಧವನ್‌, ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮ, ರವೀಂದ್ರ ಜಡೇಜ, ಕೆ.ಎಲ್‌. ರಾಹುಲ್‌, ರಿಷಭ್‌ ಪಂತ್‌, ಶುಭಮನ್‌ ಗಿಲ್‌, ಯಶಸ್ವಿ ಜೈಸ್ವಾಲ್‌ ಇವರಲ್ಲಿ ಪ್ರಮುಖರು.

“ಕಿರಿಯರ ವಿಶ್ವಕಪ್‌ ಮುಗಿದ ಬಳಿಕ ಒಂದಿಬ್ಬರಾದರೂ ಭಾರತದ ಸೀನಿಯರ್‌ ತಂಡದಲ್ಲಿ ಅಥವಾ ಐಪಿಎಲ್‌ನಲ್ಲಿ ಆಡುವ ಅವಕಾಶ ಪಡೆಯುತ್ತಾರೆ. ಆದರೆ ಇಲ್ಲಿ ತೀವ್ರ ಸ್ಪರ್ಧೆ ಎನ್ನುವುದನ್ನು ಗಮನಿಸಬೇಕು’ ಎಂಬುದಾಗಿ ಕಾನಿಟ್ಕರ್‌ ಹೇಳಿದರು.

ಯು-19 ವಿಶ್ವಕಪ್‌ ತಂಡದಲ್ಲಿ ಭಾರತದ ನಾಲ್ಕು ಆಟಗಾರರು
ಸಂಪ್ರದಾಯದಂತೆ ಐಸಿಸಿ ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿ ಮುಗಿದ ಬೆನ್ನಲ್ಲೇ “ಟೀಮ್‌ ಆಫ್ ದ ಟೂರ್ನಮೆಂಟ್‌’ ಪ್ರಕಟಗೊಂಡಿದೆ. ಇದರಲ್ಲಿ ಉದಯ್‌ ಸಹಾರನ್‌ ಸೇರಿದಂತೆ ಭಾರತದ ನಾಲ್ವರು ಸ್ಥಾನ ಪಡೆದಿದ್ದಾರೆ.

ಬ್ಯಾಟರ್‌ಗಳಾದ ಮುಶೀರ್‌ ಖಾನ್‌, ಸಚಿನ್‌ ಧಾಸ್‌ ಮತ್ತು ಸ್ಪಿನ್ನರ್‌ ಸೌಮ್ಯಕುಮಾರ್‌ ಪಾಂಡೆ ಇತರ ಮೂವರು. ಚಾಂಪಿಯನ್‌ ಆಸ್ಟ್ರೇಲಿಯದ ನಾಯಕ ಹ್ಯೂ ವೀಬೆjನ್‌ ಈ ತಂಡಕ್ಕೂ ನಾಯಕರಾಗಿದ್ದಾರೆ.

ತಂಡ: ಲಾನ್‌ ಡ್ರೆ ಪ್ರಿಟೋರಿಯಸ್‌ (ದ.ಆ.), ಹ್ಯಾರಿ ಡಿಕ್ಸನ್‌ (ಆ), ಮುಶೀರ್‌ ಖಾನ್‌ (ಭಾ), ಹ್ಯೂ ವೀಬೆjನ್‌ (ಆ., ನಾಯಕ), ಉದಯ್‌ ಸಹಾರಣ್‌ (ಭಾ), ಸಚಿನ್‌ ಧಾಸ್‌ (ಭಾ), ನಥನ್‌ ಎಡ್ವರ್ಡ್‌ (ವೆ), ಕಾಲಂ ವಿಡ್ಲರ್‌ (ಆ), ಉಬೇದ್‌ ಶಾ (ಪಾ), ಕ್ವೇನ ಡಂಫ‌ಕ (ದ.ಆ.), ಸೌಮ್ಯಕುಮಾರ್‌ ಪಾಂಡೆ (ಭಾ), ಜೇಮಿ ಡಂಕ್‌ (ಸ್ಕಾ).

ಟಾಪ್ ನ್ಯೂಸ್

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

T20 World Cup: McGurk is Australia’s reserve player

T20 World Cup: ಮೆಕ್‌ಗರ್ಕ್‌ ಆಸ್ಟ್ರೇಲಿಯದ ಮೀಸಲು ಆಟಗಾರ

T20 World Cup; Dwayne Bravo is the Afghanistan bowling consultant

T20 World Cup; ಡ್ವೇನ್‌ಬ್ರಾವೊ ಅಫ್ಘಾನ್‌ ಬೌಲಿಂಗ್‌ ಸಲಹೆಗಾರ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Balagopal

Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.