Bantwala: ರೈಲ್ವೆ ಓವರ್ ಬ್ರಿಡ್ಜ್ ನ ಅಡಿಭಾಗದಲ್ಲಿ ಸಿಲುಕಿಕೊಂಡ ಲಾರಿ
Team Udayavani, Feb 13, 2024, 11:14 AM IST
ಬಂಟ್ವಾಳ: ರೋಲರ್ ವಾಹನವನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ರೈಲ್ವೆ ಓವರ್ ಬ್ರಿಡ್ಜ್ ನ ಅಡಿಭಾಗದಲ್ಲಿ ಸಿಲುಕಿಕೊಂಡ ಘಟನೆ ಫೆ. 13ರ ಮಂಗಳವಾರ ಬೆಳಿಗ್ಗೆ 9 ಗಂಟೆಗೆ ನಡೆದಿದ್ದು, ಕೆಲ ಹೊತ್ತು ಸಂಚಾರಕ್ಕೆ ಅಡ್ಡಿಯಾದ ಘಟನೆ ಬಿಸಿರೋಡಿನ ಕೈಕಂಬ ಸಮೀಪದ ಮೊಡಂಕಾಪು ಎಂಬಲ್ಲಿ ನಡೆದಿದೆ.
ಪವಿತ್ರ ಗುತ್ತಿಗೆ ಸಂಸ್ಥೆಗೆ ಸೇರಿದ ಸೊತ್ತುಗಳು ಇದಾಗಿದ್ದು, ಬೆಂಜನಪದವು ಸೈಟ್ ನಿಂದ ಪುತ್ತೂರು ಸವಣೂರು ಎಂಬಲ್ಲಿ ನಡೆಯಲಿರುವ ಕಾಮಗಾರಿಗೆ ರೋಲರ್ ಅನ್ನು ಲಾರಿಯಲ್ಲಿ ತುಂಬಿಸಿಕೊಂಡು ಹೋಗುವ ವೇಳೆ ಮೊಡಂಕಾಪು ಎಂಬಲ್ಲಿ ರೈಲ್ವೆಯ ಅಡಿಭಾಗದಲ್ಲಿ ಕ್ರಾಸ್ ಮಾಡಲು ಸಾಧ್ಯವಾಗದೆ ಸಿಲುಕಿಕೊಂಡಿದೆ.
ರೈಲ್ವೆಯ ಓವರ್ ಬ್ರಿಡ್ಜ್ ನ ಎತ್ತರಕ್ಕಿಂತ ಅಧಿಕ ಎತ್ತರದಲ್ಲಿ ಲಾರಿಯ ಲೋಡ್ ಮಾಡಿಕೊಂಡಿದ್ದೇ ಈ ಘಟನೆಗೆ ಕಾರಣವಾಗಿದೆ ಎಂದು ಹೇಳಲಾಗಿದೆ.
ಘಟನೆಯಿಂದ ರೈಲ್ವೆ ಇಲಾಖೆಗೆ ಸೇರಿದ ಕಬ್ಬಿಣದ ರಾಡ್ ತುಂಡಾಗಿ ಲಾರಿಯ ಮೇಲೆ ಬಿದ್ದಿದೆ. ಅದೃಷವಶಾತ್ ಬೇರೆ ಯಾವುದೇ ವಾಹನಗಳ ಮೇಲೆ ಬೀಳದೆ ಇದ್ದು, ಯಾವ ಅಪಾಯಕಾರಿ ಘಟನೆ ನಡೆದಿಲ್ಲ.
ಸ್ಥಳಕ್ಕೆ ರೈಲ್ವೆ ಇಲಾಖೆಯವರು ಆಗಮಿಸಿದ್ದು, ಘಟನೆಯಿಂದ ಆಗಿರುವ ನಷ್ಟಕ್ಕೆ ಪರಿಹಾರದ ಬಗ್ಗೆ ಲಾರಿಯವರಲ್ಲಿ ಮಾತುಕತೆ ನಡೆಸುತ್ತಿದ್ದಾರೆ.
ಘಟನೆ ನಡೆದ ಸಂದರ್ಭ ಸಂಚಾರಕ್ಕೆ ಅಡಚಣೆಯಾಗಿದ್ದು, ಮೆಲ್ಕಾರ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕ್ರೇನ್ ಬಳಸಿ ಲಾರಿಯನ್ನು ಬದಿಗೆ ಸರಿಸಿ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿದರು.
ಎ.ಎಸ್.ಐ.ಗಳಾದ ಜನಾರ್ಧನ, ಸುರೇಶ್ ಪಡಾರ್ ಮತ್ತು ಸಿಬ್ಬಂದಿ ಅಭಿಷೇಕ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ