ಆನ್‌ಲೈನ್‌ ಗೇಮ್‌ ಬಿಡಿ, ಮೈದಾನಕ್ಕಿಳಿದು ಆಟ ಆಡಿ-ರಾಜ್ಯಸಭಾ ಸದಸ್ಯ ಈರಣ್ಣ


Team Udayavani, Feb 13, 2024, 2:45 PM IST

ಆನ್‌ಲೈನ್‌ ಗೇಮ್‌ ಬಿಡಿ, ಮೈದಾನಕ್ಕಿಳಿದು ಆಟ ಆಡಿ-ರಾಜ್ಯಸಭಾ ಸದಸ್ಯ ಈರಣ್ಣ

ಉದಯವಾಣಿ ಸಮಾಚಾರ
ಬೆಳಗಾವಿ: ಇಂದಿನ ಆಧುನಿಕ ಯುಗದಲ್ಲಿ ವ್ಯಾಯಾಮ ಶಾಲೆ, ಗರಡಿ ಮನೆಗಳು ಮಾಯವಾಗುತ್ತಿವೆ. ಮೊಬೈಲ್‌, ಆನ್‌ಲೈನ್‌
ಗೇಮ್‌ಗಳಿಗಿಂತಲೂ ಮೈದಾನಕ್ಕಿಳಿದು ದೇಹ ಸದೃಢಗೊಳ್ಳುವ ಆಟಗಳನ್ನು ಆಡಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ತಾಲೂಕಿನ ಅತಿವಾಡ ಗ್ರಾಮದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾಗೂ ಸಂಸದೆ ಮಂಗಲಾ ಅಂಗಡಿ ಅವರ ತಲಾ 5 ಲಕ್ಷ ರೂ. ನಂತೆ ಒಟ್ಟು 10 ಲಕ್ಷ ರೂ. ಅನುದಾನದಲ್ಲಿ ಅತ್ಯಾಧುನಿಕ ಶಿವಪ್ರತಿಷ್ಠಾನ ಹಿಂದೂಸ್ಥಾನ ವ್ಯಾಯಾಮ ಶಾಲೆ ಉದ್ಘಾಟಿಸಿ ಅವರು ಮಾತನಾಡಿದರು.

ಯುವಕರು ಮೊಬೆ„ಲ್‌, ಆನ್‌ಲೈನ್‌ ಗೇಮ್‌ ಗಳನ್ನು ಆಡುವ ಮೂಲಕ ತಮ್ಮ ಆರೋಗ್ಯದ ಕಡೆಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಹಿಂದಿನ ದಿನಗಳಲ್ಲಿ ಗರಡಿಮನೆಗಳಿಗೆ ಹೋಗಿ ಕುಸ್ತಿ ಆಡುವ ಪರಿಪಾಠವಿತ್ತು. ಮೈದಾನಗಳಲ್ಲಿ ಕ್ರೀಡೆಗಳಲ್ಲಿ ಭಾಗವಹಿಸಿ ಯುವಕರು ದೇಹವನ್ನು ಕಟುಮಸ್ತಾಗಿ ಇಟ್ಟುಕೊಳ್ಳುತ್ತಿದ್ದರು. ಆದರೆ ಈಗಿನ ದಿನಮಾನದಲ್ಲಿ ಅದು ಮಾಯವಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದರು.

ಅತಿವಾಡ ಗ್ರಾಮದಲ್ಲಿ ನಿರ್ಮಾಣಗೊಂಡ ಈ ವ್ಯಾಯಾಮ ಶಾಲೆಯ ಉಪಯೋಗವಾಗಬೇಕು. ಯುವಕರು ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು ಎಂದರು.

ಸಂಸದೆ ಮಂಗಲಾ ಅಂಗಡಿ ಮಾತನಾಡಿ, ಯುವಕರು ದುಶ್ಚಟಗಳ ದಾಸರಾಗದೇ ಆರೋಗ್ಯವೇ ಭಾಗ್ಯ ಎಂದು ಹೆಚ್ಚಿನ ಶ್ರಮ
ವಹಿಸಬೇಕು. ನಿತ್ಯವೂ ವ್ಯಾಯಾಮ ಮಾಡಿ ಸದೃಢರಾಗಬೇಕು ಎಂದ ಅವರು, ಅತಿವಾಡ ಗ್ರಾಮದಲ್ಲಿ ಧನಂಜಯ ಜಾಧವ ಹಾಗೂ ಯತೇಶ್‌ ಹೆಬ್ಟಾಳಕರ ಅವರು ಅತಿ ಕಡಿಮೆ  ಸಮಯದಲ್ಲಿ ಸಂಸದರ ಅನುದಾನವನ್ನು ಸರಿಯಾಗಿ ಬಳಸಿ ಇಂತಹ ಭವ್ಯವಾದ ವ್ಯಾಯಾಮ ಶಾಲೆ ನಿರ್ಮಿಸಿರುವುದು ಶ್ಲಾಘನೀಯ ಎಂದರು.

ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಲ ಅಧ್ಯಕ್ಷ ಧನಂಜಯ ಜಾಧವ ಮಾತನಾಡಿ, ಅತಿವಾಡ ಗ್ರಾಮದಲ್ಲಿ ಯುವಕರ ಇಚ್ಛಾಶಕ್ತಿಯಿಂದ ಈ ವ್ಯಾಯಾಮ ಶಾಲೆ ನಿರ್ಮಾಣವಾಗಿದೆ. ಗ್ರಾಮಕ್ಕೆ ಏನು ಬೇಕು ಎಂಬುದರ ಬಗ್ಗೆ ಯುವಕರೇ  ಯೋಚಿಸಿ ಇಂಥ ಅತ್ಯಾಧುನಿಕ ವ್ಯಾಯಾಮ ಶಾಲೆ ನಿರ್ಮಿಸಿಕೊಂಡಿದ್ದಾರೆ ಎಂದರು.

ಅಂತಾರಾಷ್ಟ್ರೀಯ ದೇಹದಾಡ್ಯì ಪಟುಗಳಾದ ಪ್ರಶಾಂತ ಖಾನೂಕರ್‌, ಪ್ರತಾಪ ಕಾಲಕುಂದ್ರಿಕರ, ಪ್ರಸಾದ ಬಾಚಿಕರ ಅವರು ದೇಹದಾರ್ಢ್ಯದ ಬಗ್ಗೆ ಮಾತನಾಡಿದರು.

ಶ್ರೀ ಶಿವಪ್ರತಿಷ್ಠಾನ ಹಿಂದೂಸ್ಥಾನ ವತಿಯಿಂದ ಗಣ್ಯರನ್ನು ಭವ್ಯವಾಗಿ ಸ್ವಾಗತಿಸಲಾಯಿತು. ಗ್ರಾಪಂ ಅಧ್ಯಕ್ಷ ಸಾಯಿ ಛಬ್ಬುಬಾಯಿ ಕಾಂಬಳೆ, ಉಪಾಧ್ಯಕ್ಷೆ ಯೋಗೀಶ ಹೇಳ್ಕರ, ಮುಖಂಡರಾದ ಯತೇಶ ಹೆಬ್ಟಾಳಕರ, ಸಚಿನ ನಾಚಣಕರ, ಲಖನ್‌ ಗುರೂಜಿ, ಸತೀಶ ನಿಲಜಕರ, ಪ್ರದೀಪ ಪಾಟೀಲ, ಪಾಲಿಕೆ ಸದಸ್ಯರಾದ ರಾಜು ಭಾತಖಾಂಡೆ, ಶಂಕರ ಪಾಟೀಲ, ಮುಖಂಡರಾದ ರಾಮಲಿಂಗ ಪಾಟೀಲ, ದಯಾನಂದ ಭೋಗನ್‌, ಅಜಿತ ಜಾಧವ, ನಾಗನಾಥ ಜಾಧವ, ಗವಡು ಪಾಟೀಲ, ಆನಂದ ಬೆಳಗಾಂವ ಪಾಟೀಲ, ಯಲ್ಲಪ್ಪ ಪಾಟೀಲ, ಮಾರುತಿ ಹೆಬ್ಬಾಳಕರ, ಗೋಪಾಲ ಕಾಮೆವಾಡಿ, ಹನುಮಂತ ಪಾಟೀಲ, ಸುರೇಶ ಪಾಟೀಲ, ಅನಿಲ್‌ ಪಾಟೀಲ, ಅರ್ಜುನ ಬೆಳಗಾಂವಕರ, ಪಿಡಿಒ ಸ್ಮಿತಾ ಚಂದರಗಿ ಇತರರು ಇದ್ದರು.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ: ಶೆಟ್ಟರ್

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ: ಶೆಟ್ಟರ್

Belagavi; ಬಿರು ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ

Belagavi; ಬಿರು ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ

ಸರಳತೆ-ಸಮಾನತೆಯ ಸಮಾಜ ನಿರ್ಮಿಸೋಣ: ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ

ಸರಳತೆ-ಸಮಾನತೆಯ ಸಮಾಜ ನಿರ್ಮಿಸೋಣ: ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.