Kushtagi: ರಸ್ತೆ ಪಕ್ಕದ ಗಿಡಗಳಿಗೆ ನೀರುಣಿಸಿ ಸಾಮಾಜಿಕ ಕಾರ್ಯದಲ್ಲಿ ತೊಡಗಿದ ಉದ್ಯಮಿ


Team Udayavani, Feb 17, 2024, 1:04 PM IST

6-kushtagi

ಕುಷ್ಟಗಿ: ಪಟ್ಟಣದ ಮುಖ್ಯ ರಸ್ತೆಯ ವಿಭಜಕ ಹಾಗೂ ರಸ್ತೆ ಅಕ್ಕ ಪಕ್ಕದಲ್ಲಿ ಟ್ರೀ ಗಾರ್ಡ್ ರಕ್ಷಣೆಯ ಗಿಡಗಳಿಗೆ ಪಟ್ಟಣದ ಉದ್ಯಮಿಯೊಬ್ಬರು ಸ್ವಯಂ ಪ್ರೇರಿತರಾಗಿ ನೀರುಣಿಸುವ ಕಾಳಜಿ ಅನುಕರಣೀಯವೆನಿಸಿದೆ.

ಕುಷ್ಟಗಿ ಪಟ್ಟಣದ ವನ್ಯಜೀವಿ ಛಾಯಾಗ್ರಾಹಕ ಪಾಂಡುರಂಗ ಆಶ್ರೀತ ಹಾಗೂ ಉದಯವಾಣಿ ಪತ್ರಕರ್ತ ಮಂಜುನಾಥ ಮಹಾಲಿಂಗಪುರ ನೇತೃತ್ವದ ‘ಹಸಿರು ಕುಷ್ಟಗಿ’ ತಂಡದ ಸಹಯೋಗದಲ್ಲಿ ಎನ್ಎಚ್ ಕ್ರಾಸ್ ದಿಂದ ಬಸವೇಶ್ವರ ವೃತ್ತ, ಮಾರುತಿ ವೃತ್ತದಿಂದ ಬಸ್ ನಿಲ್ದಾಣದವರೆಗೂ ಗಿಡಗಳನ್ನು ನೆಡಲಾಗಿದೆ.

ಈ ಗಿಡಗಳಿಗೆ ಹಿಂದಿನ ಸಿಪಿಐ ನಿಂಗಪ್ಪ ರುದ್ರಪ್ಪಗೋಳ, ʼಹಸಿರು ಕುಷ್ಟಗಿʼ ತಂಡದ ಸ್ಪಂದನೆ ಮೇರೆಗೆ ಸೋಲಾರ್ ಪ್ಲಾಂಟ್ ಕಂಪನಿ ಟ್ರೀ ಗಾರ್ಡ್ ಮಾಡಿಸಿಕೊಟ್ಟಿತ್ತು. ಸಾಮಾಜಿಕ ಅರಣ್ಯ ಇಲಾಖೆ ಸಸಿಗಳನ್ನು ನೀಡಿದೆ. ಶಾಸಕ ದೊಡ್ಡನಗೌಡ ಪಾಟೀಲ ಅವರ ನೆರವಿನೊಂದಿಗೆ ರಸ್ತೆ ವಿಭಜಕದಲ್ಲಿ ಹಾಗೂ ರಸ್ತೆ ಪಕ್ಕದಲ್ಲಿ ಗುಂಡಿ ಅಗೆದು ಟ್ರೀ ಗಾರ್ಡ್ ರಕ್ಷಣೆಯಲ್ಲಿ ಗಿಡ ನೆಡಲಾಗಿದೆ.

ಈ ಸಾಮಾಜಿಕ ಕಾಳಜಿಗೆ ಕುಷ್ಟಗಿ ಪುರಸಭೆ ನೀರುಣಿಸಲು ಆಸಕ್ತಿ ತೋರಿಸಲಿಲ್ಲ. ಪ್ರಾದೇಶಿಕ ವಲಯ ಅರಣ್ಯ ಇಲಾಖೆ ಸದ್ಯಕ್ಕೆ ಅವಕಾಶ ಇಲ್ಲ. ಮುಂದಿನ ಆರ್ಥಿಕ ವರ್ಷದಲ್ಲಿ ಕ್ರಿಯಾ ಯೋಜನೆ ಸಲ್ಲಿಸಿ ಅನುಮೋದನೆ ಪಡೆದೇ ಗಿಡಗಳಿಗೆ ನೀರುಣಿಸುವುದಾಗಿ ಹೇಳಿ ಹಿಂದುಳಿಯಿತು. ಈ  ಪರಿಸ್ಥಿತಿಯಲ್ಲಿ ಕುಷ್ಟಗಿ ಪಟ್ಟಣದ ಎನ್.ಸಿ.ಎಚ್. ಪ್ಯಾಲೇಸ್ ಮಾಲೀಕ ನಾಗಪ್ಪ ಹೊಸವಕ್ಕಲ್ ಸ್ವಯಂಪ್ರೇರಿತರಾಗಿ ಈ ಗಿಡಗಳಿಗೆ ಆಶ್ರಯದಾತರಾಗಿದ್ದಾರೆ.

ನಾಗಪ್ಪ ಹೊಸವಕ್ಕಲ ಅವರು ಪ್ರತಿ ವಾರದಲ್ಲಿ ಎರಡು ದಿನ ತಮ್ಮ ಸ್ವಂತ ಖರ್ಚಿನಲ್ಲಿ ನೀರಿನ ಟ್ಯಾಂಕರ್ ನಿಂದ ಬೆಳಗ್ಗೆ ಗಿಡಗಳಿಗೆ ನೀರುಣಿಸುವುದು ದಿನಚರಿಯಾಗಿದೆ.

ನೀರುಣಿಸುವ ಸೇವೆಯಿಂದ ಸಂತೃಪ್ತ ಭಾವ ಕಾಣುವ ನಾಗಪ್ಪ ಮಾತನಾಡಿ, ಸಮಾಜದಲ್ಲಿ ನನ್ನ ವಾಣಿಜ್ಯ ವ್ಯವಹಾರ ಚೆನ್ನಾಗಿ ನಡೆಯುತ್ತಿದೆ. ಹೀಗಾಗಿ ಸಮಾಜದ ಋಣ ನನ್ನ ಮೇಲಿದ್ದು ಈ ರೀತಿ ತೀರಿಸುತ್ತಿದ್ದೇನೆ. ಉತ್ತಮ ದೇಹಾರೋಗ್ಯಕ್ಕೆ ದಿನ ಬೆಳಗಾದರೆ ವಾಕಿಂಗ್‌ ಮಾಡಬೇಕು. ವಾಕಿಂಗ್ ಮಾಡುವ ಬದಲು ಗಿಡಗಳಿಗೆ ನೀರುಣಿಸುತ್ತಿರುವೆ. ಪಟ್ಟಣದ ಉದ್ಯಾನವನ, ಲೇಔಟ್‌ ನಲ್ಲಿ ನೆಟ್ಟಿರುವ ಗಿಡಗಳಲ್ಲದೇ ಪಟ್ಟಣದ ಮುಖ್ಯ ರಸ್ತೆಯ ವಿಭಜಕ ಮತ್ತು ರಸ್ತೆ ಪಕ್ಕದ ಗಿಡಗಳಿಗೆ ನೀರುಣಿಸುತ್ತಿದ್ದು ಇದರಲ್ಲಿ ಖುಷಿ ಇದೆ ಎನ್ನುತ್ತಾರೆ.

ಟಾಪ್ ನ್ಯೂಸ್

police

Vijayapura: ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ

MLC Election; ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ರಘುಪತಿ ಭಟ್ ನಿರ್ಧಾರ

MLC Election; ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ರಘುಪತಿ ಭಟ್ ನಿರ್ಧಾರ

ಶೀಘ್ರದಲ್ಲೇ ಮದುವೆಯಾಗಲಿದ್ದೇನೆ… ಕೊನೆಗೂ ಮದುವೆ ವಿಚಾರದಲ್ಲಿ ಮೌನ ಮುರಿದ ರಾಹುಲ್

Rahul Gandhi: ಶೀಘ್ರದಲ್ಲೇ ಮದುವೆಯಾಗಲಿದ್ದೇನೆ… ಅಭಿಮಾನಿಯ ಪ್ರಶ್ನೆಗೆ ರಾಹುಲ್ ಉತ್ತರ

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

T20 ಕ್ರಿಕೆಟ್ ನಿಂದ ರೋಹಿತ್ ನಿವೃತ್ತಿ? ಹಾರ್ದಿಕ್ ತಂಡ ಸೇರ್ಪಡೆಗೆ ಹಿಟ್ ಮ್ಯಾನ್ ಕಾರಣ?

T20 ಕ್ರಿಕೆಟ್ ನಿಂದ ರೋಹಿತ್ ನಿವೃತ್ತಿ? ಹಾರ್ದಿಕ್ ತಂಡ ಸೇರ್ಪಡೆಗೆ ಹಿಟ್ ಮ್ಯಾನ್ ಕಾರಣ?

13

ಸಂಗೀತ ನಿರ್ದೇಶಕ ಜಿವಿ ಪ್ರಕಾಶ್ ಕುಮಾರ್ ದಾಂಪತ್ಯದಲ್ಲಿ ಬಿರುಕು: ಶೀಘ್ರದಲ್ಲಿ ವಿಚ್ಚೇದನ?

Andhra Pradesh: ಅಧಿಕಾರಕ್ಕೆ ಲಗ್ಗೆ ಹಾಕುವವರು ಯಾರು?ನೆಲೆಗಾಗಿ ಕೈ-ಬಿಜೆಪಿ ಹೋರಾಟ

Andhra Pradesh: ಅಧಿಕಾರಕ್ಕೆ ಲಗ್ಗೆ ಹಾಕುವವರು ಯಾರು?ನೆಲೆಗಾಗಿ ಕೈ-ಬಿಜೆಪಿ ಹೋರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೋಟಿಹಾಳ: ಬೆಂಕಿಯಿಂದ ಬಾಣಲೆಗೆ ಬಿದ್ದ ಕುಟುಂಬ; ಸಂತ್ರಸ್ತರ ಅಳಲು

ದೋಟಿಹಾಳ: ಬೆಂಕಿಯಿಂದ ಬಾಣಲೆಗೆ ಬಿದ್ದ ಕುಟುಂಬ; ಸಂತ್ರಸ್ತರ ಅಳಲು

8-gangavathi

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

Minchu

ಕುಷ್ಟಗಿ: ಸಿಡಿಲು ಬಡಿದು ಯುವಕ‌ ದುರ್ಮರಣ

1-wqeqwewq

Gangavathi: ಪೊಲೀಸ್ ಠಾಣೆಯಲ್ಲೇ ಒಂದೇ ಕೋಮಿನ ಎರಡು ಗುಂಪುಗಳ ಮಾರಾಮಾರಿ

11-kushtagi

SSLC Result: ಉದಯವಾಣಿ ಪತ್ರಿಕೆಯ ಬೈಕ್ ರೂಟ್ ವಿತರಕನ ಮಗಳು ಎಸ್ಸೆಸ್ಸೆಲ್ಸಿಯಲ್ಲಿ ಟಾಪರ್

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ದೋಟಿಹಾಳ: ಬೆಂಕಿಯಿಂದ ಬಾಣಲೆಗೆ ಬಿದ್ದ ಕುಟುಂಬ; ಸಂತ್ರಸ್ತರ ಅಳಲು

ದೋಟಿಹಾಳ: ಬೆಂಕಿಯಿಂದ ಬಾಣಲೆಗೆ ಬಿದ್ದ ಕುಟುಂಬ; ಸಂತ್ರಸ್ತರ ಅಳಲು

police

Vijayapura: ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ

ಅಬ್ಬಾ…ತರಕಾರಿ ಬಲು ದುಬಾರಿ..! ಗ್ರಾಹಕರ ಜೇಬಿಗೆ ಕತ್ತರಿ

ಅಬ್ಬಾ…ತರಕಾರಿ ಬಲು ದುಬಾರಿ..! ಗ್ರಾಹಕರ ಜೇಬಿಗೆ ಕತ್ತರಿ

1-wewewq

Koratagere; 201 ಕೆರೆಗಳ ಮೇಲೆ ಭೂ ಮಾಫಿಯಾ ಕಣ್ಣು!!

MLC Election; ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ರಘುಪತಿ ಭಟ್ ನಿರ್ಧಾರ

MLC Election; ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ರಘುಪತಿ ಭಟ್ ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.