Udupi; ಹಲ್ಲೆ: ದೂರು, ಪ್ರತಿದೂರು ದಾಖಲು
Team Udayavani, Feb 25, 2024, 12:39 AM IST
ಉಡುಪಿ: ಹೊಟೇಲ್ ವ್ಯವಹಾರದ ಬಗ್ಗೆ ಮಾತುಕತೆ ನಡೆಯುತ್ತಿದ್ದ ಸಂದರ್ಭದಲ್ಲಿ ಹಲ್ಲೆ ಯಾಗಿರುವ ಬಗ್ಗೆ ದೂರು, ಪ್ರತಿದೂರು ದಾಖಲಾಗಿದೆ.
ಈ ಬಗ್ಗೆ ಮೂಡನಿಡಂಬೂರು ಗ್ರಾಮದ ರಾಘವೇಂದ್ರ (46) ನೀಡಿದ ದೂರಿನಂತೆ ಆದರ್ಶ (32) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿ ಮತ್ತು ದೂರುದಾರರ ನಡುವೆ ಹೊಟೇಲ್ ವ್ಯವಹಾರದ ಬಗ್ಗೆ ಒಪ್ಪಂದವಾಗಿದ್ದು, ಇದನ್ನು ರದ್ದುಪಡಿಸಿ ಆರೋಪಿ ನೀಡಿದ್ದ ಮುಂಗಡ ಹಣವನ್ನು ವಾಪಸ್ ನೀಡುವ ಬಗ್ಗೆ ಫೆ. 23ರಂದು ಮಾತುಕತೆ ನಡೆಯುತ್ತಿತ್ತು. ಈ ಸಂದರ್ಭ ಆರೋಪಿಯು ಏಕಾಏಕಿ ರೊಚ್ಚಿಗೆದ್ದು ದೂರುದಾರರಿಗೆ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ಮಾಡಿದ್ದಾಗಿ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತಿದೂರು
ತಾನು ರಾಘವೇಂದ್ರ ಹಾಗೂ ಇತರರ ಪಾಲುದಾರಿಕೆಯ ಹೊಟೇಲಿನ ವ್ಯವಹಾರದ ಬಗ್ಗೆ ಮಾತನಾಡಲೆಂದು ಅವರ ಕಚೇರಿಗೆ ಹೋಗಿದ್ದು, ಮುಂಗಡ ನೀಡಿದ್ದ 2 ಲಕ್ಷ ರೂ. ಅನ್ನು ವಾಪಸ್ ನೀಡುವಂತೆ ಕೇಳಿದ್ದೆ. ಆಗ ಕೋಪಗೊಂಡ ರಾಘವೇಂದ್ರ ಹಾಗೂ ಇತರರು ನನ್ನ ಮೇಲೆ ಹಲ್ಲೆ ನಡೆಸಿದ್ದು, ಈ ಸಂದರ್ಭದಲ್ಲಿ ನನ್ನ 4 ಪವನ್ ತೂಕದ ಚಿನ್ನದ ಸರ ಹಾಗೂ 10 ಸಾ.ರೂ. ಇದ್ದ ಪರ್ಸ್ ಕಾಣೆಯಾಗಿದೆ ಎಂದು ಆದರ್ಶ್ ಆರೋಪಿಸಿದ್ದಾರೆ. ಈ ಸಂಬಂಧ ಮಂಜುನಾಥ, ರಾಘವೇಂದ್ರ, ಹೇಮಂತ್, ದಿನೇಶ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?
ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಡಿಕೆಶಿ;
ಹೊಸ ಸೇರ್ಪಡೆ
BassBox X120: ಸೌಂಡ್ ಬಾರ್ ಕ್ಷೇತ್ರಕ್ಕೆ ಕಾಲಿಟ್ಟ BOULT: ಎರಡು ಸೌಂಡ್ ಬಾರ್ ಬಿಡುಗಡೆ
Ujjivan Small Finance Bank; ಉಜ್ಜೀವನ್ ಎಂಡಿ, ಸಿಇಒ ಆಗಿ ಸಂಜೀವ್ ನೌಟಿಯಾಲ್ ನೇಮಕ
Bigg Boss OTT 3: ಈ ಬಾರಿ ಸಲ್ಮಾನ್ ಖಾನ್ ಅನುಮಾನ; ಬೇರೆ ನಿರೂಪಕರತ್ತ ಆಯೋಜಕರ ಚಿತ್ತ
Old Is Gold; ರೀ ರಿಲೀಸ್ನತ್ತ ಸ್ಟಾರ್ ಸಿನಿಮಾಗಳು
Sirsi: ಕೆರೆ ಅಭಿವೃದ್ದಿ ಮಾಡಿದರೆ ಮಾತ್ರ ಜಲ ಸಂರಕ್ಷಣೆ ಸಾಧ್ಯ… :ಶ್ರೀನಿವಾಸ ಹೆಬ್ಬಾರ್