Congress ಹೊಟೇಲ್‌ ವಾಸ್ತವ್ಯಕ್ಕೆ 8 ಉಸ್ತುವಾರಿ: ಅಡ್ಡಮತದಾನದ ಭೀತಿ

ನಾಳೆ ಅಧಿವೇಶನ ಮುಗಿದ ಕೂಡಲೇ "ಹಿಲ್ಟನ್‌ಗೆ' ಶಾಸಕರು

Team Udayavani, Feb 25, 2024, 6:30 AM IST

congress

ಬೆಂಗಳೂರು: ಮಂಗಳವಾರ ನಡೆಯಲಿ ರುವ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಡ್ಡ
ಮತದಾನದ ಭೀತಿ ಎದುರಿಸುತ್ತಿರುವ ಕಾಂಗ್ರೆಸ್‌ ತನ್ನ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಎಂದಿನ ದಾರಿ ಹಿಡಿದಿದೆ. ಸೋಮವಾರ ರಾತ್ರಿ ಎಲ್ಲರಿಗೂ ಬೆಂಗಳೂರಿನಲ್ಲಿ ಹೊಟೇಲ್‌ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ವ್ಯವಸ್ಥೆಗಳನ್ನು ನಿಭಾಯಿಸಲು ಸಚಿವರಾದ ಕೃಷ್ಣ ಬೈರೇಗೌಡ, ಬೈರತಿ ಸುರೇಶ್‌ ನೇತೃತ್ವದಲ್ಲಿ 8 ಮಂದಿಯ ತಂಡ ನೇಮಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್‌ ಈ ಸಂಬಂಧ ಪಕ್ಷದ ಶಾಸಕರಿಗೆ ಪತ್ರ ಬರೆದಿದ್ದು, ಸೋಮವಾರ ಮಧ್ಯಾಹ್ನ 12ಕ್ಕೆ ಎಲ್ಲ ಶಾಸಕರು ಹೆಬ್ಟಾಳದ ಮಾನ್ಯತಾ ಟೆಕ್‌ಪಾರ್ಕ್‌ ಆವರಣದಲ್ಲಿರುವ ಹಿಲ್ಟನ್‌ ಹೊಟೇಲ್‌ಗೆ ಆಗಮಿಸಬೇಕು. ಅಂದು ಅಪರಾಹ್ನ 3.30ಕ್ಕೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಹೀಗಾಗಿ ಎಲ್ಲ ಶಾಸಕರು ಒಂದು ದಿನದ ವಾಸ್ತವ್ಯಕ್ಕಾಗಿ ಸಿದ್ಧತೆ ಮಾಡಿಕೊಂಡು ಬರಬೇಕೆಂದು ಕೋರಿದ್ದಾರೆ.

ಮಂಗಳವಾರ ಅಲ್ಲಿಂದಲೇ ವಿಧಾನಸೌಧಕ್ಕೆ ಬಸ್‌ನಲ್ಲಿ ತೆರಳಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಸಂಬಂಧ ಶಾಸಕರ ಆಗಮನ ಹಾಗೂ ವಾಸ್ತವ್ಯದ ಸಮನ್ವಯ ಕಾಯ್ದುಕೊಳ್ಳಲು ಸಚಿವರಾದ ಕೃಷ್ಣ ಬೈರೇಗೌಡ, ಬೈರತಿ ಸುರೇಶ್‌, ಎಐಸಿಸಿ ಕಾರ್ಯದರ್ಶಿ ಅಭಿಷೇಕ್‌ ದತ್‌, ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್‌.ಎ. ಹ್ಯಾರೀಸ್‌, ಸರಕಾರಿ ಮುಖ್ಯ ಸಚೇತಕ ಪಿ.ಎಂ. ಅಶೋಕ್‌, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜ್‌ ಹಾಗೂ ನಸೀರ್‌ ಅಹ್ಮದ್‌ರನ್ನು ನಿಯೋಜಿಸಲಾಗಿದೆ.

ವ್ಯವಸ್ಥೆಗಳೇನಾಗಿದೆ?
ಡಿಸಿಎಂ ಶಿವಕುಮಾರ್‌ರಿಂದ ಕಾಂಗ್ರೆಸ್‌ನ ಎಲ್ಲ ಶಾಸಕರಿಗೆ ಪತ್ರ
ಸೋಮವಾರ ಮಧ್ಯಾಹ್ನ 12ಕ್ಕೆ ಹಿಲ್ಟನ್‌ ಹೊಟೇಲ್‌ಗೆ ತೆರಳಲು ಮನವಿ
ಅಪರಾಹ್ನ 3.30ಕ್ಕೆ ಹೊಟೇಲ್‌ನಲ್ಲಿ ಕೈ ಶಾಸಕಾಂಗ ಪಕ್ಷದ ಸಭೆ
ಅಭ್ಯರ್ಥಿಗಳಾದ ಚಂದ್ರಶೇಖರ್‌, ಅಜಯ್‌ ಮಾಕೆನ್‌, ನಾಸೀರ್‌ ಹುಸೇನ್‌ ಭಾಗಿ.
ಮಂಗಳವಾರ ಹೊಟೇಲ್‌ನಿಂದ ವಿಧಾನ ಸೌಧಕ್ಕೆ ತೆರಳಿ ಶಾಸಕರಿಂದ ಮತದಾನ

ಕುಪೇಂದ್ರ ರೆಡ್ಡಿ ಸವಾಲು
ರಾಜ್ಯಸಭೆಯ 4 ಸ್ಥಾನಗಳಿಗೆ ಐವರು ಅಭ್ಯರ್ಥಿಗಳು ಕಣದಲ್ಲಿರುವುದರಿಂದ ಕಾಂಗ್ರೆಸ್‌ ಪಕ್ಷದಿಂದ ಯಾವೊಂದು ಮತವೂ ಅಡ್ಡ ಮತ ದಾನ ಆಗಕೂಡದೆಂದು ನಿರ್ಧರಿಸಲಾಗಿದೆ. ಅದರಲ್ಲೂ ಎಐಸಿಸಿ ಅಭ್ಯರ್ಥಿಯಾಗಿರುವ ಅಜಯ್‌ ಮಾಕೆನ್‌ ಗೆಲುವು ಪ್ರತಿಷ್ಠೆಯಾಗಿದೆ. ಹೀಗಾಗಿ ತನ್ನ ಶಾಸಕರನ್ನು ಕಾಯ್ದುಕೊಳ್ಳಲು ಕಾಂಗ್ರೆಸ್‌ ಹೊಟೇಲ್‌ ವಾಸ್ತವ್ಯ ಮಾಡಿದೆ. ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸದೆ ಇರುತ್ತಿದ್ದರೆ ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ನಾರಾಯಣ ಸಾ. ಭಾಂಡಗೆ ಅವಿರೋಧವಾಗಿ ಆಯ್ಕೆಯಾಗುತ್ತಿದ್ದರು.
ಕುಪೇಂದ್ರ ರೆಡ್ಡಿ ಉಮೇದುವಾರಿಕೆ ಕುತೂಹಲ ಕೆರಳಿಸಿದೆ. ಅವರು ತನ್ನ ಗೆಲುವಿಗೆ ಅಗತ್ಯವಿರುವ 9 ಮತಗಳನ್ನು ಹೇಗೆ ಪಡೆಯುತ್ತಾರೆಂಬುದು ಯಕ್ಷ ಪ್ರಶ್ನೆಯಾಗಿದೆ. ಅವರು ಗೆಲ್ಲಬೇಕಾದರೆ ಕಾಂಗ್ರೆಸ್‌ ಮತಬುಟ್ಟಿಗೆ ಕೈ ಹಾಕಲೇಬೇಕು. ಹೀಗಾಗಿ ಕಾಂಗ್ರೆಸ್‌ಗೆ ಅಡ್ಡ ಮತದಾನದ ಭೀತಿ ಕಾಡುತ್ತಿದೆ.

ಟಾಪ್ ನ್ಯೂಸ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

kar49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

JDS MP ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ; ಪಕ್ಷದ ವಿರುದ್ಧವೇ ಸಡ್ಡು ಹೊಡೆದು ಸ್ಪರ್ಧೆ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Nutrition Stewardship Program at KMC

Manipal: ಕೆಎಂಸಿಯಲ್ಲಿ ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಕ್ರಮ

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.