Bangalore: ನಕಲಿ ಉಂಗುರ ಕೊಟ್ಟು 75 ಲಕ್ಷದ ವಜ್ರದುಂಗುರ ಕದ್ದ!
Team Udayavani, Feb 25, 2024, 11:34 AM IST
ಬೆಂಗಳೂರು: ಗ್ರಾಹಕರ ಸೋಗಿನಲ್ಲಿ ಚಿನ್ನಾಭರಣ ಮಾರಾಟ ಮಳಿಗೆಗೆ ಬಂದಿದ್ದ ವ್ಯಕ್ತಿಯೊಬ್ಬ ಸಿಬ್ಬಂದಿ ಗಮನ ಬೇರೆಡೆ ಸೆಳೆದು ನಕಲಿ ವಜ್ರದ ಉಂಗುರ ಇರಿಸಿ ಬರೊಬ್ಬರಿ 75 ಲಕ್ಷ ರೂ. ಮೌಲ್ಯದ ಅಸಲಿ ವಜ್ರದ ಉಂಗುರ ಕದ್ದು ಪರಾರಿಯಾಗಿರುವ ಘಟನೆ ಕಬ್ಬನ್ಪಾರ್ಕ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಎಂ.ಜಿ.ರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಶೋ ರೂಮ್ನಲ್ಲಿ ಫೆ.18ರಂದು ಸಂಜೆ 6 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಶೋ ರೂಮ್ ಉಸ್ತುವಾರಿ ವಿ.ಎಂ.ಶಿಬಿನ್ ಎಂಬವರು ನೀಡಿದ ದೂರಿನ ಮೇರೆಗೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ವಂಚನೆ ಪ್ರಕರಣ ದಾಖಲಿಸಿಕೊಂಡು, ಆರೋಪಿ ಪತ್ತೆ ಕಾರ್ಯ ಆರಂಭಿಸಿದ್ದಾರೆ.
ಫೆ.18ರಂದು ಸಂಜೆ 6 ಗಂಟೆಗೆ ಬಿಳಿಗಡ್ಡಧಾರಿಯೊಬ್ಬ ಗ್ರಾಹಕನ ಸೋಗಿನಲ್ಲಿ ಚಿನ್ನಾಭರಣ ಮಳಿಗೆಗೆ ಬಂದಿದ್ದಾನೆ. ಈ ವೇಳೆ ಹೆಚ್ಚಿನ ಮೌಲ್ಯದ ವಜ್ರದ ಆಭರಣಗಳನ್ನು ತೋರಿಸುವಂತೆ ಶೋ ರೂಮ್ ಸಿಬ್ಬಂದಿಗೆ ಕೇಳಿದ್ದಾನೆ. ಆಗ ಸಿಬ್ಬಂದಿ ಜಿಮ್ಮಿರಾಯ್ ಎಂಬಾತ ವಿವಿಧ ವಿನ್ಯಾಸದ ವಜ್ರ ಆಭರಣಗಳನ್ನು ತೋರಿಸಿದ್ದಾನೆ. ಈ ನಡುವೆ ಆರೋಪಿಯು ಬೇರೆ ಆಭರಣಗಳನ್ನೂ ತೋರಿಸುವಂತೆ ಸಿಬ್ಬಂದಿ ಗಮನ ಬೇರೆಡೆ ಸೆಳೆದಿದ್ದಾನೆ.
ವಿವರ ನೀಡದೇ ಕಾಲ್ಕಿತ್ತ ಆರೋಪಿ: ಆಗ ಸಿಬ್ಬಂದಿ ಜಿಮ್ಮಿ ರಾಯ್ ಬೇರೆ ಆಭರಣ ತೆಗೆಯಲು ಹೋದಾಗ, ಆರೋಪಿ ಅಸಲಿ ವಜ್ರದ ಉಂಗುರ ಕದ್ದು, ಆ ಜಾಗಕ್ಕೆ ನಕಲಿ ವಜ್ರದ ಉಂಗುರ ಇರಿಸಿದ್ದಾನೆ. ಕೆಲ ಹೊತ್ತಿನ ಬಳಿಕ ಜಿಮ್ಮಿರಾಯ್ ಆರೋಪಿಯ ವೈಯಕ್ತಿಕ ವಿವರ, ಆಧಾರ್, ಪಾನ್ ವಿವರ ಕೇಳಿದ್ದಾನೆ. ಆದರೆ, ಆರೋಪಿ ಸಬೂಬು ಹೇಳಿಕೊಂಡು ಶೋ ರೂಮ್ನಿಂದ ಕಾಲ್ಕಿತ್ತಿದ್ದಾನೆ.
ಇತ್ತ ಫೆ.19ರಂದು ಶೋ ರೂಮ್ ಸಿಬ್ಬಂದಿ ಆಭರಣಗಳನ್ನು ಪರಿಶೀಲಿಸುವಾಗ ನಕಲಿ ವಜ್ರದ ಉಂಗುರ ಇರುವುದು ಪತ್ತೆಯಾಗಿದೆ. ಬಳಿಕ ಶೋ ರೂಮ್ನ ಸಿಸಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿದಾಗ ಆರೋಪಿಯ ಕಳ್ಳಾಟ ಬಯಲಾಗಿದೆ.
ವಿವಿಧ ಜ್ಯುವೆಲರಿಗಳಿಗೆ ಭೇಟಿ ನೀಡಿದ್ದ ಆರೋಪಿ :
ಘಟನೆಯಿಂದ ವಿಚಲಿತರಾದ ಶೋ ರೂಮ್ ಸಿಬ್ಬಂದಿ ಕೂಡಲೇ ನಗರದ ಇತರೆ ಚಿನ್ನಾಭರಣ ಮಳಿಗೆಗಳಲ್ಲಿ ಆರೋಪಿಯ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ಆದೇ ಬಿಳಿಗಡ್ಡಧಾರಿ ಫೆ.17ರಂದು ಸಂಜೆ 5.30ಕ್ಕೆ ಮಾರತಹಳ್ಳಿಯ ಶೋ ರೂಮ್ ಮತ್ತು ಫೆ.18ರಂದು ಮಧ್ಯಾಹ್ನ 2 ಗಂಟೆಗೆ ಕಮ್ಮನಹಳ್ಳಿಯ ಶೋ ರೂಮ್ಗೆ ಗ್ರಾಹಕನ ಸೋಗಿನಲ್ಲಿ ಭೇಟಿ ನೀಡಿ, ಹೆಚ್ಚಿನ ಮೌಲ್ಯದ ವಜ್ರದ ಆಭರಣಗಳನ್ನು ಕೇಳಿರುವುದು ತಿಳಿದು ಬಂದಿದೆ. ಈ ವೇಳೆ ಆತ ಕೇಳಿದ ಮೌಲ್ಯದ ವಜ್ರದ ಆಭರಣಗಳು ಲಭ್ಯವಿಲ್ಲದ ಹಿನ್ನೆಲೆಯಲ್ಲಿ ಬರಿಗೈಯಲ್ಲಿ ವಾಪಾಸ್ ಆಗಿದ್ದಾನೆ. ಆದರೆ, ಅದೇ ದಿನ ಸಂಜೆ ಎಂ.ಜಿ.ರಸ್ತೆಯ ಶೋ ರೂಮ್ಗೆ ಬಂದು ತನ್ನ ಕೈ ಚಳಕ ತೋರಿಸಿ ಪರಾರಿಯಾಗಿದ್ದಾನೆ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್ ಕೊಟ್ಟ ಯುವತಿಯರು.!
Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್ಗೂ ಹಾನಿ
ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್ ವಿದ್ಯಾರ್ಥಿಗಳು ದುರ್ಮರಣ
Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು
ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ