“Yakshagana’ ಅಂಚೆ ಚೀಟಿ ಬಿಡುಗಡೆ: “ದೈವಾರಾಧನೆಯ ಮಹತ್ವ ಸಾರಲು ಶೀಘ್ರ ಅಂಚೆಚೀಟಿ’
Team Udayavani, Feb 26, 2024, 12:21 AM IST
ಮಂಗಳೂರು: ಭಾರತೀಯ ಅಂಚೆ ಇಲಾಖೆ ಹೊರತಂದಿರುವ ಯಕ್ಷಗಾನದ ಅಂಚೆ ಚೀಟಿಯು ಕರಾವಳಿಯ ಸಾಂಪ್ರದಾ ಯಿಕ ಕಲೆ ಯಕ್ಷಗಾನವನ್ನು ವಿಶ್ವದಾ ದ್ಯಂತ ಪರಿಚಯಿಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಅಂಚೆ ಇಲಾಖೆಯು ಎಂಆರ್ಪಿಎಲ್ ಪ್ರಾಯೋಜಕತ್ವದಲ್ಲಿ ಹೊರತಂದಿರುವ “ಯಕ್ಷಗಾನ’ಕ್ಕೆ ಸಮರ್ಪಿತ
ಸಂಸ್ಮರಣ ಅಂಚೆ ಚೀಟಿ ಯನ್ನು ರವಿವಾರ ಮಂಗಳೂರು ಪುರಭವನ ದಲ್ಲಿ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಕಡಲತಡಿಯ ಭಾರ್ಗವ ಶಿವರಾಮ ಕಾರಂತ ಹಾಗೂ ದೈವಾರಾಧನೆಯ ಮಹತ್ವವನ್ನು ಜಗತ್ತಿಗೆ ಸಾರುವ ನಿಟ್ಟಿನಲ್ಲಿ ಈ ಕುರಿತಂತೆಯೂ ಅಂಚೆ ಚೀಟಿಯನ್ನು ಕೂಡ ಹೊರತರುವಲ್ಲಿ ವಿಶೇಷ ಪ್ರಯತ್ನ ಮಾಡಲಾಗುವುದು ಎಂದರು.
ಶಾಸಕ ಡಿ. ವೇದವ್ಯಾಸ ಕಾಮತ್ಮಾತನಾಡಿ, ಅಂಚೆ ಚೀಟಿ ಮೂಲಕಯಕ್ಷಗಾನವನ್ನು ವಿಶ್ವಕ್ಕೆ ಪರಿಚಯ ವಾಗುತ್ತಿರುವುದು ಸೌಭಾಗ್ಯ ಎಂದರು.ವಿದ್ವಾಂಸ ಡಾ| ಎಂ. ಪ್ರಭಾಕರ ಜೋಶಿ ಮಾತನಾಡಿ, ಅಂಚೆ ಚೀಟಿ ರಾಯಭಾರದ ಕೆಲಸವನ್ನು ಮಾಡುತ್ತಿದೆ. ಯಕ್ಷಗಾನಕ್ಕೆ ಯುನೆಸ್ಕೋ ಸ್ಥಾನಮಾನ, ಐಸಿಸಿಆರ್ ಮುಖೇನ ಕಾರ್ಯಕ್ರಮಗಳು ಹಾಗೂ ಅಯೋಧ್ಯೆಯ ಪ್ರತಿಷ್ಠಾ ವಾರ್ಷಿ ಕೋತ್ಸವದ ದಿನ ಸಮಗ್ರ ರಾಮಾಯಣ ಕುರಿತು 1 ವಾರ ಯಕ್ಷಗಾನಕ್ಕೆ ಅವಕಾಶ ಸಿಗಲಿ ಎಂದು ಆಶಿಸಿದರು.
ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕಾಮಾರ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಯಕ್ಷಧ್ರುವ ಪಟ್ಲ ಫೌಂಡೇಶನ್ನ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಎಂಆರ್ಪಿಎಲ್ನ ಜಿಎಂ ಡಾ| ರುಡಾಲ್ಫ್ ನೊರೋನ್ಹಾ ಮುಖ್ಯ ಅತಿಥಿಗಳಾಗಿದ್ದರು.ದಕ್ಷಿಣ ವಲಯದ ಪೋಸ್ಟ್ ಮಾಸ್ಟರ್ ಜನರಲ್ ಎಲ್.ಕೆ. ದಾಸ್ ಪ್ರಸಾವನೆಗೈದರು. ಸುಧಾಕರ ಮಲ್ಯ ಸ್ವಾಗತಿಸಿದರು. ದೇವದಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಅಬ್ಬರದ ಮಳೆ ಜತೆ ಅನಾಹುತಗಳ ಸುರಿಮಳೆ; ಕೃಷಿಗೆ ಹಾನಿ, ಉರುಳಿದ ಮರಗಳು
Mangaluru ಮೂಲದ ಫಾ| ವಿಲ್ಫ್ರೆಡ್ ; ಝಾನ್ಸಿ ಧರ್ಮಪ್ರಾಂತದ ಸಹಾಯಕ ಬಿಷಪ್ ಆಗಿ ನೇಮಕ
ಕೊಳಚಿಕಂಬಳ: ಮರುವಾಯಿ ಹೆಕ್ಕಲು ನದಿಗಿಳಿದ ಓರ್ವ ನೀರುಪಾಲು; ಮೂವರನ್ನು ರಕ್ಷಿಸಿದ ಸ್ಥಳೀಯರು
Mangaluru ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು
Mangaluru ಧಾರಾವಾಹಿ ದೃಶ್ಯದಲ್ಲಿ ಹೆಲ್ಮೆಟ್ ಇಲ್ಲದೆ ಸಂಚಾರ; ನಟಿಗೆ ದಂಡ!
MUST WATCH
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?
ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಡಿಕೆಶಿ;
ಹೊಸ ಸೇರ್ಪಡೆ
ಭಾರತದ ವಿಮಾನಗಳನ್ನು ಹಾರಿಸಲು ಸಮರ್ಥರಿರುವ ಒಬ್ಬನೇ ಒಬ್ಬ ಪೈಲೆಟ್ ನಮ್ಮಲಿಲ್ಲ: ಮಾಲ್ಡೀವ್ಸ್
‘Turbo’ trailer: ಸೂಪರ್ ಸ್ಟಾರ್ ಮಮ್ಮುಟ್ಟಿ ಮುಂದೆ ಖಡಕ್ ವಿಲನ್ ಆದ ರಾಜ್ ಬಿ ಶೆಟ್ಟಿ
Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ
Lok Sabha Election: ಆಂಧ್ರಪ್ರದೇಶ, ಒಡಿಶಾ ವಿಧಾನಸಭೆಗೂ ಚುನಾವಣೆ, ತ್ರಿಕೋನ ಸ್ಪರ್ಧೆ
Bengaluru rain: ಮಳೆಗೆ ವಿದೇಶಿ ತಳಿ ಮರಗಳೇ ಹೆಚ್ಚು ಧರೆಗೆ