Hubli; ಸಿದ್ದರಾಮಯ್ಯರಿಗೆ ಮಾನ‌ ಮರ್ಯಾದೆ ಇಲ್ಲ; ಕಿಡಿಕಾರಿದ ಪ್ರಹ್ಲಾದ ಜೋಶಿ


Team Udayavani, Feb 26, 2024, 11:34 AM IST

siddaramaiah

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾನ‌ ಮರ್ಯಾದೆ ಇಲ್ಲ. ಹಾಗಂತ ಬೇರೆಯವರಿಗೂ ಇಲ್ಲ ಎಂದು ಸಿದ್ದರಾಮಯ್ಯ ಭಾವಿಸಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹರಿಹಾಯ್ದರು.

ಸೋಮವಾರ ಸುದ್ದಿಗಾರರೊಂದೊಗೆ ಮಾತನಾಡಿದ ಅವರು, ನವಲಗುಂದ ಕಾಂಗ್ರೆಸ್ ಕಾರ್ಯಕ್ರಮದ ಭಾಷಣದಲ್ಲಿ ತಮ್ಮ ವಿರುದ್ಧ ಏಕ ವಚನದಲ್ಲಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು.

ಸಿದ್ದರಾಮಯ್ಯ ಅವರಷ್ಟು ನೀಚತನಕ್ಕೆ ನಾವು ಇಳಿಯುವುದಿಲ್ಲ. ನೀವು ಹೇಗೆ ಪ್ರಮಾಣವಚನ ಸ್ವೀಕರಿಸಿದ್ದಿರಿ ಹಾಗೆಯೇ ನಾನು ಕೂಡ ಪ್ರಮಾಣವಚನ ಸ್ವೀಕಾರ ಮಾಡಿರುವೆ. ಆಡಳಿತ, ಅಧಿಕಾರ ನಿಮಗೆ ಜಾಸ್ತಿ ಇರಬಹುದು. ಆದರೆ, ಸಂವಿಧಾನದಲ್ಲಿ ಕೇಂದ್ರ ಸರ್ಕಾರದ ಒಬ್ಬ ಮಂತ್ರಿ ಹಾಗೂ ರಾಜ್ಯದ ಮುಖ್ಯಮಂತ್ರಿ ಸಮಾನರು. ನಾನು ಮಾನ ಮರ್ಯಾದೆ ಬಿಟ್ಟು ವರ್ತನೆ ಮಾಡುವುದಿಲ್ಲ ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಯಾವುದೇ ಪೂರ್ವಾಪರ ತಿಳಿದುಕೊಳ್ಳದೆ ಉಡಾಫೆ ಹೊಡಿತಾರೆ. ಕಾಂಗ್ರೆಸ್ ಎಲ್ಲ ಸಂದರ್ಭದಲ್ಲಿ ಕಳಸಾ ಬಂಡೂರಿ ಯೋಜನೆಗೆ ತೊಡಕುಂಟು ಮಾಡಿದೆ. ಸೋನಿಯ ಗಾಂಧಿ ಅವರು ಗೋವಾಕ್ಕೆ ಹೋಗಿ ಹನಿ‌ ನೀರು ಕೊಡಲ್ಲ ಎಂದಿದ್ದರು. ಇವರಿಗೆ ಎಷ್ಟು ನಾಲಿಗೆ ಇದೆ. ಕಾಂಗ್ರೆಸ್ ನವರು ವಿವೇಚನ ರಹಿತವಾಗಿ‌ ಮಾತನಾಡುತ್ತಿದ್ದಾರೆ ಎಂದರು.

ಸಿ.ಟಿ ರವಿ ಮತ್ತು ಶೋಭಾ ಕರಂದ್ಲಾಜೆ ಗೋ ಬ್ಯಾಕ್ ವಿಚಾರ, ಕಾಂಗ್ರೆಸ್ ಸ್ವಂತ ಬಲ ಮತ್ತು ಅಭಿವೃದ್ಧಿಯಿಂದ ಗೆಲ್ಲುವುದಿಲ್ಲ. ಆದ್ದರಿಂದ ಈ ರೀತಿಯ ಹೇಳಿಕೆ ನೀಡುತ್ತಿದೆ. ಆ ಪಕ್ಷದ ಷಡ್ಯಂತರಕ್ಕೆ ಜನ ಬಲಿಯಾಗುವುದಿಲ್ಲ ಎಂದರು.

ಮಂಡ್ಯ ಕ್ಷೇತ್ರಕ್ಕೆ ಸುಮಲತಾ ವಿಚಾರವಾಗಿ ಮಾತನಾಡಿ, ಮಂಡ್ಯ ವಿಚಾರದಲ್ಲಿ ಎಲ್ಲರಿಗೂ ಸಮಾಧಾನವಾಗುವ ಪರಿಹಾರ ಕಂಡು ಹಿಡಿಯುತ್ತೇವೆ. ಅಧಿವೇಶನದಲ್ಲಿ ಸುಮಲತಾ ಜೊತೆಗೆ ಮಾತನಾಡಿದ್ದೇನೆ. ಒಂದು ಮನೆಯಿಂದ ಇನ್ನೊಂದು ಮನೆಗೆ ಮದುವೆ ಸಂಬಂಧ ಆದ ಕೂಡಲೇ ಎಲ್ಲಾ ಹೊಂದಾಣಿಕೆ ಆಗುವುದಿಲ್ಲ. ದೊಡ್ಡ ಪಕ್ಷಗಳು, ದೊಡ್ಡ ವ್ಯವಸ್ಥೆ, ಕೋಟ್ಯಾಂತರ ಜನ, ಲಕ್ಷಾಂತರ ಜನರ ಹೊಂದಾಣಿಕೆಗೆ ಸಮಯಬೇಕು. ಕುಮಾರಸ್ವಾಮಿ ಅವರ ಮೇಲೆ ನನಗೆ ಸಂಪೂರ್ಣ ನಂಬಿಕೆಯಿದೆ ಎಂದರು.

ನಿರ್ಮಲಾ ಸೀತಾರಾಮನ್ ಲೋಕಸಭೆಗೆ ಸ್ಪರ್ಧೆ ಮಾಡುವುದು ನಿಶ್ಚಿತ. ಆದರೆ, ಯಾವ ರಾಜ್ಯದಿಂದ ಸ್ಪರ್ಧೆ ಮಾಡುತ್ತಾರೆ ಎಂಬುದು ಇನ್ನು ತೀರ್ಮಾನವಾಗಿಲ್ಲ ಎಂದರು‌.

ಟಾಪ್ ನ್ಯೂಸ್

1-qweqweqwe

Kejriwal ಮನೆಯಲಿ ಹಲ್ಲೆ ಪ್ರಕರಣ: ಮಲಿವಾಲ್‌-ಆತಿಷಿ ವಾಗ್ಯುದ್ಧ

Amit Shah 2

Kejriwal ನೋಡಿದಾಗ ಜನರಿಗೆ ‘ಬಾಟಲಿ’ ನೆನಪಾಗುತ್ತೆ: ಅಮಿತ್‌ ಶಾ

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Anjali Ambigera Case; Girish and Anjali got married 15 days ago!

Anjali Ambigera Case; ಹಂತಕ ಗಿರೀಶ್ ಗೂ ಅಂಜಲಿಗೂ 15 ದಿನಗಳ ಮೊದಲೇ ಮದುವೆಯಾಗಿತ್ತು!

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

1-ewewqe

Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ

Anjali Ambigera Case; Protest by BJP workers in Hubli

Anjali Ambigera Case; ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-qweqweqwe

Kejriwal ಮನೆಯಲಿ ಹಲ್ಲೆ ಪ್ರಕರಣ: ಮಲಿವಾಲ್‌-ಆತಿಷಿ ವಾಗ್ಯುದ್ಧ

Amit Shah 2

Kejriwal ನೋಡಿದಾಗ ಜನರಿಗೆ ‘ಬಾಟಲಿ’ ನೆನಪಾಗುತ್ತೆ: ಅಮಿತ್‌ ಶಾ

1-eewewqe

Attack; ಹಾರ ಹಾಕುವ ನೆಪದಲ್ಲಿ ಕೈ ಅಭ್ಯರ್ಥಿ ಕನ್ಹಯ್ಯ ಮೇಲೆ ದಾಳಿ!

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.