Anandapura; ಕಾರು-ಬೈಕ್ ಢಿಕ್ಕಿ: ಓರ್ವ ಸಾವು, ಇನ್ನೋರ್ವ ಗಂಭೀರ
ಹೋರಿ ಬೆದರಿಸುವ ಸ್ಪರ್ಧೆ ನೋಡಿ ವಾಪಾಸ್ಸಾಗುತ್ತಿದ್ದ ವೇಳೆ ಅವಘಡ
Team Udayavani, Feb 26, 2024, 9:24 PM IST
ಶಿವಮೊಗ್ಗ : ಸಾಗರದ ಆನಂದಪುರದ ಗೌತಮಪುರ ಬಳಿ ಸೋಮವಾರ ಸಂಜೆ ಕಾರು ಮತ್ತು ಬೈಕ್ ಢಿಕ್ಕಿಯಾಗಿ ಓರ್ವ ಸವಾರ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಅವಘಡ ನಡೆದಿದೆ.
ಶಿಕಾರಿಪುರದ ಕಪ್ಪನಹಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ನೋಡಿ ವಾಪಾಸ್ಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು,ಬೈಕ್ ಸವಾರ ಭೀಮೇಶ್ (42) ಸಾವನ್ನಪ್ಪಿದ್ದು, ಮತ್ತೊಬ್ಬ ಬೈಕ್ ಸವಾರ ಪ್ರತಾಪ್ (26) ನ ಎರಡು ಕಾಲುಗಳು ತುಂಡಾಗಿವೆ ಎಂದು ವರದಿಯಾಗಿದೆ.ತೀವ್ರ ಗಾಯಗೊಂಡ ಪ್ರತಾಪ್ ಸ್ಥಿತಿ ಗಂಭೀರವಾಗಿದೆ.
ಕಾರು ಆನಂದಪುರದಿಂದ ಶಿಕಾರಿಪುರ ಕಡೆಗೆ ಸಾಗುತ್ತಿದ್ದು, ಬೈಕ್ ನಲ್ಲಿ ಸ್ನೇಹಿತರು ಶಿಕಾರಿಪುರದಿಂದ ಆನಂದಪುರದೆಡೆಗೆ ಬರುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಸವಾರರು ಆನಂದಪುರದ ಸಂತೆ ಮೈದಾನ ಬಳಿಯ ನಿವಾಸಿಗಳು ಎಂದು ತಿಳಿದು ಬಂದಿದೆ. ಆನಂದಪುರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು
SSLC: ಉತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ
Shimoga ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ
Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ
Shivamogga: ಪೊಲೀಸರ ಮೇಲೆ ಹಲ್ಲೆ ಯತ್ನ… ರೌಡಿ ಶೀಟರ್ ಶೋಹಿಬ್ ಕಾಲಿಗೆ ಗುಂಡೇಟು
MUST WATCH
ಹೊಸ ಸೇರ್ಪಡೆ
Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ
Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!
J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ
Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ
Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ