Assembly: ಇನ್ಮುಂದೆ ನಿರ್ಮಾಣ, ಏರ್ಕಂಪ್ರಸರ್, ಜನರೇಟರ್ ವಾಹನಕ್ಕೆ ಅಜೀವ ತೆರಿಗೆ
Team Udayavani, Feb 29, 2024, 8:36 PM IST
ಸಾಂದರ್ಭಿಕ ಚಿತ್ರ
ವಿಧಾನಸಭೆ: ನಿರ್ಮಾಣ ವಾಹನ ಸಾಮಗ್ರಿಗಳು, ಏರ್ ಕಂಪ್ರಸರ್ ಮತ್ತು ಜನರೇಟರ್ ಅಳವಡಿಸಿದ ವಾಹನಗಳಿಗೆ ಪೂರ್ಣಾವಧಿ ತೆರಿಗೆ ಬದಲಾಗಿ ಅಜೀವ ತೆರಿಗೆ ವಿಧಿಸುವುದು ಸೇರಿ ಕರ್ನಾಟಕ ಮೋಟಾರು ವಾಹನ ತೆರಿಗೆ ನಿರ್ಧರಣೆ ವಿಧೇಯಕಕ್ಕೆ ವಿಧಾನ ಮಂಡಲದ ಉಭಯ ಸದನಗಳಲ್ಲಿ ಒಪ್ಪಿಗೆ ದೊರೆತಿದೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಈ ವಿಧೇಯಕವನ್ನು ಮಂಡಿಸಿದರು. ವಿಧಾನಸಭೆಯಲ್ಲಿ ವಿಪಕ್ಷಗಳು ಸಭಾತ್ಯಾಗ ನಡೆಸಿದ್ದರಿಂದ ಈ ಬಗ್ಗೆ ಯಾವುದೇ ಚರ್ಚೆ ನಡೆಯಲಿಲ್ಲ. ಈ ಬಗೆಯ ವಾಹನಗಳಿಗೆ ನೋಂದಣಿ ಬಳಿಕ, ಸ್ಥಳಾಂತರ ಅಥವಾ ನೋಂದಣಿ ರದ್ದಾದ ಸಂದರ್ಭದಲ್ಲಿ ಒಂದು ವರ್ಷದೊಳಗೆ ಶೇ.93, 2 ವರ್ಷದೊಳಗೆ ಶೇ.87, ಐದು ವರ್ಷದೊಳಗೆ ಶೇ.64, 10 ವರ್ಷದೊಳಗೆ ಶೇ.41 ಹಾಗೂ 15 ವರ್ಷದವರೆಗೆ ಶೇ.25 ತೆರಿಗೆ ಪಾವತಿ ಮಾಡಬೇಕಾಗುತ್ತದೆ. ಅದೇ ರೀತಿ 25 ಲಕ್ಷ ರೂ. ಬೆಲೆ ಮೀರುವ ವಿದ್ಯುತ್ಛಕ್ತಿ ಚಾಲಿತ ಕಾರುಗಳು, ಜೀಪುಗಳು, ಓಮ್ನಿ ಬಸ್ಸುಗಳು ಹಾಗೂ ಖಾಸಗಿ ಸೇವಾ ವಾಹನಗಳ ಮೇಲೆ ಆಜೀವ ತೆರಿಗೆ ವಿಧಿಸುವುದಕ್ಕೂ ಅವಕಾಶ ಕಲ್ಪಿಸಲಾಗಿದೆ.
ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಾದರಿಯಲ್ಲಿ ಮೋಟಾರು ಸಾರಿಗೆ ಮತ್ತು ಇತರ ಸಂಬಂಧಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಉತ್ತೇಜಿಸಲು ಪ್ರತ್ಯೇಕ ವಿಧೇಯಕವನ್ನು ರಾಜ್ಯ ಸರ್ಕಾರ ಮಂಡಿಸಿದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಂಡಿಸಿದ ಈ ವಿಧೇಯಕದ ಬಗ್ಗೆ ವಿಧಾನಸಭೆಯಲ್ಲಿ ಯಾವುದೇ ಚರ್ಚೆ ನಡೆಯಲಿಲ್ಲ. ವಿಧಾನ ಪರಿಷತ್ತಿನಲ್ಲೂ ಅಂಗೀಕಾರ ಲಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್