7 ಮಂದಿಯ ಮೇಲೆ ಆಕ್ರಮಣಕಾರಿ ದಾಳಿ ನಡೆಸಿದ್ದ ಬೀದಿ ನಾಯಿ ರೇಬೀಸ್ ನಿಂದ ಸಾವು
Team Udayavani, Feb 29, 2024, 8:57 PM IST
ಕೋಯಿಕ್ಕೋಡ್(ಕೇರಳ): ಇಲ್ಲಿನ ಕೂಡರಂಜಿ ಪೇಟೆಯಲ್ಲಿ ಮಂಗಳವಾರ ಬೆಳಗ್ಗೆ ಶಾಲಾ ವಿದ್ಯಾರ್ಥಿ ಸೇರಿದಂತೆ ಏಳು ಮಂದಿಯ ಮೇಲೆ ಆಕ್ರಮಣಕಾರಿ ದಾಳಿ ನಡೆಸಿದ್ದ ಬೀದಿ ನಾಯಿ ರೇಬೀಸ್ ನಿಂದ ಸಾವನ್ನಪ್ಪಿರುವುದು ಧೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.
ಶ್ವಾನ ಸತ್ತ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ರೇಬೀಸ್ ನಿಂದ ಸಾವನ್ನಪ್ಪಿರುವುದು ಖಚಿತವಾಗಿದೆ ಎಂದು ಹಿರಿಯ ಪಶು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಆರೋಗ್ಯ ಇಲಾಖೆ ನಿಗಾವಹಿಸಿ ಕಡಿತಕ್ಕೊಳಗಾದವರನ್ನು ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಿ ಚಿಕಿತ್ಸೆ ಮತ್ತು ಲಸಿಕೆಗಳನ್ನು ನೀಡುತ್ತಿದೆ. ಗಾಯಾಳುಗಳಿಗೆ ತಲಾ ೧೦ ಸಾವಿರ ರೂ ಪರಿಹಾರ ಧನವನ್ನೂ ನೀಡಲಾಗುತ್ತಿದೆ.
ಸತ್ತಿರುವ ಶ್ವಾನ ಬೇರೆ ಯಾವುದೇ ಸಾಕು ಪ್ರಾಣಿಗಳಿಗೆ ಕಚ್ಚಿಲ್ಲ ಎಂದು ಹೇಳಲಾಗಿದೆಯಾದರೂ ನಿಗಾ ವಹಿಸಲಾಗಿದೆ. ನಾಯಿ ದಾಳಿಗೊಳಗಾದವರ ಪೈಕಿ ಬಾಲಕನಿಗೆ ಹೆಚ್ಚಿನ ಪ್ರಮಾಣದ ಗಾಯವಾಗಿದೆ. ಮಹಿಳೆ ಮತ್ತು ಇತರ ಐವರು ಪುರುಷರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ
Goa; ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ವಿದೇಶಿ ಯುವತಿ ಬಂಧನ
ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು
Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್
Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!
MUST WATCH
ಹೊಸ ಸೇರ್ಪಡೆ
Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ
MLC Election; ಕೊರಿಯರ್ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್!!
RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ
Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ
Thailand Open Super 500: ಸಾತ್ವಿಕ್ – ಚಿರಾಗ್ ಕ್ವಾರ್ಟರ್ಫೈನಲಿಗೆ