Organ donation;ಅಪಘಾತದ ಬಳಿಕ ಮಹಿಳೆಯ ಮೆದುಳು ನಿಷ್ಕ್ರೀಯ: ಅಂಗದಾನದ ಮೂಲಕ ಸಾರ್ಥಕತೆ
ಶಿವಮೊಗ್ಗ ಮೂಲದ 44 ವರ್ಷದ ಮಹಿಳೆ ಮಣಿಪಾಲ ಕೆಎಂಸಿ ಗೆ ದಾಖಲಾಗಿದ್ದರು...
Team Udayavani, Feb 29, 2024, 9:14 PM IST
ಮಣಿಪಾಲ: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡಿದ್ದ 44 ವರ್ಷದ ಮಹಿಳೆಯೊಬ್ಬರ ಅಂಗದಾನ ಮಾಡುವ ಮೂಲಕ ಕುಟುಂಬ ಸಾವಿನಲ್ಲೂ ಸಾರ್ಥಕತೆ ಮೆರೆದಿದೆ.
ಶಿವಮೊಗ್ಗ ಜಿಲ್ಲೆಯ 44 ವರ್ಷದ ಲಲಿತಮ್ಮ ಅವರು ಅಪಘಾತದಲ್ಲಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ದಾಖಲಾಗಿದ್ದರು .ವೈದ್ಯರು ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ, ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬರಲಿಲ್ಲ ಮಾನವ ಅಂಗಾಂಗ ಕಸಿ ಕಾಯ್ದೆ 1994 ರ ಅನುಸಾರ ಲಲಿತಮ್ಮ ಅವರನ್ನು ಎರಡು ಬಾರಿ ಪರಿಶೀಲಿಸಿ, ಅಧಿಕೃತವಾಗಿ ಪರಿಣಿತ ವೈದ್ಯರ ತಂಡವು ರೋಗಿಯ ಮೆದುಳು ನಿಷ್ಕ್ರೀಯಗೊಂಡಿದೆ ಎಂದು ಘೋಷಿಸಿದರು.
ಕುಟುಂಬ ಸದಸ್ಯರು ಇತರ ರೋಗಿಗಳ ಜೀವ ಉಳಿಸಲು ಕಾರ್ಯಸಾಧ್ಯವಾದ ಅಂಗಗಳನ್ನು ದಾನ ಮಾಡಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದರು. ಜೀವಸಾರ್ಥಕತೆ ಪ್ರೋಟೋಕಾಲ್ ಗಳು ಮತ್ತು ನಿರ್ಧಾರಗಳ ಪ್ರಕಾರ, ದಾನ ಮಾಡಿದ ಶ್ವಾಸಕೋಶಗಳನ್ನು ಕಿಮ್ಸ್ ಆಸ್ಪತ್ರೆ ಹೈದರಾಬಾದ್ , ಯಕೃತ್ ಅನ್ನು ಸ್ಪರ್ಶ ಆಸ್ಪತ್ರೆ ಬೆಂಗಳೂರು ಮತ್ತು ಒಂದು ಮೂತ್ರಪಿಂಡ ಯುನಿಟಿ ಆಸ್ಪತ್ರೆ ಮಂಗಳೂರಿಗೆ ಕಳುಹಿಸಲಾಯಿತು. ಒಂದು ಮೂತ್ರಪಿಂಡ ಮತ್ತು ಎರಡು ಕಾರ್ನಿಯಾಗಳನ್ನು ಮಣಿಪಾಲದಲ್ಲಿನ ನೋಂದಾಯಿತ ರೋಗಿಗಳಿಗೆ ಬಳಸಲಾಗುತ್ತಿದೆ.
“ಜೀವ ಉಳಿಸುವ ನಿಟ್ಟಿನಲ್ಲಿ ಅಂಗದಾನ ಶ್ರೇಷ್ಟವಾದ ಕೆಲಸವಾಗಿದ್ದು, ಅತ್ಯಂತ ಮಹತ್ವ ಪಡೆದಿದೆ. ಜನರು ಈ ರೀತಿಯ ಉತ್ತಮ ಕಾರ್ಯಗಳಿಗೆ ಪ್ರೋತ್ಸಾಹಿಸಬೇಕು ಎಂದು ತಿಳಿಸಿ ಅಂಗ ದಾನ ಮಾಡಲು ನಿರ್ಧರಿಸಿದ ಲಲಿತಮ್ಮ ಕುಟುಂಬಕ್ಕೆ ಕೆ ಎಂಸಿ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ಕ್ರತಜ್ಞತೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ
Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ
ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್ ಬಳಕೆ