ಭೂತ ಬಂಗಲೆಯಾಗಿ ಪರಿವರ್ತನೆ; ಇನ್ನೂ ಬಾಗಿಲು ತೆರೆಯದ ಪ್ರವಾಸಿ ಮಂದಿರ


Team Udayavani, Mar 5, 2024, 2:25 PM IST

Udayavani Kannada Newspaper

ಉದಯವಾಣಿ ಸಮಾಚಾರ
ಕುಳಗೇರಿ ಕ್ರಾಸ್‌: ಇಲ್ಲಿಯ ಪ್ರವಾಸಿ ಮಂದಿರ ಕಾಮಗಾರಿ ಪೂರ್ಣಗೊಳ್ಳದೇ ಇದ್ದರೂ ಲೆಕ್ಕಿಸದೆ ವಿಧಾನಸಭೆ ಚುನಾವಣೆ ಮುಂಚೆ ಉದ್ಘಾಟಿಸಲಾಗಿದೆ.

ಲೋಕೋಪಯೋಗಿ ಇಲಾಖೆ ಯಿಂದ ಸುಮಾರು 1.5 ಕೋಟಿ ರೂ.ವೆಚ್ಚದಲ್ಲಿ ಕಟ್ಟಲಾದ ನೂತನ ಪ್ರವಾಸಿ ಮಂದಿರವನ್ನು
ಸಿಎಂ ಸಿದ್ದರಾಮಯ್ಯನವರು ಬಾದಾಮಿ ಶಾಸಕರಿದ್ದ ಸಂದರ್ಭದಲ್ಲಿ ಉದ್ಘಾಟಿಸಿದ್ದಾರೆ. ಹೊರ ನೋಟಕ್ಕೆ ಕಾಮಗಾರಿ ಪೂರ್ಣಗೊಂಡಂತೆ ಕಂಡರೂ ಕಟ್ಟಡದಲ್ಲಿ ಮುಳ್ಳು, ಕಸ, ಕಡ್ಡಿ ತುಂಬಿಕೊಂಡಿದೆ.

ಉದ್ಘಾಟನೆಗೊಂಡು ಎರಡು ವರ್ಷ ಕಳೆದರೂ ಬಾಗಿಲು ತೆರೆಯದೆ ಪ್ರವಾಸಿ ಮಂದಿರ ಕಟ್ಟಡ ಹಾಳಾಗಿ ಹೋಗುತ್ತಿದೆ. ಭೂತ ಬಂಗಲೆಯಾಗಿ ಪರಿವರ್ತನೆಯಾಗಿದೆ. ಅಲ್ಲಿ ಕುಡುಕರ ಹಾವಳಿ ಹೆಚ್ಚಾಗಿದೆ. ಅನೈತಿಕ ಚಟುವಟಿಕೆಗಳ ತಾಣವಾಗಿ
ಪರಿವರ್ತನೆಯಾಗಿದೆ.

ಬ್ರಿಟೀಷರ ಕಾಲದ ಪ್ರವಾಸಿ ಮಂದಿರ ಹಳೆಯದಾಗಿದ್ದರ ಪರಿಣಾಮ ಸೋಲಾರ್‌, ಮಂಚ, ಫರ್ನಿಚರ್‌ ಹೀಗೆ ಒಂದೂವರೆ ಕೋಟಿ ರೂ. ಸರ್ಕಾರದ ಅನುದಾನ ಬಳಸಿ ನೂತನ ಪ್ರವಾಸಿ ಮಂದಿರ ನಿರ್ಮಿಸಲಾಗಿದೆ. ಸಂಬಂಧಿಸಿದ ಪಿಡಬ್ಲೂಡಿ ಅಧಿಕಾರಿಗಳನ್ನು ಕೇಳಿದರೆ ಸರ್ಕಾರದಲ್ಲಿ ದುಡ್ಡಿಲ್ಲ. ಗುತ್ತಿಗೆದಾರನಿಗೆ ಬಿಲ್‌ ಜಮಾ ಆಗಿಲ್ಲ. ಸ್ವಲ್ಪ ತಡೀರಿ ಎಂದು ಕುಂಟು ನೆಪ ಹೇಳುತ್ತ ಕಾಲದೂಡುತ್ತಿದ್ದಾರೆ. ಮೇಲಾಧಿಕಾರಿಗಳು, ಜನಪ್ರತಿನಿಧಿಗಳು ಕ್ರಮ ಕೈಗೊಂಡು ಪಾಳುಬಿದ್ದ ನೂತನ ಪ್ರವಾಸಿ ಮಂದಿರ
ತೆರೆದು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಿದೆ.

ಕಟ್ಟಡ ಪೂರ್ಣ ಮುಗಿಸಿದ್ದೇನೆ. ನನಗೆ ಸರ್ಕಾರದಿಂದ ಫೇಮೆಂಟ್‌ (ಬಿಲ್‌)ಆಗಿಲ್ಲ. ಈಗಾಗಲೇ ಈ ಬಿಲ್ಡಿಂಗ್‌ನ ತಾತ್ಕಾಲಿಕ ವಿದ್ಯುತ್‌ ಬಿಲ್‌ ತಿಂಗಳಿಗೊಮ್ಮೆ ನಾನೇ ತುಂಬುತ್ತಿದ್ದೇನೆ. ಈ ತಿಂಗಳಲ್ಲಿ ಬಿಲ್‌ ಬರಬಹುದು. ಕಾದು ನೋಡುತ್ತೇನೆ.
ಸುರೇಶ ತಿರಕನ್ನವರ, ಗುತ್ತಿಗೆದಾರ

ಗುತ್ತಿಗೆದಾರನಿಗೆ ಬಿಲ್‌ ಬಾಕಿ ಇದೆಯಂತೆ. ಪೂರ್ಣ ಫೇಮಂಟ್‌ ಆಗಿಲ್ವಂತೆ. ಅದಕ್ಕೆ ನೂತನ ಪ್ರವಾಸಿ ಮಂದಿರದ ಬೀಗ ತೆರೆದಿಲ್ವಂತೆ. ಸದ್ಯದಲ್ಲೇ ಕಾಮಗಾರಿ ಪೂರ್ಣಗೊಳಿಸುತ್ತೇವೆ.
ಎಂ.ಆರ್‌. ಚಿತ್ತರಗಿ, ಸೆಕ್ಷೆನ್‌ ಆಫೀಸರ್‌.

ಮಹಾಂತಯ್ಯ ಹಿರೇಮಠ

ಟಾಪ್ ನ್ಯೂಸ್

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

3-mahalingapur

Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

3 students of Indian origin passed away in Georgia

Georgia ಕಾರು ಅಪಘಾತ: ಭಾರತ ಮೂಲದ 3 ವಿದ್ಯಾರ್ಥಿಗಳ ಸಾವು

ಎನ್‌ಇಪಿ ರದ್ದು, ರಾಜಕೀಯ ಪ್ರೇರಿತ: ಬೊಮ್ಮಾಯಿ

Bidar; ಎನ್‌ಇಪಿ ರದ್ದು ರಾಜಕೀಯ ಪ್ರೇರಿತ: ಬೊಮ್ಮಾಯಿ

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.