Mysore; ವರುಣ ಕ್ಷೇತ್ರದಲ್ಲೇ ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯಗೆ ಘೇರಾವ್
Team Udayavani, Mar 8, 2024, 10:33 AM IST
ಮೈಸೂರು: ವರುಣ ಕ್ಷೇತ್ರದ ಮಾಜಿ ಶಾಸಕ, ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ವಕ್ಷೇತ್ರದಲ್ಲೇ ಜನರು ಘೇರಾವ್ ಹಾಕಿದ ಪ್ರಸಂಗ ನಡೆದಿದೆ.
ವರುಣ ಕ್ಷೇತ್ರ ವ್ಯಾಪ್ತಿಯ ಮುದ್ದುಬೀರನಹುಂಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಒಳಗೆ ಪ್ರವೇಶಿಸದಂತೆ ಗ್ರಾಮಸ್ಥರು ತಡೆದಿದ್ದಾರೆ. ಯತೀಂದ್ರ ಅವರು ಕುಂದುಕೊರತೆ ಸಭೆ ನಡೆಸಲು ತೆರಳಿದ್ದ ವೇಳೆ ಈ ಪ್ರಸಂಗ ನಡೆದಿದೆ.
ಗ್ರಾಮದ ಅಭಿವೃದ್ಧಿ ವಿಚಾರಕ್ಕೆ ಗರಂ ಆಗಿರುವ ಗ್ರಾಮಸ್ಥರು ಡಾ.ಯತೀಂದ್ರ ಸಿದ್ದರಾಮಯ್ಯ ಎಳೆದಾಡಿದ್ದಾರೆ. ಪೊಲೀಸರ ಮಾತಿಗೂ ಬಗ್ಗದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸುವಂತೆ ಗ್ರಾಮಸ್ಥರ ಒತ್ತಾಯಿಸಿದ್ದಾರೆ. ಇದೇ ವಿಚಾರಕ್ಕೆ ಯತೀಂದ್ರ ಸಿದ್ದರಾಮಯ್ಯ ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ.