Foreign ವಿವಿಗಳ ಕ್ಯಾಂಪಸ್‌ನತ್ತ ಸರ್ಕಾರದ ನಿರಾಸಕ್ತಿ

ಕರ್ನಾಟಕದ ವಿಶ್ವವಿದ್ಯಾಲಯಗಳ ಜತೆ ಸಹಭಾಗಿತ್ವ ಸ್ಥಾಪಿಸಲು ರಾಜ್ಯ ಸರ್ಕಾರ‌ ಉತ್ಸುಕ

Team Udayavani, Mar 9, 2024, 6:45 AM IST

ವಿದೇಶಿ ವಿವಿಗಳ ಕ್ಯಾಂಪಸ್‌ನತ್ತ ಸರ್ಕಾರದ ನಿರಾಸಕ್ತಿ

ಬೆಂಗಳೂರು: ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಭಾರತದಲ್ಲಿ ವಿದೇಶಿ ವಿವಿಗಳು ತಮ್ಮ ಕ್ಯಾಂಪಸ್‌ ತೆರೆಯಲು ಅವಕಾಶ ಕಲ್ಪಿಸಿದ್ದರೂ ರಾಜ್ಯ ಸರ್ಕಾರ ರಾಜ್ಯದಲ್ಲಿ ವಿದೇಶಿ ವಿವಿಗಳನ್ನು ಸ್ವಾಗತಿಸಲು ಹೆಚ್ಚಿನ ಆಸಕ್ತಿ ಹೊಂದಿಲ್ಲ.

ವಿದೇಶಿ ವಿವಿಗಳು ರಾಜ್ಯದಲ್ಲಿ ತಮ್ಮ ಪ್ರತ್ಯೇಕ ಕ್ಯಾಂಪಸ್‌ ತೆರೆಯುವುದರ ಬದಲಾಗಿ ನಮ್ಮಲ್ಲಿ ಈಗಿರುವ ವಿವಿಗಳ ಜೊತೆ ಸಹಭಾಗಿತ್ವ ತೋರಿ ಕೆಲಸ ನಿರ್ವಹಿಸಿದರೆ ಉತ್ತಮ ಎಂಬುದು ರಾಜ್ಯ ಸರ್ಕಾರದ ಅಭಿಪ್ರಾಯ.

ವಿದೇಶಿ ವಿವಿಗಳಿಗೆ ಪ್ರವೇಶ ಕಲ್ಪಿಸಬೇಕು ಎಂದು ದಶಕಗಳಿಂದ ಚರ್ಚೆ ನಡೆಯುತ್ತಿತ್ತು. 2023ರ ಕೊನೆಯ ಭಾಗದಲ್ಲಿ “ಭಾರತದಲ್ಲಿ ವಿದೇಶಿ ಉನ್ನತ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್‌ಗಳ ಸ್ಥಾಪನೆ ಮತ್ತು ಕಾರ್ಯಾಚರಣೆ ನಿಯಂತ್ರಣ’ ನಿಯಮವನ್ನು ಯುಜಿಸಿ ಪ್ರಕಟಿಸಿ ವಿದೇಶಿ ವಿವಿಗಳಿಗೆ ಭಾರತದಲ್ಲಿ ತಮ್ಮ ಕ್ಯಾಂಪಸ್‌ ತೆರೆಯಲು ಅವಕಾಶ ನೀಡಿತ್ತು.

ಜಾಗತಿಕ ಶ್ರೇಯಾಂಕದಲ್ಲಿ ಒಟ್ಟಾರೆ ಅಗ್ರ 500ರೊಳಗಿರುವ ವಿವಿಗಳು ಮತ್ತು ಯಾವುದಾರೂ ವಿಷಯದಲ್ಲಿ ಜಾಗತಿಕವಾಗಿ ಅಗ್ರ 500ರ ಶ್ರೇಯಾಂಕದೊಳಗೆ ಬರುವ ವಿವಿಗಳು ಆ ವಿಷಯಕ್ಕೆ ಸಂಬಂಧಿಸಿದ ಕ್ಯಾಂಪಸ್‌ ಭಾರತದಲ್ಲಿ ತೆರೆಯಲು ಯುಜಿಸಿ ತನ್ನ ನಿಯಮಗಳ ಪ್ರಕಾರ ಅವಕಾಶ ಕಲ್ಪಿಸಿದೆ.ಯುಜಿಸಿಯಿಂದ ಹಸಿರು ನಿಶಾನೆ ಸಿಗುತ್ತಿದ್ದಂತೆ ಶಿಕ್ಷಣ ಕ್ಷೇತ್ರದಲ್ಲಿ ದೇಶದಲ್ಲೇ ಮುಂಚೂಣಿ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕದಲ್ಲಿ ತಮ್ಮ ಕ್ಯಾಂಪಸ್‌ ತೆರೆಯಲು ಹಲವು ವಿದೇಶಿ ವಿವಿಗಳು ಆಸಕ್ತಿ ತೋರಿವೆ ಎಂದು ಉನ್ನತ ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

ಆದರೆ ರಾಜ್ಯ ಸರ್ಕಾರವು ವಿದೇಶಿ ವಿವಿಗಳು ಭಾರತದಲ್ಲಿ ಕ್ಯಾಂಪಸ್‌ ತೆರೆಯುವುದಕ್ಕಿಂತ ಹೆಚ್ಚಾಗಿ ನಮ್ಮ ವಿವಿಗಳ ಜತೆ ಸಹಭಾಗಿತ್ವ ತೋರಲಿ ಎಂದು ಬಯಸುತ್ತಿದೆ. ರಾಜ್ಯದಲ್ಲಿ ಸಾಕಷ್ಟು ವಿವಿಗಳಿದ್ದು ಈ ವಿವಿಗಳ ಜತೆ ಒಪ್ಪಂದ ಮಾಡಿಕೊಂಡು ಶಿಕ್ಷಣ, ಕೌಶಲ್ಯ ನೀಡಬಹುದು, ವಿದ್ಯಾರ್ಥಿ ವಿನಿಮಯ ಚಟುವಟಿಕೆ ನಡೆಸಬಹುದು ಎಂಬುದು ರಾಜ್ಯ ಸರ್ಕಾರದ ಅಭಿಪ್ರಾಯ.

ರಾಜ್ಯದಲ್ಲಿ ಸರ್ಕಾರಿ, ಖಾಸಗಿ, ಡೀಮ್ಡ್, ಕೇಂದ್ರಿಯ ವಿವಿಗಳಿವೆ. ಮತ್ತೆ ವಿದೇಶಿ ವಿವಿಗಳಿಗೆ ಅವಕಾಶ ನೀಡುವುದಕ್ಕಿಂತ ಇರುವ ವಿವಿಗಳನ್ನೇ ಸದೃಢಗೊಳಿಸುವುದು ರಾಜ್ಯದ ಶೈಕ್ಷಣಿಕ ಹಿತದೃಷ್ಟಿಯಿಂದ ಉತ್ತಮ ಎಂಬ ಅಭಿಪ್ರಾಯ ರಾಜ್ಯ ಸರ್ಕಾರದ್ದು.

ಈ ಹಿನ್ನೆಲೆಯಲ್ಲಿ ನ್ಯೂಜಿಲೆಂಡ್‌ನ‌ ಎಂಟು ವಿವಿಗಳು ರಾಜ್ಯದ ಹತ್ತು ವಿವಿಗಳ ಜತೆ ಸಹಭಾಗೀದಾರಿಕೆ ಒಪ್ಪಂದ ನಡೆಸುವಂತೆ ಉನ್ನತ ಶಿಕ್ಷಣ ಇಲಾಖೆ ಹೆಚ್ಚಿನ ಮುತುವರ್ಜಿ ವಹಿಸಿತ್ತು.

ಯಾವ್ಯಾವ ವಿವಿ ಆಸಕ್ತಿ?
ಆಸ್ಟ್ರೇಲಿಯಾದ ವೆಸ್ಟರ್ನ್ ಸಿಡ್ನಿ ವಿಶ್ವವಿದ್ಯಾಲಯ ಬೆಂಗಳೂರಿನಲ್ಲಿ ಕೃಷಿ ವಿಜ್ಞಾನಕ್ಕೆ ಮೀಸಲಾದ ಶಿಕ್ಷಣ ಸಂಸ್ಥೆ ಆರಂಭಿಸಲು ಉತ್ಸುಕವಾಗಿದೆ. ಉನ್ನತ ಶಿಕ್ಷಣ ಇಲಾಖೆ ಜತೆ ಒಂದು ಸುತ್ತಿನ ಮಾತುಕತೆಯು ನಡೆಸಿದ್ದು ಬೆಂಗಳೂರಿನಲ್ಲಿ ತನ್ನ ಕ್ಯಾಂಪಸ್‌ ತೆರೆಯಲು ಐದು ಎಕರೆ ಜಾಗಕ್ಕೆ ಅದು ಹುಡುಕುತ್ತಿದೆ. ಲೆಕ್ಕಚಾರ ಫ‌ಲಿಸಿದರೆ 2025ಕ್ಕೆ ಮೊದಲ ಬ್ಯಾಚ್‌ ಆರಂಭವಾಗಲಿದೆ. ಇದರ ಜತೆಗೆ ಆಸ್ಟ್ರೇಲಿಯದ ಜೇಮ್ಸ್‌ ಕುಕ್‌ ವಿವಿ, ಗ್ರಿಫಿತ್‌ ವಿವಿ, ಕ್ಯಾನ್‌ಬೆರಾ ವಿವಿ, ಲಾ ಟ್ರೊಬೆ ವಿವಿ ಮತ್ತು ಫ್ಲಿಂಡರ್ ವಿವಿಗಳು ಒಕ್ಕೂಟವೊಂದನ್ನು ರೂಪಿಸಿಕೊಂಡು ಭಾರತದಲ್ಲಿ ತಮ್ಮ ಕ್ಯಾಂಪಸ್‌ ತೆರೆಯುವ ಒಲವು ವ್ಯಕ್ತಪಡಿಸಿದ್ದು ರಾಜ್ಯದತ್ತ ಹೆಚ್ಚಿನ ಆಸಕ್ತಿ ತೋರಿವೆ ಎಂದು ತಿಳಿದು ಬಂದಿದೆ.

ವಿದೇಶಿ ವಿವಿಗಳು ತಮ್ಮದೆ ಪ್ರತ್ಯೇಕ ವಿವಿ ತೆರೆಯುವುದಕ್ಕಿಂತ ನಮ್ಮಲ್ಲಿರುವ ವಿವಿಗಳ ಜೊತೆ ಕೈಜೋಡಿಸಲು ನಾವು ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ.
–ಡಾ. ಎಂ. ಸಿ. ಸುಧಾಕರ್‌, ಉನ್ನತ ಶಿಕ್ಷಣ ಸಚಿವ

-ರಾಕೇಶ್‌ ಎನ್‌.ಎಸ್‌.

ಟಾಪ್ ನ್ಯೂಸ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

Actor Darshan; ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

3-kunigal

Kunigal: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್ಐ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

kar49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

JDS MP ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ; ಪಕ್ಷದ ವಿರುದ್ಧವೇ ಸಡ್ಡು ಹೊಡೆದು ಸ್ಪರ್ಧೆ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

4-kushtagi

Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

Actor Darshan; ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.