Belagavi Lok Sabha constituency; ಮರಾಠಾ, ಲಿಂಗಾಯತರು ಕೈ ಹಿಡಿದವರಿಗೆ ಇಲ್ಲಿ ಗೆಲುವು

ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಕ್ಷೇತ್ರದಲ್ಲಿ ಈಚೆಗೆ ಬಿಜೆಪಿ ಹವಾ; 11 ಸಲ ಕಾಂಗ್ರೆಸ್‌ ಗೆದ್ದಿದ್ದರೆ, 6 ಸಲ ಬಿಜೆಪಿ ಗೆಲುವು

Team Udayavani, Mar 10, 2024, 8:00 AM IST

Belagavi Lok Sabha constituency; ಮರಾಠಾ, ಲಿಂಗಾಯತರು ಕೈ ಹಿಡಿದವರಿಗೆ ಇಲ್ಲಿ ಗೆಲುವು

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರ ರಾಜಕೀಯವಾಗಿ ಸದಾ ಬಹಳ ದೊಡ್ಡ ಸುದ್ದಿ ಮಾಡುತ್ತ ಬಂದಿರುವ ಕ್ಷೇತ್ರ. ರಾಜ್ಯ ರಾಜಕೀಯದ ಮೇಲೆ ಪರಿಣಾಮ ಬೀರುವಂಥ ಪ್ರಭಾವಿ ರಾಜಕಾರಣಿಗಳ ತವರೂರಾಗಿರುವ ಬೆಳಗಾವಿಗೆ ಸರ್ಕಾರವನ್ನು ಉಳಿಸುವ ಮತ್ತು ಉರುಳಿಸುವ ಎರಡೂ ಶಕ್ತಿ ಇದೆ.

ಬೆಳಗಾವಿ ಲೋಕಸಭಾ ಕ್ಷೇತ್ರವು ಬೆಳಗಾವಿ ಉತ್ತರ, ಬೆಳಗಾವಿ ಗ್ರಾಮೀಣ, ಬೆಳಗಾವಿ ದಕ್ಷಿಣ, ಅರಭಾವಿ, ಗೋಕಾಕ, ಸವದತ್ತಿ, ರಾಮದುರ್ಗ ಮತ್ತು ಬೈಲಹೊಂಗಲ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯನ್ನು ಹೊಂದಿದೆ. ಈಗ ಕಾಂಗ್ರೆಸ್‌ ಐದು ಕ್ಷೇತ್ರಗಳಲ್ಲಿ ತನ್ನ ಶಾಸಕರನ್ನು ಹೊಂದಿದ್ದರೆ, ಬಿಜೆಪಿ ಮೂರು ಕ್ಷೇತ್ರಗಳ ಮೇಲೆ ಹಿಡಿತ ಸಾಧಿಸಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಆರು ಕ್ಷೇತ್ರಗಳನ್ನು ತನ್ನ ವಶದಲ್ಲಿಟ್ಟುಕೊಂಡಿದ್ದರೆ, ಕಾಂಗ್ರೆಸ್‌ ಬೈಲಹೊಂಗಲ ಮತ್ತು ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೇಲೆ ಹಿಡಿತ ಹೊಂದಿತ್ತು.

1957ರಿಂದ ಇದುವರೆಗೆ ಎರಡು ಉಪಚುನಾವಣೆ ಸೇರಿ ಒಟ್ಟು 18 ಸಾರ್ವತ್ರಿಕ ಚುನಾವಣೆಗಳನ್ನು ಕಂಡಿರುವ ಬೆಳಗಾವಿ ಕ್ಷೇತ್ರ ಒಂದು ಕಾಲದಲ್ಲಿ ಕಾಂಗ್ರೆಸ್‌ ಭದ್ರಕೋಟೆ. ಆದರೆ ಈಗ ಕಾಲ ಬದಲಾಗಿದೆ. ಕಾಂಗ್ರೆಸ್‌ ಕೋಟೆ ಬಿಜೆಪಿ ವಶವಾಗಿದೆ. 1957ರಿಂದ 2019ರವರೆಗೆ ನಡೆದಿರುವ ಚುನಾವಣೆಗಳಲ್ಲಿ ಕಾಂಗ್ರೆಸ್‌ 11 ಬಾರಿ, ಜನತಾದಳ ಒಂದು ಹಾಗೂ ಬಿಜೆಪಿ ಆರು ಬಾರಿ ಜಯ ಗಳಿಸಿವೆ. ಕಾಂಗ್ರೆಸ್‌ ಪಕ್ಷದ 11 ಗೆಲುವಿನಲ್ಲಿ ಜಗಜೀವನ ರಾಂ ಗುಂಪಿನ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಸೇರಿದೆ. 1971ರಲ್ಲಿ ನಡೆದ ಚುನಾವಣೆಯಲ್ಲಿ ಎ.ಕೆ.ಕೊಟ್ರಶೆಟ್ಟಿ ಈ ಪಕ್ಷದಿಂದ ಜಯ ಗಳಿಸಿದ್ದರು.

1991ರ ಚುನಾವಣೆ ನಂತರ ಬೆಳಗಾವಿ ಲೋಕಸಭಾ ಕ್ಷೇತ್ರದ ಚಿತ್ರ ಬದಲಾಯಿತು. 1980ರಿಂದ ಸತತ ನಾಲ್ಕು ಬಾರಿ ಕಾಂಗ್ರೆಸ್‌ನಿಂದ ಗೆದ್ದಿದ್ದ ಎಸ್‌.ಬಿ.ಸಿದ್ನಾಳ ನಂತರ ತೆರೆಮರೆಗೆ ಸರಿದರು. ಕಾಂಗ್ರೆಸ್‌ ಪಕ್ಷದವರೇ ಮಾಡಿದ ಪಿತೂರಿಯಿಂದ ಈ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿ ಬದಲಾಯಿತು.

ಕಾಂಗ್ರೆಸ್‌ನಲ್ಲಿನ ಒಳಜಗಳದ ಲಾಭ ಪಡೆದ ಸಂಸದ ಸುರೇಶ ಅಂಗಡಿ 2004ರಿಂದ ಸತತ ನಾಲ್ಕು ಚುನಾವಣೆಯಲ್ಲಿ ಸುಲಭ ಜಯ ಪಡೆದು ಸಿದ್ನಾಳ ಅವರ ದಾಖಲೆ ಸರಿಗಟ್ಟಿದರು.ಸುರೇಶ ಅಂಗಡಿ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದ ಅವರ ಪತ್ನಿ ಮಂಗಲಾ ಅಂಗಡಿ ಈ ಕ್ಷೇತ್ರ ಬಿಜೆಪಿ ಹಿಡಿತ ತಪ್ಪಿಹೋಗದಂತೆ ಕಾಪಾಡಿಕೊಂಡರು.ಇದುವರೆಗೆ 14 ಬಾರಿ ಲಿಂಗಾಯತ ಸಮುದಾಯದ ಅಭ್ಯರ್ಥಿಯೇ ಆಯ್ಕೆಯಾಗಿರುವುದು ಗಮನಿಸಬೇಕಾದ ಅಂಶ.

ಜಾತಿ ಲೆಕ್ಕಾಚಾರ
ಒಟ್ಟು 18 ಲಕ್ಷ ಮತದಾರರ ಪೈಕಿ ಸುಮಾರು ಎಂಟು ಲಕ್ಷ ಮತದಾರರಿರುವ ಲಿಂಗಾಯತ ಸಮಾಜವೇ ನಿರ್ಣಾಯಕ. ಹಿಂದಿನ ಚುನಾವಣೆಗಳನ್ನು ಗಮನಿಸಿದರೆ ಮರಾಠಾ ಸಮಾಜ ಮತ್ತು ಲಿಂಗಾಯತ ಮತದಾರರು ಬಿಜೆಪಿ ಕೈಹಿಡಿದಿದ್ದರು. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತ ಸಮಾಜ ಕಾಂಗ್ರೆಸ್‌ ಕಡೆ ಒಲವು ತೋರಿಸಿರುವುದು ಬಿಜೆಪಿಗೆ ಆತಂಕ ಉಂಟು ಮಾಡಿರುವದು ಸುಳ್ಳಲ್ಲ. ಲೋಕಸಭೆ ಚುನಾವಣೆಯೇ ಬೇರೆ. ವಿಧಾನಸಭೆ ಚುನಾವಣೆಯೇ ಬೇರೆ ಎಂಬ ಲೆಕ್ಕಾಚಾರದಲ್ಲಿರುವ ಬಿಜೆಪಿ ಲಿಂಗಾಯತರು ತಮ್ಮ ಪರ ನಿಲ್ಲಲಿದ್ದಾರೆ ಎಂಬ ಅಚಲ ವಿಶ್ವಾಸ ಹೊಂದಿದ್ದಾರೆ. ಲೋಕಸಭೆ ಚುನಾವಣೆಯಲ್ಲೂ ಲಿಂಗಾಯಿತ ಸಮಾಜ ತನ್ನ ಪರವಾಗಿ ನಿಲ್ಲಲಿದೆ ಎಂಬ ಬಲವಾದ ವಿಶ್ವಾಸ ಕಾಂಗ್ರೆಸ್‌ ನಾಯಕರಲ್ಲಿದೆ.

ಹಾಲಿ ಸಂಸದೆ:
ಮಂಗಲಾ ಸುರೇಶ ಅಂಗಡಿ (ಬಿಜೆಪಿ) 4,40,327.
ಸತೀಶ ಜಾರಕಿಹೊಳಿ (ಕಾಂಗ್ರೆಸ್‌) 4,35,087.
ಮತಗಳ ಅಂತರ: 5240.

2019ರ ಮತದಾರರ ಸಂಖ್ಯೆ
ಒಟ್ಟು ಮತದಾರರು: 18,13,538
ಪುರುಷರು: 9,11,025
ಮಹಿಳೆಯರು: 9,02,455
ಇತರೆ: 58

2024ರ ಮತದಾರರ ಸಂಖ್ಯೆ
ಒಟ್ಟು ಮತದಾರರು: 18,91, 409
ಪುರುಷರು: 9,42,854
ಮಹಿಳೆಯರು: 9,48472
ಇತರೆ: 83

-ಕೇಶವ ಆದಿ

ಟಾಪ್ ನ್ಯೂಸ್

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ: ಶೆಟ್ಟರ್

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ: ಶೆಟ್ಟರ್

Belagavi; ಬಿರು ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ

Belagavi; ಬಿರು ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ

ಸರಳತೆ-ಸಮಾನತೆಯ ಸಮಾಜ ನಿರ್ಮಿಸೋಣ: ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ

ಸರಳತೆ-ಸಮಾನತೆಯ ಸಮಾಜ ನಿರ್ಮಿಸೋಣ: ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ

ಕಣಬರ್ಗಿ ರಸ್ತೆ ಪೂರ್ಣ ಆಗೋದು ಯಾವಾಗ? ಸಾರ್ವಜನಿಕರ ಆಕ್ರೋಶ

ಕಣಬರ್ಗಿ ರಸ್ತೆ ಪೂರ್ಣ ಆಗೋದು ಯಾವಾಗ? ಸಾರ್ವಜನಿಕರ ಆಕ್ರೋಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

1-qeqwqew

Gundlupete: ಕೊಳೆತ ಸ್ಥಿತಿಯಲ್ಲಿ ಹುಲಿಯ ಮೃತ ದೇಹ ಪತ್ತೆ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.